Webdunia - Bharat's app for daily news and videos

Install App

ನಮ್ಮ ಸರ್ಕಾರ ಇರುವವರೆಗೂ ಸಿದ್ದರಾಮಯ್ಯನೇ ಸಿಎಂ: ಉಲ್ಟಾ ಹೊಡೆದ ಆರ್ ವಿ ದೇಶಪಾಂಡೆ

Krishnaveni K
ಮಂಗಳವಾರ, 10 ಸೆಪ್ಟಂಬರ್ 2024 (17:39 IST)
ಬೆಂಗಳೂರು: ಕಾಂಗ್ರೆಸ್ ನಲ್ಲಿ ಸಿಎಂ ಕುರ್ಚಿಗಾಗಿ ತೆರೆಮರೆಯಲ್ಲೇ ಫೈಟ್ ನಡೆಯುತ್ತಿರುವ ಬೆನ್ನಲ್ಲೇ ಹಿರಿಯ ನಾಯಕ ಆರ್ ವಿ ದೇಶಪಾಂಡೆ ಸರ್ಕಾರ ಇರುವವರೆಗೂ ಸಿದ್ದುನೇ ಸಿಎಂ ಎಂದಿದ್ದಾರೆ.

ಸಿಎಂ ಸಿದ್ದರಾಮಯ್ಯ ವಿರುದ್ಧ ಮುಡಾ ಹಗರಣ ಕಂಟಕ ಎದುರಾದ ಬೆನ್ನಲ್ಲೇ ಕಾಂಗ್ರೆಸ್ ನ ಕೆಲವು ನಾಯಕರು ಸಿಎಂ ಬದಲಾವಣೆಗೆ ಕಸರತ್ತು ಆರಂಭಿಸಿದ್ದಾರೆ. ಈ ಬಗ್ಗೆ ಬಹಿರಂಗ ಹೇಳಿಕೆ ನೀಡದಂತೆ ಹೈಕಮಾಂಡ್ ನಿಂದ ಆದೇಶ ಬಂದರೂ ಕ್ಯಾರೇ ಎನ್ನದೇ ನಾಯಕರು ತಮ್ಮ ಪಾಡಿಗೆ ತಾವಿದ್ದಾರೆ.

ಈ ನಡುವೆ ಸಿಎಂ ಸ್ಥಾನಕ್ಕೆ ಟವೆಲ್ ಹಾಕಿಕೊಂಡಿರುವ ಅನೇಕ ನಾಯಕರು ಒಳಗೊಳಗೇ ತಮ್ಮ ಪ್ರಯತ್ನ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ. ಇದಕ್ಕಾಗಿ ಒಳಗೊಳಗೇ ರಹಸ್ಯ ಸಭೆಗಳು ನಡೆಯುತ್ತಿವೆ. ಇತ್ತೀಚೆಗೆ ಹಿರಿಯ ನಾಯಕ ಆರ್ ವಿ ದೇಶಪಾಂಡೆ ಕೂಡಾ ನನಗೆ ಸಿಎಂ ಆಗುವ ಆಸೆಯಿದೆ ಎಂದಿದ್ದರು.

ಆದರೆ ಈಗ ಹೈಕಮಾಂಡ್ ನಿಂದ ಎಚ್ಚರಿಕೆ ಬಂದ ಬೆನ್ನಲ್ಲೇ ದೇಶಪಾಂಡೆ ಉಲ್ಟಾ ಹೊಡೆದಿದ್ದಾರೆ. ನಮ್ಮಲ್ಲಿ ಸಿಎಂ ಸ್ಥಾನ ಖಾಲಿಯಿಲ್ಲ. ನಮ್ಮಸರ್ಕಾರ ಇರುವವರೆಗೂ ಸಿದ್ದರಾಮಯ್ಯನೇ ಸಿಎಂ ಆಗಿರುತ್ತಾರೆ. ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ ಎಂದಿದ್ದಾರೆ. ಆ ಮೂಲಕ ಸಿಎಂ ಬದಲಾವಣೆ ಕುರಿತು ತಮ್ಮ ಹೇಳಿಕೆಯಿಂದ ಹಿಂದೆ ಸರಿದಂತೆ ಕಾಣುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments