Webdunia - Bharat's app for daily news and videos

Install App

ಪಂಚ ಗ್ಯಾರಂಟಿಯಿಂದ ಅಭಿವೃದ್ಧಿಯಾಗುತ್ತಿಲ್ಲ, ನಾನು ಸಿಎಂ ಆಗಿದ್ರೆ ಜಾರಿಗೆ ತರುತ್ತಿರಲಿಲ್ಲ: ಆರ್ ವಿ ದೇಶಪಾಂಡೆ

Krishnaveni K
ಸೋಮವಾರ, 13 ಅಕ್ಟೋಬರ್ 2025 (11:08 IST)
ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳ ಬಗ್ಗೆಯೇ ಸಚಿವ ಆರ್ ವಿ ದೇಶಪಾಂಡೆ ಟೀಕಿಸಿದ್ದಾರೆ. ನಾನು ಮುಖ್ಯಮಂತ್ರಿಯಾಗಿದ್ದರೆ ಐದು ಗ್ಯಾರಂಟಿ ಯೋಜನೆ ಜಾರಿಗೆ ತರುತ್ತಿರಲಿಲ್ಲ ಎಂದಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯಲ್ಲಿ ವೋಟ್ ಚೋರಿ ವಿರುದ್ಧ ಸಹಿ ಅಭಿಯಾನ ಕಾರ್ಯಕ್ರಮದಲ್ಲಿ ಮಾತನಾಡಿರುವ ಅವರು ರಾಜ್ಯದಲ್ಲಿ ಗ್ಯಾರಂಟಿ ಯೋಜನೆಯಿಂದ ಆರ್ಥಿಕ ಹೊರೆಯಾಗಿದೆ. ಇದರಿಂದ ಅಭಿವೃದ್ಧಿ ಕೆಲಸಗಳಾಗುತ್ತಿಲ್ಲ ಎಂದಿದ್ದಾರೆ.

ಒಂದು ಕಡೆ ಗ್ಯಾರಂಟಿ ಯೋಜನೆಯಿಂದ ಜನರಿಗೆ ಅನುಕೂಲವಾಗಿದ್ದರೆ ಇನ್ನೊಂದು ಕಡೆ ಸರ್ಕಾರ ನಡೆಸುವುದು ಕಷ್ಟವಾಗಿದೆ. ನಾನು ಸಿಎಂ ಆಗಿದ್ದಿದ್ದರೆ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರುತ್ತಿರಲಿಲ್ಲ ಎಂದಿದ್ದಾರೆ.

ಗ್ಯಾರಂಟಿ ಯೋಜನೆಗಳಿಂದ ಮಹಿಳೆಯರು ಮಾತ್ರ ಪ್ರಯೋಜನ ಪಡೆಯುತ್ತಿದ್ದಾರೆ. ಪುರುಷರಿಗೆ ಯಾವುದೇ ಪ್ರಯೋಜನವಿಲ್ಲ. ಗ್ಯಾರಂಟಿಗಳನ್ನು ನಿಭಾಯಿಸಲೇ ಹಲವು ಸಮಿತಿಗಳನ್ನು ಮಾಡಲಾಗಿದೆ ಎಂದಿದ್ದಾರೆ. ಇನ್ನು, ಸಿಎಂ ಇತ್ತೀಚೆಗೆ ಮರುನಾಮಕರಣ ಮಾಡಿರುವ ಇಂದಿರಾ ಕಿಟ್ ಬಗ್ಗೆಯೂ ಟೀಕಿಸಿದ್ದಾರೆ. ಸಿಎಂ ಇಂದಿರಾ ಕಿಟ್ ಕೊಡ್ತಿದ್ದಾರೋ ತೆಂಗಿನ ಕಾಯಿ ಕೊಡ್ತಾರೋ ನಮಗೇ ಗೊತ್ತಿಲ್ಲ ಎಂದು ವ್ಯಂಗ್ಯ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಖಾತೆ ಹಂಚಿಕೆ ಬಗ್ಗೆ ಸಚಿವ ಸತೀಶ್ ಜಾರಕಿಹೊಳಿ ಮಹತ್ವದ ಹೇಳಿಕೆ

ಡೇವಿಡ್ ಡಿಸೋಜಾ ಹತ್ಯೆ ಹಿಂದಿನ ರಹಸ್ಯ ಬಿಚ್ಚಿಟ್ಟ ಎಸ್ಪಿ ಹರಿರಾಮ್ ಶಂಕರ್‌

ಜೆಡಿಎಸ್‌ ಪಾದಯಾತ್ರೆ ಅಲ್ಲ, ಕುಮಾರಸ್ವಾಮಿ ಮಾಡಿದ ಪಾಪದ ಪ್ರಾಯಶ್ಚಿತ ಯಾತ್ರೆ: ಸಚಿವ ಬಾಲಕೃಷ್ಣ

ನೈಸ್ ಕಂಪನಿ ಟೋಲ್ ಸಂಗ್ರಹ ಮಾಡುವುದನ್ನು ನಿಲ್ಲಿಸಬೇಕು

ಕರ್ನಾಟಕ ಎಸ್‌ಐಆರ್ ಗಡುವು ಆಗಸ್ಟ್ 17ಕ್ಕೆ ವಿಸ್ತರಣೆ, ಆಗಸ್ಟ್ 24ರಂದು ಕರಡು ಮತದಾರರ ಪಟ್ಟಿ

ಮುಂದಿನ ಸುದ್ದಿ
Show comments