ಯಾವುದೂ ಫ್ರೀ ಕೊಡಬಾರದು, ಎಲ್ಲದಕ್ಕೂ ಶುಲ್ಕ ವಿಧಿಸಬೇಕು, ಉಚಿತ ಗ್ಯಾರಂಟಿ ಡೇಂಜರ್ ಎಂದ ಆರ್ ವಿ ದೇಶಪಾಂಡೆ

Krishnaveni K
ಶನಿವಾರ, 29 ಮಾರ್ಚ್ 2025 (14:14 IST)
ಬೆಂಗಳೂರು: ಗ್ಯಾರಂಟಿ ಯೋಜನೆಗಳ ಮೂಲಕವೇ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಪಕ್ಷದವರೇ ಆದ ಶಾಸಕ ಆರ್ ವಿ ದೇಶಪಾಂಡೆ ಉಚಿತ ಗ್ಯಾರಂಟಿಗಳು ಅಪಾಯಕಾರಿ, ಯಾವುದನ್ನೂ ಉಚಿತವಾಗಿ ಕೊಡಬಾರದು ಎನ್ನುವ ಮೂಲಕ ಹೊಸ ಚರ್ಚೆ ಹುಟ್ಟುಹಾಕಿದ್ದಾರೆ.

ಕರ್ನಾಟಕ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷರೂ ಆಗಿರುವ ಆರ್ ವಿ ದೇಶಪಾಂಡೆ ಉಚಿತ ಯೋಜನೆಗಳು ಅಪಾಯಕಾರಿ ಎಂದಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯಲ್ಲಿ ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಈ ಹೇಳಿಕೆ ನೀಡಿದ್ದಾರೆ.

ಜನರಿಗೆ ಏನನ್ನೂ ಉಚಿತವಾಗಿ ನೀಡಬಾರದು. ಪ್ರತಿಯೊಂದು ಸೇವೆಗೂ ಶುಲ್ಕ ವಿಧಿಸಬೇಕು. ಶಕ್ತಿ ಯೋಜನೆಯಡಿ ಮಹಿಳೆಯರು ಉಚಿತ ಬಸ್ ಪ್ರಯಾಣದ ಸೌಲಭ್ಯ ಪಡೆಯುತ್ತಿದ್ದಾರೆ. ಇದನ್ನು ಪುರುಷರಿಗೂ ವಿಸ್ತರಿಸಬೇಕು ಎಂದು ಬೇಡಿಕೆಯಿತ್ತು. ಆದರೆ ಎಲ್ಲರಿಗೂ ಫ್ರೀ ನೀಡಿದರೆ ಸಾರಿಗೆ ಇಲಾಖೆ ನಡೆಸುವುದು ಹೇಗೆ ಎಂದಿದ್ದಾರೆ. ಅವರ ಈ ಹೇಳಿಕೆ ಈಗ ವಿಪ್ಕ್ಷಗಳಿಗೆ ಅಸ್ತ್ರವಾಗಲಿದೆ. ಈ ಹಿಂದೆ ಉಚಿತ ಯೋಜನೆಗಳ ಬಗ್ಗೆ ಮಾತನಾಡಿದಾಗಲೆಲ್ಲಾ ಕಾಂಗ್ರೆಸ್ ನಾಯಕರು ಜನರ ಕೆಂಗಣ್ಣಿಗೆ ಗುರಿಯಾಗಿದ್ದರು. ಉಚಿತ ಯೋಜನೆಗಳು ಬೊಕ್ಕಸಕ್ಕೆ ಹೊರೆಯಾಗುತ್ತಿದೆ ಎಂಬ ಆರೋಪಗಳಿವೆ. ಆದರೆ ಸದ್ಯಕ್ಕೆ ಬಿಸಿ ತುಪ್ಪ ನುಂಗಲೂ ಆಗದ, ಉಗುಳಲೂ ಆಗದ ಸ್ಥಿತಿ ಕಾಂಗ್ರೆಸ್ ನದ್ದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆರ್ ಎಸ್ಎಸ್ ಗೆ ದಲಿತ ಚಾಲೆಂಜ್ ಹಾಕಿದ ಪ್ರಿಯಾಂಕ್ ಖರ್ಗೆ: ನಿಮ್ಮಲ್ಲಿ ದಲಿತರನ್ನು ಸಿಎಂ ಮಾಡಿ ಎಂದ ಪಬ್ಲಿಕ್

Karnataka Weather: ಈ ಜಿಲ್ಲೆಯವರಿಗೆ ಇಂದು ಭಾರೀ ಮಳೆ

ಇದೇ 22ರಂದು ಶಬರಿಮಲೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ

ಪಿಎಸ್ಐ ಆಗಿ 10ವರ್ಷ ಪೊರೈಸಿದ ಖುಷಿಯಲ್ಲಿ ಮಾಡ್ಬರ್ದು ಮಾಡಿ ಅಮಾನತು ಆದ ಪೋಲಿಸ್ ಅಧಿಕಾರಿ

ಆತ್ಮಹತ್ಯೆಗೆ ಶರಣಾದ ಐಪಿಎಸ್ ಅಧಿಕಾರಿ ಪೂರಣ್ ಕುಮಾರ್ ಪ್ರಕರಣಕ್ಕೆ ಹೊಸ ಟ್ವಿಸ್ಟ್‌

ಮುಂದಿನ ಸುದ್ದಿ
Show comments