Webdunia - Bharat's app for daily news and videos

Install App

ಎಸ್ ಎಂ ಕೃಷ್ಣ ಅಳಿಯ ನಾಪತ್ತೆ ಹಿನ್ನಲೆ; ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದ ಶಾಸಕ ಯು.ಟಿ.ಖಾದರ್

Webdunia
ಮಂಗಳವಾರ, 30 ಜುಲೈ 2019 (10:43 IST)
ಮಂಗಳೂರು : ಮಾಜಿ ವಿದೇಶಾಂಗ ಸಚಿವ ಎಸ್ ಎಂ ಕೃಷ್ಣ ಅಳಿಯ, ಕಾಫಿ ಡೇ ಮಾಲೀಕ ವಿ.ಜಿ ಸಿದ್ದಾರ್ಥ್ ಅವರು ಸೋಮವಾರ ರಾತ್ರಿಯಿಂದ ದಿಢೀರ್ ನಾಪತ್ತೆಯಾಗಿದ್ದಾರೆ.



ಈ ಹಿನ್ನಲೆಯಲ್ಲಿ ಶಾಸಕ ಯು.ಟಿ.ಖಾದರ್ ಅವರು ವಿ.ಜಿ ಸಿದ್ದಾರ್ಥ್ ಅವರು ನಾಪತ್ತೆಯಾದ ಮಂಗಳೂರಿನ ಉಳ್ಳಾಲ ಸಮೀಪದ ನೇತ್ರಾವತಿ ನದಿ ಸೇತುವೆ ಬಳಿ ಭೇಟಿ ನೀಡಿ ಮಾಹಿತಿ ಪಡೆದುಕೊಂಡಿದ್ದಾರೆ.

 

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ಧಾರ್ಥ್ ಅವರು ಈವರೆಗೂ ಸಾವಿರಾರು ಮಂದಿಗೆ ಕೆಲಸ ನೀಡಿದ್ದಾರೆ. ಅವರಿಗೆ ಅಧಿಕಾರ ಇದ್ದರೂ ಯಾವತ್ತೂ ಯಾರ ಮೇಲೂ ದರ್ಪ ತೋರಲಿಲ್ಲ. ನಮಗೆ ಯಾವಾತ್ತಾದರೂ ಸಿಕ್ಕಿದ್ದಾಗ ತುಂಬಾ ಪ್ರೀತಿಯಿಂದ, ಆತ್ಮೀಯತೆಯಿಂದ ಮಾತನಾಡಿಸುತ್ತಿದ್ದರು. ಸಿದ್ಧಾರ್ಥ್ ಅವರು ಇಲ್ಲಿ ಕಾಲು ಜಾರಿ ಬಿದ್ದಿದ್ದಾರಾ ಅಥವಾ ಬೇರೆ ಕಡೆ ಹೋಗಿದ್ದಾರಾ ಎಂಬ ಸ್ಪಷ್ಟ ಮಾಹಿತಿ ಸಿಕ್ಕಿಲ್ಲ. ಸದ್ಯಕ್ಕೆ ಪೊಲೀಸರು ಮತ್ತು ಜಿಲ್ಲಾಧಿಕಾರಿಗಳು ಶೋಧ ಕಾರ್ಯ ನಡೆಸುತ್ತಿದ್ದಾರೆ ಎಂದು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments