Webdunia - Bharat's app for daily news and videos

Install App

ನಾನು ಕಾಂಗ್ರೆಸ್ ಪಕ್ಷ ಸೇರಲು ಎಸ್‌.ಎಂ. ಕೃಷ್ಣ ಕಾರಣ: ಸಚಿವ ರಾಯರೆಡ್ಡಿ

Webdunia
ಶುಕ್ರವಾರ, 3 ಫೆಬ್ರವರಿ 2017 (17:25 IST)
ನಾನು ಕಾಂಗ್ರೆಸ್ ಪಕ್ಷ ಸೇರಲು ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರೇ ಕಾರಣ. ಅವರು ಪಕ್ಷದಲ್ಲಿಯೇ ಮುಂದವರೆಯುವಂತೆ ನಾನು ಕೂಡಾ ಮನವೊಲಿಸುವ ಪ್ರಯತ್ನ ಮಾಡುತ್ತೇನೆ ಎಂದು ಉನ್ನತ ಶಿಕ್ಷಣ ಸಚಿವ ಬಸವರಾಜ್ ರಾಯರೆಡ್ಡಿ ತಿಳಿಸಿದ್ದಾರೆ.
ಕೊಪ್ಪಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷದ ಹಿರಿಯ ಮುಖಂಡ ಕೃಷ್ಣ ಅವರು ಕಾಂಗ್ರೆಸ್ ಪಕ್ಷ ತೊರೆದಿದ್ದಾರೆ. ಪಕ್ಷದಲ್ಲಿಯೇ ಮುಂದುವರೆಯುವಂತೆ ಅವರ ಮನವೊಲಿಸುವ ಪ್ರಯತ್ನ ನಡೆಯುತ್ತಿದೆ ಎಂದರು. 
 
ಪಕ್ಷದಲ್ಲಿ ತಮ್ಮನ್ನು ಕಡೆಗಣಿಸಿದೆ ಎಂದು ಕೃಷ್ಣ ಅವರಿಗೆ ಅನ್ನಿಸಿರಬಹುದು. ಇದರಿಂದ ಮನನೊಂದು ಅವರು ಪಕ್ಷ ತೊರೆದಿದ್ದಾರೆ. ಆದರೆ, ಅವರನ್ನು ಪಕ್ಷದಲ್ಲಿ ಉಳಿಸುವ ಪ್ರಯತ್ನ ನಡೆದಿದೆ. ನಾನು ಕಾಂಗ್ರೆಸ್ ಪಕ್ಷ ಸೇರಲು ಕೃಷ್ಣ ಅವರೇ ಕಾರಣ. ಅವರ ಬಗ್ಗೆ ನನಗೆ ಗೌರವ ಇದೆ ಎಂದರು. 
 
ಹಿರಿಯ ಕಾಂಗ್ರೆಸ್ ಮುಖಂಡರಾದ ಜನಾರ್ದನ ಪೂಜಾರಿ ಹಾಗೂ ಜಾಫರ್ ಷರೀಫ್ ಅವರಿಗೆ ಪಕ್ಷ ಎಲ್ಲವನ್ನು ನೀಡಿದೆ. ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಕುರಿತು ಅನಾಗರಿಕರಂತೆ ಮಾತನಾಡಬಾರದು ಉನ್ನತ ಶಿಕ್ಷಣ ಸಚಿವ ಬಸವರಾಜ್ ರಾಯರೆಡ್ಡಿ ಸಲಹೆ ನೀಡಿದ್ದರು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments