Select Your Language

Notifications

webdunia
webdunia
webdunia
webdunia

ಎಸ್.ಎಂ.ಕೃಷ್ಣ ಬಿಜೆಪಿಗೆ ಸೇರ್ಪಡೆಯಾಗುವುದು ವಿಷಾದಕರ ಸಂಗತಿ: ಖರ್ಗೆ

ಎಸ್.ಎಂ.ಕೃಷ್ಣ ಬಿಜೆಪಿಗೆ ಸೇರ್ಪಡೆಯಾಗುವುದು ವಿಷಾದಕರ ಸಂಗತಿ: ಖರ್ಗೆ
ನವದೆಹಲಿ , ಬುಧವಾರ, 8 ಮಾರ್ಚ್ 2017 (18:41 IST)
ರಾಜಕೀಯ ಜೀವನದಲ್ಲಿ ಉತ್ತಂಗದಲ್ಲಿದ್ದಾಗಲೂ ಸಿದ್ದಾಂತಗಳನ್ನು ಪಾಲಿಸಿಕೊಂಡು ಬಂದಿದ್ದ ಮಾಜಿ ಸಿಎಂ ಎಸ್.ಎಂ.ಕೃಷ್ಣ ಇದೀಗ ಸಿದ್ದಾಂತಗಳನ್ನು ಕಡೆಗೆಣಿಸಿ ಬಿಜೆಪಿಗೆ ಸೇರ್ಪಡೆಯಾಗುತ್ತಿರುವುದು ಅವರ ಘನತೆಗೆ ತಕ್ಕುದಲ್ಲ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ್ ಖರ್ಗೆ ಹೇಳಿದ್ದಾರೆ.
 
ಕೃಷ್ಣ ತಮ್ಮ ರಾಜಕೀಯ ಜೀವನದಲ್ಲಿ ತಪ್ಪು ನಿರ್ಧಾರದತ್ತ ಸಾಗಿದ್ದಾರೆ. ಕಾಂಗ್ರೆಸ್ ಪಕ್ಷ ಅವರಿಗೆ ಮಂತ್ರಿ ಸ್ಥಾನ, ಸಿಎಂ ಹುದ್ದೆ ವಿದೇಶಾಂಗ ಸಚಿವ ಸ್ಥಾನವನ್ನು ನೀಡಿರುವುದನ್ನು ಮರೆಯಬಾರದು ಎಂದು ಸಲಹೆ ನೀಡಿದರು.
 
ಚುನಾವಣೆಗಳು ಹತ್ತಿರ ಬಂದಾಗ ಪಕ್ಷಾಂತರ ಪರ್ವ ನಡೆಯುವುದು ಸಹಜ. ಆದರೆ, ಅದರಿಂದ ಚುನಾವಣೆಯ ಮೇಲೆ ಯಾವುದೇ ರೀತಿಯ ಪ್ರಭಾವ ಬೀರಬಾರದು ಎಂದರು.
 
ಮಾಜಿ ಸಚಿವ ಅಂಬರೀಷ್ ಬಿಜೆಪಿಗೆ ಹೋಗುವುದಿಲ್ಲ. ಅವರಿಗೆ ಅಸಮಾಧಾನವಿದ್ದಲ್ಲಿ ಪಕ್ಷದ ಹೈಕಮಾಂಡ್‌ನೊಂದಿಗೆ ಚರ್ಚಿಸಿ ಪರಿಹಾರ ಕಂಡುಕೊಳ್ಳಬೇಕು. ಅವರ ಸಮಸ್ಯೆಗಳನ್ನು ಪರಿಹರಿಸುವಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ತಿಳಿಸಿದ್ದೇನೆ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

"ಕೈ" ಬಿಟ್ಟು "ಕಮಲ" ಪಕ್ಷ ಸೇರಿದ ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆ