Webdunia - Bharat's app for daily news and videos

Install App

ದಿನೇಶ್ ಗುಂಡೂರಾವ್ ಕುಟುಂಬದ ಭೂಕಬಳಿಕೆ: ರಾಜೀನಾಮೆಗೆ ಆಗ್ರಹ

Webdunia
ಸೋಮವಾರ, 28 ಏಪ್ರಿಲ್ 2014 (16:01 IST)
ಧಾರವಾಡ: ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಸಚಿವ ದಿನೇಶ ಗುಂಡೂರಾವ್ ಹಾಗೂ ಅವರ ಕುಟುಂಬ 720 ಕೋಟಿ ಮೌಲ್ಯದ ಭೂ ಕಬಳಿಕೆಯನ್ನು ಮಾಡಿದೆ ಎಂದು ಸಮಾಜ ಪರಿವರ್ತನ ಸಮುದಾಯದ ಸಂಸ್ಥಾಪಕ ಅಧ್ಯಕ್ಷ ಎಸ್.ಆರ್. ಹಿರೇಮಠ ಆರೋಪಿಸಿದ್ದಾರೆ. 47.16 ಎಕರೆ ಸಾರ್ವಜನಿಕ ಭೂಮಿಯನ್ನು ಕಬಳಿಕೆ ಮಾಡಿದ್ದಕ್ಕೆ ಸಂಬಂಧಿಸಿದ ದಾಖಲೆಗಳನ್ನು ಬಿಡುಗಡೆ ಮಾಡಿದ ಅವರು ಗುಂಡೂರಾವ್ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದರು.

ಎನ್‌ಸಿಪಿಎನ್‌ಆರ್, ಜನಸಂಗ್ರಾಮ ಪರಿಷತ್ ಮತ್ತು ಇತರ ಸಮಾನ ಹಿತಾಸಕ್ತಿಯ ಸಂಘಟನೆಗಳು ದಿನೇಶ್ ಗುಂಡೂರಾವ್ ಅವರನ್ನು ಸಂಪುಟದಿಂದ ಕೈಬಿಡುವಂತೆ ಮುಖ್ಯಮಂತ್ರಿಯನ್ನು ಒತ್ತಾಯಿಸಲಿದೆ ಎಂದು ತಿಳಿಸಿದರು.
 
550 ಕೋಟಿ ರೂ. ಮೌಲ್ಯದ ಸರ್ಕಾರಿ ಭೂಮಿಯ ಕಬಳಿಕೆಯಿಂದ ಸಂಪಾದಿಸಿದ ಹಣವನ್ನು ವಶಕ್ಕೆತೆಗೆದುಕೊಳ್ಳಲು ಕ್ರಮಕೈಗೊಳ್ಳುವಂತೆ ಅವರು ಮುಖ್ಯಮಂತ್ರಿಗೆ ಒತ್ತಾಯಿಸಿದರು. ಎ.ಟಿ. ರಾಮಸ್ವಾಮಿ ಸಮಿತಿ ವರದಿ ಪ್ರಕಾರ, ಯಲಹಂಕದ ಬೆಂಗಳೂರು ಉತ್ತರತಾಲೂಕು ನವರತ್ನ ಅಗ್ರಹಾರ ಗ್ರಾಮದಲ್ಲಿ 47. 16 ಎಕರೆ ಭೂಮಿಯನ್ನು ಕಬಳಿಕೆ ಮಾಡಲಾಗಿದೆ ಎಂದು ಹಿರೇಮಠ್ ಆರೋಪಿಸಿದರು.

ಗುಂಡೂರಾವ್ ರಾಜಕೀಯ ಪ್ರಭಾವದಿಂದ ತಹಸೀಲ್ದಾರ್ ಕಬಳಿಕೆ ಭೂಮಿಯನ್ನು ವಶಕ್ಕೆ ಪಡೆಯಲು ಪ್ರಯತ್ನಿಸಿದರೂ ಏನೂ ಪ್ರಯೋಜನವಾಗಿಲ್ಲ ಎಂದು ಹಿರೇಮಠ್ ಆರೋಪಿಸಿದ್ದಾರೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments