Select Your Language

Notifications

webdunia
webdunia
webdunia
webdunia

ನ್ಯಾ.ವಿಶ್ವನಾಥ್ ಶೆಟ್ಟಿ ನೇಮಕ ಮಾಡದಂತೆ ರಾಜ್ಯಪಾಲರಿಗೆ ದೂರು!

ನ್ಯಾ.ವಿಶ್ವನಾಥ್ ಶೆಟ್ಟಿ ನೇಮಕ ಮಾಡದಂತೆ ರಾಜ್ಯಪಾಲರಿಗೆ ದೂರು!
ಬೆಂಗಳೂರು , ಗುರುವಾರ, 12 ಜನವರಿ 2017 (18:39 IST)
ಲೋಕಾಯುಕ್ತ ಸ್ಥಾನಕ್ಕೆ ನ್ಯಾಯಮೂರ್ತಿ ವಿಶ್ವನಾಥ್ ಶೆಟ್ಟಿ ನೇಮಕ ಮಾಡದಂತೆ ಸಮಾಜ ಪರಿವರ್ತನಾ ಮುಖ್ಯಸ್ಥ ಎಸ್.ಆರ್.ಹಿರೇಮಠ್ ರಾಜ್ಯಪಾಲರಿಗೆ ದೂರು ಸಲ್ಲಿಸಿದ್ದಾರೆ.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನ್ಯಾ.ವಿಶ್ವನಾಥ್ ಶೆಟ್ಟಿ ನೇಮಕ ವಿಚಾರ 23 ಪುಟಗಳ ವಿವರವುಳ್ಳ ದಾಖಲೆಗಳನ್ನು ರಾಜ್ಯಪಾಲರಿಗೆ ನೀಡಿದ್ದೇನೆ. ನ್ಯಾ.ವಿಶ್ವನಾಥ್ ಶೆಟ್ಟಿ ವಿರುದ್ಧ ಅಕ್ರಮ ಸೈಟ್ ಪಡೆದ ಆರೋಪಗಳಿವೆ ಎಂದು ದೂರಿದರು. 
 
ನ್ಯಾಯಮೂರ್ತಿ ಶಿವರಾಜ್ ಪಾಟೀಲ್ ತಮ್ಮ ಪತ್ನಿ ಹೆಸರಿನಲ್ಲಿ ಸೈಟ್ ಇರುವ ಆರೋಪ ಬಂದಾಗ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಲೋಕಾಯುಕ್ತಕ್ಕೆ ಅತ್ಯಂತ ನ್ಯಾಯುಪೂರ್ವವಾದ ಲೋಕಾಯುಕ್ತರ ನೇಮಕವಾಗಬೇಕು. ಯಾವುದೇ ಕಾರಣಕ್ಕೂ ಲೋಕಾಯುಕ್ತ ಸ್ಥಾನಕ್ಕೆ ನ್ಯಾಯಮೂರ್ತಿ ವಿಶ್ವನಾಥ್ ಶೆಟ್ಟಿ ಅವರನ್ನು ನೇಮಕ ಮಾಡಬಾರದು ಎಂದು ಸಮಾಜ ಪರಿವರ್ತನಾ ಮುಖ್ಯಸ್ಥ ಎಚ್.ಆರ್.ಹಿರೇಮಠ್ ಆಗ್ರಹಿಸಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಎಬಿವಿಪಿ ಕಾರ್ಯಕರ್ತ ಅಭಿಷೇಕ್ ಕುಟುಂಬಕ್ಕೆ ಸಾಂತ್ವನ ಹೇಳಿದ ಈಶ್ವರಪ್ಪ