ಸಿದ್ದು ವಿರುದ್ಧ S.T.ಸೋಮಶೇಖರ್​ ಟ್ವೀಟ್

Webdunia
ಗುರುವಾರ, 18 ಮೇ 2023 (13:30 IST)
ಇಂದು ಬೆಳಗ್ಗೆಯಷ್ಟೇ ಡಾ. ಸುಧಾಕರ್, ಸಿದ್ದರಾಮಯ್ಯನವರ ಪರೋಕ್ಷ ಅಥವಾ ಅಪರೋಕ್ಷ ಪಾತ್ರದ ಕಾರಣದಿಂದಲೇ ಕೆಲವರು ರಾಜೀನಾಮೆ ನೀಡಿದ್ದರು ಎಂದು ಟ್ವೀಟ್​ ಮೂಲಕ ಹೇಳಿದ್ದರು. ಇದೀಗ ಅದೇ ಧಾಟಿಯ ಟ್ವೀಟ್​ ಒಂದನ್ನು ಎಸ್​.ಟಿ ಸೋಮಶೇಖರ್​ ಪೋಸ್ಟ್​ ಮಾಡಿದ್ದಾರೆ. ತಮ್ಮ ಟ್ವೀಟ್​ನಲ್ಲಿ ಎಸ್.ಟಿ ಸೋಮಶೇಖರ್​, ಮಾನ್ಯ ಸಿದ್ದರಾಮಯ್ಯನವರು ಸಮ್ಮಿಶ್ರ ಸರ್ಕಾರದ ದಿನಗಳಲ್ಲಿ ಶಾಸಕರಲ್ಲಿ ತೋಡಿಕೊಳ್ಳುತ್ತಿದ್ದ ಅಸಹಾಯಕತೆ, ಕೊಡುತ್ತಿದ್ದ ಆಶ್ವಾಸನೆ ಇದೇ ಎಂಬುದು ಸತ್ಯ. ಸಿದ್ದರಾಮಯ್ಯನವರ ಅಸಹಾಯಕತೆ ಸಹ ನಾವು ಪಕ್ಷ ಬಿಡಲು ಒಂದು ಪ್ರೇರಣೆಯಾಯಿತು ಎಂದರೆ ಅದು ತಪ್ಪಾಗಲಾರದು ಎಂದು ಬರೆದುಕೊಂಡಿದ್ದಾರೆ. ಇದೀಗ ಡಿಕೆಶಿ ಹಾಗೂ ಸಿದ್ದರಾಮಯ್ಯ ಸಿಎಂ ಗಾದಿಗಾಗಿ ಪಟ್ಟು ಬಿಡದೇ ಸ್ಪರ್ಧಿಸುತ್ತಿರುವ ಸಂದರ್ಭದಲ್ಲಿ ಈ ರೀತಿಯ ಟ್ವೀಟ್​ಗಳನ್ನು ಬಿಜೆಪಿ ನಾಯಕರು ಹರಿಯ ಬಿಡುತ್ತಿರುವುದು ಅಚ್ಚರಿಯ ನಡೆಯಾಗಿದೆ. ಮೇಲ್ನೋಟಕ್ಕೆ ಜೆಡಿಎಸ್ ಹಾಗೂ ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದ ಪತನಕ್ಕೆ ಸಿದ್ದರಾಮಯ್ಯರೇ ಕಾರಣವಾದರಾ ಎನ್ನುವ ಪ್ರಶ್ನೆಯನ್ನು ಈ ಟ್ವೀಟ್​ಗಳು ಹುಟ್ಟು ಹಾಕುತ್ತವೆ. ಇದರಿಂದ ಕಾಂಗ್ರೆಸ್​ನ ಸಿಎಂ ಆಯ್ಕೆ ಮೇಲೆ ಪ್ರಭಾವ ಆಗಲಿದೆಯಾ ಎನ್ನುವುದನ್ನು ಕಾದು ನೋಡಬೇಕಿದೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ, ಪಂಜಾಬ್, ಯುಪಿಯಲ್ಲಿ ತೀವ್ರ ಹೀಟ್‌ವೇವ್ ಎಚ್ಚರಿಕೆ

ರಾಹುಲ್ ಗಾಂಧಿ ಒಬ್ಬ ಪಾಕಿಸ್ತಾನಿ ಏಜೆಂಟ್: ನಿತೇಶ್ ರಾಣೆ

ನಟ ಧರ್ಮೇಂದ್ರರಿಗೆ ಮರಣೋತ್ತರ ಪದ್ಮವಿಭೂಷಣ: ಪ್ರಶಸ್ತಿ ಸ್ವೀಕರಿಸಿದ ಹೇಮಾ ಮಾಲಿನಿ

ಅಂಬೆನಾಲಿ ಘಾಟ್‌ನಲ್ಲಿ ಸಾವಿರ ಅಡಿ ಆಳದ ಕಣಿವೆಗೆ ಉರುಳಿದ ಕಾರು: ಎಂಟು ಯುವಕರು ದಾರುಣ ಸಾವು

ಬೆಳ್ತಂಗಡಿ ತಾಲ್ಲೂಕಿನ ಟ್ರೆಕ್ಕಿಂಗ್ ತಾಣಕ್ಕೆ ಹೋಗುವ ಪ್ಲಾನ್ ಮಾಡಿದ್ದವರಿಗೆ ಗುಡ್‌ನ್ಯೂಸ್‌

ಮುಂದಿನ ಸುದ್ದಿ
Show comments