ಲಿಂಗಾಯತ ಶರಣೆಯರಲ್ಲಿ ಅಸಮಾನತೆ ಬಾವುಟ?

Webdunia
ಭಾನುವಾರ, 17 ಫೆಬ್ರವರಿ 2019 (11:42 IST)
ಬೀದರ್ ನ ಬಸವ ಗಿರಿಯಲ್ಲಿ ಇಂದು ವಚನ ವಿಜಯೋತ್ಸವ ಸಮಾರಂಭ ಆಯೋಜಿಸಲಾಗಿದೆ. ಆದರೆ ವಚನ ವಿಜಯೋತ್ಸವಕ್ಕೆ ಬಸವ ಪೀಠದ ಪೀಠಾಧ್ಯಕ್ಷೆ ಮಾತೆ ಮಹಾದೇವಿಗೆ ಆಹ್ವಾನ ನೀಡದಿರುವುದು ಬಸವಭಕ್ತರ ಆಕ್ರೋಶಕ್ಕೆ ಕಾರಣವಾಗುತ್ತಿದೆ.
ಶ್ರೀ ಅಕ್ಕ ಅನ್ನಪೂರ್ಣ ತಾಯಿ ಹಾಗೂ ಶ್ರೀ ಡಾ.ಗಂಗಾಂಬಿಕೆ ಅಕ್ಕ ನೇತೃತ್ವದಲ್ಲಿ ವಿಜಯೋತ್ಸವ ನಡೆಯುತ್ತಿದೆ.

ಬಸವ ಪೀಠದ ಪೀಠಾಧ್ಯಕ್ಷೆ ಮಾತೆ ಮಹಾದೇವಿ ಹೆಸರಿಲ್ಲದ ಕಾರಣ ಸಾರ್ವಜನಿಕರಲ್ಲಿ ಗೊಂದಲ ಉಂಟಾಗಿದೆ. ಬಸವ ಪ್ರತಿಷ್ಠಾನದಿಂದ ನಡೆಯುತ್ತಿರುವ ವಚನ ವಿಜಯೋತ್ಸವದ ಆಹ್ವಾನ ಪತ್ರಿಕೆಯಲ್ಲಿ ಶರಣೆ ಮಾತೆ ಮಹದೇವಿಯವರ ಹೆಸರೇ ಇಲ್ಲದಿರುವುದು ಲಿಂಗಾಯತ ಶರಣೆಯರಲ್ಲೇ ಅಸಮಾನತೆಯ ಬಾವುಟ ಹಾರಿಸಿದಂತಾಗಿದೆ.

ವಚನ ವಿಜಯೋತ್ಸವದಲ್ಲಿ ಬಸವಣ್ಣನವರ ವಚನಗಳನ್ನ ಪಠಿಸಲಾಗುತ್ತದೆ. ಸಮಾನತೆ ತತ್ವ ಸಾರಿದ ಬಸವಣ್ಣನವರ ಕಾರ್ಯಕ್ರಮದಲ್ಲಿ ಅಸಮಾನತೆ ಮೆರೆಯಲಾಗುತ್ತಿದೆ. ಶಿಷ್ಠಾಚಾರಕ್ಕಾದರೂ ಆಹ್ವಾನ ಪತ್ರಿಕೆಯಲ್ಲಿ ಅವರ ಹೆಸರು ಹಾಕಬೇಕಿತ್ತು ಎಂದು ಜನರು ಮಾತನಾಡಿಕೊಳ್ಳುತ್ತಿದ್ದಾರೆ.

ಬಸವ ಪೀಠಕ್ಕೆ ಹೈಕಮಾಂಡ್ ನಂತಿರುವ ಮಾತೆ ಮಹಾದೇವಿ ಕಾರ್ಯಕ್ರಮಕ್ಕೆ ಆಹ್ವಾನ ನೀಡದೆ ಅವಮಾನ ಮಾಡಲಾಗಿದೆ ಎಂಬ ಆರೋಪ ಕೇಳಿಬರುತ್ತಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಕಲಾಲೋಕ ಮಳಿಗೆ, ಏನೆಲ್ಲಾ ಸಿಗಲಿದೆ ಗೊತ್ತಾ

ಕಾರು ಸ್ಫೋಟದ ಹಿಂದಿನ ಪ್ರತಿಯೊಬ್ಬ ಅಪರಾಧಿಯನ್ನು ಭೇಟೆಯಾಡಿ: ಅಮಿತ್ ಶಾ

ದೆಹಲಿಯಲ್ಲಿ ಕಾರು ಸ್ಫೋಟ: ರಾಜ್ಯದ ಈ ಜಿಲ್ಲೆಯಲ್ಲಿ ಹೆಚ್ಚಿನ ಭದ್ರತೆ

ಇದೇ ಕಾರಣಕ್ಕಾ ಪರಪ್ಪನ ಅಗ್ರಹಾರದಲ್ಲಿದ್ದ ಉಗ್ರನಿಗೆ ಮೊಬೈಲ್ ಕೊಡಲಾಯಿತೇ

ದೆಹಲಿ ಕಾರು ಸ್ಫೋಟ ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಮುಂದಿನ ಸುದ್ದಿ
Show comments