Webdunia - Bharat's app for daily news and videos

Install App

ನ್ಯಾ.ಸದಾಶಿವ ಆಯೋಗದ ವರದಿ ಅನುಷ್ಠಾನಕ್ಕೆ ಒತ್ತಾಯ

Webdunia
ಶುಕ್ರವಾರ, 30 ನವೆಂಬರ್ 2018 (18:55 IST)
ಪರಿಶಿಷ್ಟ ಸಮುದಾಯದ ಜನರಿಗೆ ಅನುಕೂಲ ಮಾಡಿಕೊಡುವ ನ್ಯಾ.ಸದಾಶಿವ ಆಯೋಗದ ವರದಿಯನ್ನು ಜಾರಿಗೆ ತರಬೇಕೆಂದು ಒತ್ತಾಯ ಕೇಳಿಬಂದಿದೆ.

ನ್ಯಾಯಮೂರ್ತಿ ಎ.ಜೆ. ಸದಾಶಿವ ಆಯೋಗದ ವರದಿಯನ್ನು ಯಥಾವತ್ತಾಗಿ ಜಾರಿಗೊಳಿಸಬೇಕೆಂದು ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಸದಸ್ಯರು ಪ್ರತಿಭಟನೆ ನಡೆಸಿದರು.

ಬೆಂಗಳೂರಿನ ಪುರಭವನದ ಮುಂಭಾಗ ಜಮಾಯಿಸಿದ ಹೋರಾಟಗಾರರು, ಸಾಮಾಜಿಕ ನ್ಯಾಯ ದೊರಕಿಸಿ ಕೊಡಲು ನಡೆಸಿದ ಹೋರಾಟದ ಫಲವಾಗಿ ಸದಾಶಿವ ಆಯೋಗದ ವರದಿ ರಚನೆಯಾಗಿದೆ.

2004ರಲ್ಲಿ ಅಂದಿನ ಕಾಂಗ್ರೆಸ್ ಸರ್ಕಾರ ನ್ಯಾ. ಎ.ಜೆ. ಸದಾಶಿವ ಆಯೋಗವನ್ನು ರಚನೆ ಮಾಡಿದೆ. ಸವಿಸ್ತಾರವಾಗಿ ಅಧ್ಯಯನ ನಡೆಸಿದ ಆಯೋಗವು 200 ಪುಟಗಳ ಸುದೀರ್ಘ ವರದಿಯನ್ನು ಸರ್ಕಾರಕ್ಕೆ ಸಲ್ಲಿಸುವ ಮೂಲಕ ಪರಿಶಿಷ್ಟ ಜಾತಿಯ ಶೇ. 15ರ ಮೀಸಲಾತಿ ಪ್ರಮಾಣವನ್ನು ನಾಲ್ಕು ಭಾಗಗಳನ್ನಾಗಿ ವಿಂಗಡಿಸಿದೆ.

ಎಡಗೈ ಸಮುದಾಯಕ್ಕೆ ಶೇ. 6 ಮತ್ತು ಬಲಗೈ ಸಮುದಾಯಕ್ಕೆ ಶೇ. ೫ ಹಾಗೂ ಅಸ್ಪೃಶ್ಯರಲ್ಲದವರಿಗೆ ಶೇ. 3 ಹಾಗೂ ಇತರರಿಗೆ ಶೇ. 1 ರಷ್ಟು ಮೀಸಲಾತಿ ನಿಗದಿಪಡಿಸಲಾಗಿದೆ. ಈ ವರದಿಯಲ್ಲಿ ಯಾವುದೇ ಗೊಂದಲ ಇಲ್ಲ. ಈ ಕೂಡಲೇ ಜಾರಿಗೆ ತನ್ನಿ ಎಂದು ಆಗ್ರಹಿಸಿದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನೇಪಾಳದ ಪ್ರವಾಹದಲ್ಲಿ ಸಿಲುಕಿರುವ ತಮಿಳರನ್ನು ರಕ್ಷಿಸಲು ಸಿಎಂ ವಿಜಯ್ ಉನ್ನತ ಮಟ್ಟದ ಸಭೆ

ನೇಪಾಳದ ಪ್ರವಾಹದಲ್ಲಿ ಸುಮಾರು 130-140 ಭಾರತೀಯರು ನಾಪತ್ತೆ: ಪ್ರಿಯಾಂಕ್ ಖರ್ಗೆ

ನೇಪಾಳದಿಂದ 21 ಭಾರತೀಯರ ರಕ್ಷಣೆ, ಚೀನಾದಲ್ಲಿ ಸಿಲುಕಿರುವ 200 ಭಾರತೀಯರಿಂದ ರಕ್ಷಣೆಯ ಕೋರಿಕೆ

ಮಳೆಯಿಲ್ಲದೆ ಆತಂಕದಲ್ಲಿರುವ ರೈತರ ಬೆನ್ನಿಗೆ ಸರ್ಕಾರ ಗಟ್ಟಿಯಾಗಿ ನಿಲ್ಲಲಿದೆ: ಡಿಕೆ ಶಿವಕುಮಾರ್‌

ಈದ್ ಮಿಲಾದ್ ಮೆರವಣಿಗೆ ವೇಳೆ ಗಲಾಟೆ ಎಬ್ಬಿಸಿದವರಿಗೆ ಬಿಗ್ ಶಾಕ್‌

ಮುಂದಿನ ಸುದ್ದಿ
Show comments