Webdunia - Bharat's app for daily news and videos

Install App

ಬಂಡೀಪುರದಲ್ಲಿ ಪ್ರವಾಸಿಗರಿಗೆ ಸಫಾರಿ ಓಪನ್

Webdunia
ಶುಕ್ರವಾರ, 1 ಮಾರ್ಚ್ 2019 (14:33 IST)
ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಸುಟ್ಟುಹೋಗಿದ್ದ ಬಂಡೀಪುರದಲ್ಲಿ ಇಂದಿನಿಂದ ಸಫಾರಿ ಮತ್ತೆ ಆರಂಭವಾಗುತ್ತಿದೆ.

ಒಂದು ವಾರಗಳ ಕಾಲ ಬೆಂಕಿಗೆ ಸಿಲುಕಿ ಬಂಡೀಪುರ ರಾಷ್ಟ್ರೀಯ ಉದ್ಯಾನವನದ 4120 ಹೆಕ್ಟೇರ್ ಅರಣ್ಯ ಪ್ರದೇಶ ನಾಶವಾಗಿದೆ. ಇದರಿಂದಾಗಿ ಬಂಡೀಪುರದಲ್ಲಿ ಅರಣ್ಯ ಸವಾರಿಯನ್ನು ಕೆಲ ದಿನಗಳ ಮಟ್ಟಗೆ ನಿಲ್ಲಿಸಲಾಗಿತ್ತು. ಪ್ರತಿದಿನ ಸಾವಿರಾರು ಪ್ರವಾಸಿಗರಿಂದ ಕಿಕ್ಕಿರಿದು ತುಂಬಿರುತ್ತಿದ್ದ ಉದ್ಯಾನವನ ಬೆಂಕಿ ಅವಘಡ ಸಂಭವಿಸಿದ ನಂತರ ಖಾಲಿ ಖಾಲಿಯಾಗಿತ್ತು. ಒಂದಷ್ಟು ಪ್ರವಾಸಿಗರು ಭೇಟಿ ಕೊಟ್ಟರೂ ಸಫಾರಿ ಇಲ್ಲ ಎಂದು ತಿಳಿದ ಕೂಡಲೆ ಹಿಂದಿರುಗುತ್ತಿದ್ದರು. ಆದ್ದರಿಂದ ಉನ್ನತಮಟ್ಟದ ಅಧಿಕಾರಿಗಳೊಂದಿಗೆ ಚರ್ಚಿಸಿ ಇಂದಿನಿಂದ ಸಫಾರಿ ಆರಂಭಿಸಲಾಗುತ್ತಿದೆ.

ಬಂಡೀಪುರ ಅರಣ್ಯದಲ್ಲಿನ ಬೆಂಕಿ ಅನಾಹುತದಲ್ಲಿ ಯಾವುದೇ ಪ್ರಾಣಿಗಳಿಗೆ ಅನಾಹುತವಾಗಿಲ್ಲ. ಇನ್ನು ಮುಂದೆ ಇಂತಹ ಘಟನೆಗಳು ಜರುಗದಂತೆ ಸೂಕ್ತ ಮುನ್ನೆಚ್ಚರಿಕೆ ತೆಗೆದುಕೊಂಡಿರುವುದಾಗಿ ಅರಣ್ಯ ಇಲಾಖೆ ಮುಖ್ಯಸ್ಥರು ಸ್ಪಷ್ಟಪಡಿಸಿದ್ದಾರೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments