Webdunia - Bharat's app for daily news and videos

Install App

ಸಿಎಂ ಸಿದ್ದರಾಮಯ್ಯ ಪರ ಬ್ಯಾಟಿಂಗ್ ಮಾಡಿದ ಅತಿ ಕಿರಿಯ ಶಾಸಕ ಸಾಗರ್ ಖಂಡ್ರೆ

Sampriya
ಶನಿವಾರ, 17 ಆಗಸ್ಟ್ 2024 (19:58 IST)
Photo Courtesy X
ಬೆಂಗಳೂರು: ರಾಜ್ಯದ ಜನಪ್ರಿಯ ಮುಖ್ಯಮಂತ್ರಿ ಸಿದ್ದರಾಮಯ್ಯ  ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವದು ಪ್ರಜಾಪ್ರಭುತ್ವದ ಕಗ್ಗೊಲೆ ಎಂದು ಶಾಸಕ ಸಾಗರ್‌ ಖಂಡ್ರೆ ಹೇಳಿದರು.

ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಹಾಕಿರುವ ಸಾಗರ್‌ ಖಂಡ್ರೆ ಅವರು ಸಿಎಂ ಸಿದ್ದರಾಮಯ್ಯ ಪರ ಬ್ಯಾಟಿಂಗ್ ಮಾಡಿದ್ದಾರೆ.

ರಾಜ್ಯದ ಜನಪ್ರಿಯ ಮುಖ್ಯಮಂತ್ರಿ  ಸನ್ಮಾನ್ಯ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವದು ಪ್ರಜಾಪ್ರಭುತ್ವದ ಕಗ್ಗೊಲೆ. ಕೇಂದ್ರ ಸರ್ಕಾರದ ದ್ವೇಷ ರಾಜಕಾರಣದಿಂದಾಗಿ ರಾಜಭವನವನ್ನು ದುರುಪಯೋಗಪಡಿಸಿಕೊಂಡು ಮಾನ್ಯ ಮುಖ್ಯಮಂತ್ರಿಗಳ ವಿರುದ್ಧ ಷಡ್ಯಂತ್ರ ನಡೆಸುತ್ತಿದ್ದಾರೆ. 134 ಸೀಟ್ ಗೆದ್ದು ಬಹುಮತದಿಂದ ಅಧಿಕಾರಕ್ಕೆ ಬಂದ ಚುನಾಯಿತ ಸರ್ಕಾರವನ್ನು ಉರುಳಿಸುವ ಬಿಜೆಪಿ ಹಾಗೂ ಜೆಡಿಎಸ್ ನಡೆಯನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ.

ಮುಡಾ ಇಲ್ಲಿ ಯಾವುದೇ ಹಗರಣ ನಡೆದಿಲ್ಲ ಸೈಟ್ ಹಂಚಿಕೆಯಾದಾಗ ಸಿದ್ದಾರಾಮಯ್ಯ ಅವರು ಅಧಿಕಾರದಲ್ಲಿ ಇರಲಿಲ್ಲ ಆವಾಗ ಬಿಜೆಪಿ ಅಧಿಕಾರದಲ್ಲಿ ಇತ್ತು ಇದರಲ್ಲಿ ಸಿದ್ದರಾಮಯ್ಯ ಅವರ ಪಾತ್ರ ಏನು ಇಲ್ಲ ಎಂಬುದು ಸ್ಪಷ್ಟವಾಗಿ ಗೊತ್ತಿದ್ದರೂ ಅಧಿಕಾರ ದುರ್ಬಳಕೆ ಮಾಡಿಕೊಂಡು ಮುಖ್ಯಮಂತ್ರಿಗಳ ಹೆಸರಿಗೆ ಕಳಂಕ ತರುವ ಕೆಲಸ ಕೇಂದ್ರ ಸರ್ಕಾರ ಹಾಗೂ ರಾಜ್ಯದ ವಿರೋಧ ಪಕ್ಷದವರು ಮಾಡುತ್ತಿದ್ದಾರೆ.

ಹಿಂದುಳಿದ, ಶೋಷಿತ ವರ್ಗದವರು, ಬಡವರು, ನಿರ್ಗತಿಕರು ಹಾಗೂ ಸಾಮಾಜಿಕ ನ್ಯಾಯದ ತತ್ವ ಸಿದ್ಧಾಂತದ ಮೇಲೆ ರಾಜ್ಯದ ಎಲ್ಲಾ ಸಮುದಾಯಗಳ ಏಳಿಗೆಗಾಗಿ ಹಗಲಿರುಳು ಶ್ರಮ ವಹಿಸುತ್ತಿರುವ ಮಾನ್ಯ ಸಿದ್ದರಾಮಯ್ಯ ಅವರನ್ನು ರಾಜಕೀಯವಾಗಿ ಹಣಿಯಲು ಆಗದೆ ಹೀಗೆ ಅಧಿಕಾರ ದುರ್ಬಳಕೆ ಮಾಡಿಕೊಂಡು ಅವರ ವಿರುದ್ಧ ಮಾಡುತ್ತಿರುವ ಷಡ್ಯಂತ್ರವನ್ನು ರಾಜ್ಯದ ಜನತೆ ಗಮನಿಸುತ್ತಿದ್ದಾರೆ ಜನರೇ ಇವರಿಗೆ ತಕ್ಕ ಪಾಠ ಕಲಿಸುತ್ತಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಾಕ್‌ಗೆ ಬೆಂಬಲ ಸೂಚಿಸಿದ ಟರ್ಕಿ: ಸೇಬು ಬೆನ್ನಲ್ಲೇ ಆಭರಣಕ್ಕೂ ಭಾರತದಲ್ಲಿ ಬಹಿಷ್ಕಾರ

India Pakistan: ಯಶಸ್ವಿಯಾಗಿ ಪಾಕ್‌ನ 600 ಡ್ರೋನ್‌ಗಳನ್ನು ಉರುಳಿಸಿದ ಭಾರತದ ವಾಯುಪಡೆ

ಉತ್ತರಪ್ರದೇಶ: ಕೂದಲು ಕಸಿ ಮಾಡಲು ಹೋಗಿ ಜೀವ ಕಳೆದುಕೊಂಡ ಇಬ್ಬರು ಎಂಜಿನಿಯರ್‌ಗಳು

ಲಿಂಗಸುಗೂರು: ಜಾಮೀನು ವಿಚಾರಕ್ಕೆ ವಿಷ ಕುಡಿಸಿ ವ್ಯಕ್ತಿಯ ಕೊಲೆ, 10ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

ಪ್ರೀತಿಸಿ ಮದುವೆಯಾದ ಹಿಂದೂ ಯುವಕ- ಮುಸ್ಲಿಂ ಯುವತಿ, ರಕ್ಷಣೆ ಕೋರಿದ ನವಜೋಡಿ

ಮುಂದಿನ ಸುದ್ದಿ
Show comments