Webdunia - Bharat's app for daily news and videos

Install App

ನಾಡಹಬ್ಬ ದಸರಾ ಮಹೋತ್ಸವಕ್ಕೆ ಚಾಲನೆ ನೀಡಲಿದ್ದಾರೆ ಸಾಹಿತಿ ಹಂಪ ನಾಗರಾಜಯ್ಯ

Sampriya
ಶುಕ್ರವಾರ, 20 ಸೆಪ್ಟಂಬರ್ 2024 (14:19 IST)
Photo Courtesy X
ಬೆಂಗಳೂರು: ಚಾಮುಂಡಿಬೆಟ್ಟದಲ್ಲಿ ಅಕ್ಟೋಬರ್‌ 3ರಂದು ಈ ಬಾರಿಯ ಮೈಸೂರು ದಸರಾ ಮಹೋತ್ಸವನ್ನು ಸಾಹಿತಿ ಹಂಪ ನಾಗರಾಜಯ್ಯ ಅವರು ಉದ್ಘಾಟಿಸಲಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ವಿಶ್ವ ವಿಖ್ಯಾತ ದಸರಾನ್ನು ಅದ್ದೂರಿಯಾಗಿ ಆಚರಿಸಲು ನಿರ್ಧರಿಸಿದೆ. ಇಂದು ಈ ವಿಚಾರದ ಕುರಿತು ಮೈಸೂರಿನ ಮಂಡಕಹಳ್ಳಿ ವಿಮಾನ ನಿಲ್ದಾಣದಲ್ಲಿ ಸಿದ್ದರಾಮಯ್ಯ ಮಾತನಾಡಿದರು.

2024ರ ದಸರಾ ಮಹೋತ್ಸವ ಅಕ್ಟೋಬರ್ 3ರಂದು ಆರಂಭಗೊಂಡು ಅದೇ ತಿಂಗಳ 12ರಂದು ಸಮಾರೋಪಗೊಳ್ಳಲಿದೆ. ಅಕ್ಟೋಬರ್ 3ರಂದು ಚಾಮುಂಡಿ ಬೆಟ್ಟದಲ್ಲಿರುವ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ಬೆಳಗ್ಗೆ 9.15 ರಿಂದ 9.45ರ ಮುಹೂರ್ತದಲ್ಲಿ ದಸರಾ ಉದ್ಘಾಟನೆ ನೆರವೇರಲಿದೆ.

ಅಕ್ಟೋಬರ್ 3ರಂದು ಚಾಮುಂಡೇಶ್ವರಿ ದೇವಿಗೆ ನವರಾತ್ರಿಯ ಪ್ರಥಮ ಪೂಜೆ ನೆರವೇರಲಿದ್ದು, ನಂತರ 9 ದಿನಗಳ ಕಾಲ ದೇವಿಯ ಆರಾಧನೆ ನಡೆಯಲಿದೆ. ಅಕ್ಟೋಬರ್ 12ರಂದು ನವಮಿಯ ದಿನ ದುರ್ಗಾಷ್ಟಮಿ, ಮಹಾನವಮಿ, ಆಯುಧ, ಆನೆ ಮತ್ತು ಕುದುರೆ ಪೂಜೆ ನೆರವೇರಲಿದೆ.

ದಸರಾ ಮಹೋತ್ಸವದ ಕೊನೆಯ ದಿನವಾದ ಅಕ್ಟೋಬರ್ 13ರಂದು ವಿಜಯ ದಶಮಿ ಪೂಜೆ ನೆರವೇರಲಿದೆ. ಸಂಜೆ 4.30ರ ನಂತರ ಜಂಬೂ ಸವಾರಿ ನಡೆಯಲಿದ್ದು, ರಾತ್ರಿ 7.30ರ ನಂತರ ಪಂಜಿನ ಕವಾಯತು ನಡೆಯಲಿದೆ.

ಹಂಪಾ ನಾಗರಾಜಯ್ಯ ಅವರು ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲ್ಲೂಕಿನ ಹಂಪಸಂದ್ರ ಗ್ರಾಮದವರು. ಇವರನ್ನು ಕನ್ನಡ ಸಾಹಿತ್ಯ ಲೋಕದಲ್ಲಿ ಹಂಪನಾ ಎಂಬ ಹೆಸರಿನಿಂದಲೇ ಖ್ಯಾತಿ ಪಡೆದಿದ್ದಾರೆ. ಹಂಪಾ ನಾಗರಾಜಯ್ಯ ಅವರು ಮಂಡ್ಯ, ಗೌರಿಬಿದನೂರು, ಮಧುಗಿರಿ, ತುಮಕೂರು, ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ವಿದ್ಯಾಭ್ಯಾಸ ಪೂರ್ಣಗೊಳಿಸಿದ್ದಾರೆ. ಮೈಸೂರು ವಿವಿಯಿಂದ ಎಂ.ಎ.ಪದವಿ ಮತ್ತು ಬೆಂಗಳೂರು ವಿವಿಯಿಂದ ಗೌರವ ಡಾಕ್ಟರೇಟ್‌ ಪದವಿಯನ್ನು ಪಡೆದಿದ್ದಾರೆ.

 <>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬುರುಡೆ ಪ್ರಕರಣಕ್ಕೆ ಮತ್ತೊಂದು ಬಿಗ್‌ ಟಿಸ್ಟ್‌: ಮಾಸ್ಕ್‌ಮ್ಯಾನ್ ಸ್ನೇಹಿತನಿಂದ ಹೊರಬಿತ್ತು ಸ್ಫೋಟಕ ಮಾಹಿತಿ

ನಾಮಪತ್ರ ಸಲ್ಲಿಸಿದ ಬೆನ್ನಲ್ಲೇ ದೇವೇಗೌಡರನ್ನ ಭೇಟಿಯಾದ ಎನ್‌ಡಿಎ ಉಪ ರಾಷ್ಟ್ರಪತಿ ಅಭ್ಯರ್ಥಿ

ಚಿನ್ನ ಖರೀದಿಸುವವರಿಗೆ ಗುಡ್‌ ನ್ಯೂಸ್‌, ಇಳಿಕೆಯತ್ತ ಚಿನ್ನದ ದರ

ರೇಖಾ ಗುಪ್ತಾ ಮೇಲೆ ಕಪಾಳಮೋಕ್ಷ: ಆರೋಪಿ ವಿರುದ್ಧ ದಾಖಲಾಯಿತು ದೊಡ್ಡ ಕೇಸ್‌

ಪ್ರಚೋದನಕಾರಿ ಹೇಳಿಕೆ: ಬಸನಗೌಡ ಪಾಟೀಲ ವಿರುದ್ಧ ಎಫ್‌ಐಆರ್‌

ಮುಂದಿನ ಸುದ್ದಿ
Show comments