Webdunia - Bharat's app for daily news and videos

Install App

ಸಾಯಿ ಬಾಬಾಗೆ ಕೈ ಮುಗಿದ್ರು; ಲಕ್ಷ ಲಕ್ಷ ಹಣ ದೋಚಿದ್ರು!

Webdunia
ಮಂಗಳವಾರ, 11 ಡಿಸೆಂಬರ್ 2018 (15:22 IST)
ಸತ್ಯಸಾಯಿ ಬಾಬಾಗೆ ನಮಿಸಿದ ಕಳ್ಳರು ಆತನ ಮುಂದಿದ್ದ ಹುಂಡಿಯನ್ನು ಕಳ್ಳತನ ಮಾಡಿ 5 ಲಕ್ಷಕ್ಕೂ ಅಧಿಕ ಹಣದೊಂದಿಗೆ ಪರಾರಿಯಾಗಿರುವ ಘಟನೆ ನಡೆದಿದೆ.

ಹುಬ್ಬಳ್ಳಿಯ ಸಾಯಿ ಬಾಬಾ ಮಂದಿರದ ಹಿಂಭಾಗದ ಕಡೆ ಗ್ರಿಲ್ ಮುರಿದು ಹುಂಡಿ ಕಳ್ಳತನ ಮಾಡಿದ ಘಟನೆ ನಡೆದಿದೆ. ಹುಬ್ಬಳ್ಳಿಯ ರಾಜನಗರದಲ್ಲಿ ಈ ಘಟನೆ ನಡೆದಿದ್ದು, ಕಳ್ಳರ ಕೈಚಳಕ ಸಿಸಿಟಿವಿ ಯಲ್ಲಿ ಸೆರೆಯಾಗಿದೆ. ನಾಲ್ವರು ಕಳ್ಳರು ಒಳನುಗ್ಗಿ ಸಾಯಿಬಾಬಾ ಮೂರ್ತಿಯ ಎದುರು ಇದ್ದ ಹುಂಡಿ ಮತ್ತು ಕೌಂಟರ್‌ನ ಬೀಗ ಮುರಿದು ಅದರಲ್ಲಿದ್ದ ಐದು ಲಕ್ಷಕ್ಕೂ ಹೆಚ್ಚು ನಗದನ್ನು ದೋಚಿದ್ದಾರೆ. 

ಇವರು ಕಳ್ಳತನ ಮಾಡುವ ಮುನ್ನ ಶಿರಡಿ ಸಾಯಿ ಬಾಬಾನ‌ ಮೂರ್ತಿಗೆ ಒಬ್ಬ ಕೈ ಮುಗಿದು ಹುಂಡಿಯನ್ನು ಎತ್ತಲು ಪ್ರಯತ್ನಿಸಿದ್ದಾನೆ. ಕಳ್ಳರ ಕೈಚಳಕ ಹಾಗೂ ಸಂಪೂರ್ಣ ಚಲನವಲನ ಮಂದಿರದ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಡಿಸೆಂಬರ್‌ 3 ರಂದು ನಸುಕಿನ ಎರಡು ಗಂಟೆಯಲ್ಲಿ ಈ ದರೋಡೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಈ ಸಂಬಂಧ ದೇವಸ್ಥಾನದ ಸಮಿತಿ ಅಶೋಕನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದೆ. ಸಿಸಿಟಿವಿ ದೃಶ್ಯ ಪರಿಶೀಲನೆ ನಡೆಸಿರುವ ಪೊಲೀಸರು ಕಳ್ಳರ ಪತ್ತೆಗೆ ಬಲೆ ಬೀಸಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments