Webdunia - Bharat's app for daily news and videos

Install App

ಸಂತರ ಬಾಯಲ್ಲಿ ಗೋವು ನಲಿಯಬೇಕು: ರಾಘವೇಶ್ವರಶ್ರೀ

Webdunia
ಭಾನುವಾರ, 24 ಜುಲೈ 2016 (11:01 IST)
ಮೊದಲು ಸಂತರ ಬಾಯಲ್ಲಿ ಗೋವು ನಲಿಯಬೇಕು, ಸಂತರ ನಾಲಿಗೆಯಲ್ಲಿ ಗೋವು ನಲಿದಾಡಿದರೆ, ಗೋವು ನಾಡಿನಲ್ಲಿ ನಲಿದಾಡುವಂತಾಗುತ್ತದೆ ಎಂದು 'ಒಡಲು' ಸಭಾಂಗಣದ 'ಮಡಿಲು' ವೇದಿಕೆಯಲ್ಲಿ ಸಾನ್ನಿಧ್ಯವಹಿಸಿದ ಶ್ರೀರಾಮಚಂದ್ರಾಪುರ ಮಠದ ಶ್ರೀಶ್ರೀ ರಾಘವೇಶ್ವರಭಾರತೀ ಮಹಾಸ್ವಾಮಿಗಳವರು ತಮ್ಮ ಗೋಚಾತುರ್ಮಾಸ್ಯಸಂದೇಶದಲ್ಲಿ ಹೇಳಿದರು.
 
ಶ್ರೀರಾಮಚಂದ್ರಾಪುರಮಠದ ಬೆಂಗಳೂರಿನ ಶಾಖಾಮಠದಲ್ಲಿ ಇಂಗ್ಲೇಂಡ್, ಶ್ರೀಗಿರಿನಗರ ಹಾಗೂ ವರ್ತೂರು ವಲಯಗಳ ಸರ್ವಸೇವೆಯನ್ನು ಸ್ವೀಕರಿಸಿ ಆಶೀರ್ವಚನ ನೀಡಿದ ಶ್ರೀಗಳು, ಬದುಕಿನ ಪ್ರಶ್ನೆಗೆ ಉತ್ತರ ಹುಡುಕಿದವನು ಸಂತನಾಗುತ್ತಾನೆ, ಅಂತಹ ಸಂತರ ಶಕ್ತಿಗೆ ಎದುರಿಲ್ಲ, ಹಾಗಾಗಿ ಸಂತರು ಸಂಘಟಿತರಾಗಿ ಗೋರಕ್ಷಣೆಗೆ ಮುಂದಾಗಬೇಕು ಎಂದು ಆಶಿಸಿದರು. 
NDRIನ ದಕ್ಷಿಣ ಭಾರತ ಪ್ರಮುಖರಾದ ಡಾ. ಕೆ ಪಿ ರಮೇಶ್ ಅವರಿಗೆ 'ಗೋಸೇವಾ ಪುರಸ್ಕಾರ'ವನ್ನು ಅನುಗ್ರಹಿಸಿದ ಶ್ರೀಗಳು ಗೋವಿನಲ್ಲಿ ಎಲ್ಲವೂ ಇದೆ, ವಿಜ್ಞಾನ ಗೋವಿನ ಮಹತ್ವವನ್ನು ಅರಿತು ಅದನ್ನು ಸಾರಬೇಕು. ಈ ದಿಶೆಯಲ್ಲಿ ಡಾ. ಕೆ ಪಿ ರಮೇಶ್ ಮೊದಲಿಂದಲು ಉಧ್ಯುಕ್ತರಾಗಿರುವುದು ಶ್ಲಾಘನೀಯ ಎಂದರು.
 
ಸಂತಸಂದೇಶ ನೀಡಿದ ಚಿತ್ರದುರ್ಗದ ವೇದವಿದ್ಯಾಪೀಠದ ಶ್ರೀಶ್ರೀ ಲೋಕೇಶ್ವರ ಶಿವಾಚಾರ್ಯರು, ಗೋಸಂರಕ್ಷಣಾ ಕಾರ್ಯವು ಋಷಿ ರಕ್ಷಣೆಗೆ ಸಮಾನವಾಗಿದ್ದು, ಸಂತರೆಲ್ಲರೂ ಒಂದಾಗಿ ಗೋರಕ್ಷಣೆ, ರಾಷ್ಟ್ರ ರಕ್ಷಣೆ, ಸಂಸ್ಕೃತಿಯ ರಕ್ಷಣೆಯಲ್ಲಿ ತೊಡಗಿಕೊಳ್ಳಬೇಕು. ಭಕ್ತರು ದೀಪಕ್ಕೆ ಎಣ್ಣೆಯಂತೆ ಸಂತರಿಗೆ ಸಹಕಾರ ನೀಡಬೇಕು ಎಂದರು.   
 
ಗೋಸೇವಕ ಪುರಸ್ಕಾರ ಸ್ವೀಕರಿಸಿ ಮಾತನಾಡಿದ NDRI ನ ದಕ್ಷಿಣ ಭಾರತ ಪ್ರಮುಖರಾದ ಡಾ. ಕೆ ಪಿ ರಮೇಶ್ ಅವರು, 'ಭಾರತೀಯ ಗೋತಳಿಯ ವಿಶೇಷತೆಗಳು ಹಾಗೂ ಅವುಗಳ ಅಭಿವೃದ್ಧಿ' ಕುರಿತು ಮಾತನಾಡಿ, ಇಂದಿನ ವಿಷಮ ಸ್ಥಿತಿಯಲ್ಲೂ ಭಾರತದಲ್ಲಿರುವ ಗೋವುಗಳಲ್ಲಿ ೮೦% ಗೋವುಗಳು  ದೇಶೀಯ ತಳಿಗಳಾಗಿದ್ದು ಹೆಮ್ಮೆಯ ವಿಚಾರವಾಗಿದೆ. ದೇಶೀಯ ತಳಿಗಳ ಸಂರಕ್ಷಣೆಗೆ ಎಲ್ಲರೂ ಕಾರ್ಯಪರರಾಗಬೇಕಾಗಿದ್ದು, ಶ್ರೀರಾಘವೇಶ್ವರಭಾರತೀಸ್ವಾಮಿಗಳ ವಿಶೇಷ ಆಸ್ತೆಯಿಂದ 2012ರಲ್ಲಿ 'ಮಲೆನಾಡು ಗಿಡ್ಡ' ತಳಿಯಾಗಿ ಗುರುತಿಸಲ್ಪಟ್ಟಿದೆ ಎಂದು ಸ್ಮರಿಸಿದರು. ಎ೧-ಎ೨ ಹಾಲಿನ ಕುರಿತು ವಿವರಿಸಿದ ಅವರು, ಮಿಶ್ರತಳಿಗೆ ಹೋಲಿಸಿದಾಗ ದೇಶಿಯ ಹಸುಗಳು ಕಡಿಮೆ ಹಾಲು ಕೊಡುತ್ತದೆ ಎಂದು ಎನಿಸಿದರೂ, ಅದು  ಗುಣದಿಂದಾಗಿ ಅಮೃತಸಮವಾಗಿರುತ್ತದೆ. ಹಾಗಾಗಿ ಸತ್ವಭರಿತ ಹಾಲು ಬೇಕೋ ಅಥವಾ ಬಿಳಿದ್ರವ ಬೇಕೋ ಜನರು ನಿರ್ಧರಿಸಬೇಕು ಎಂದರು.
 
ವತ್ಸಬಂಧು:
 
ಇದೇ ಸಂದರ್ಭದಲ್ಲಿ ಕುಮಾರ ರಾಮಚಂದ್ರ 'ವತ್ಸಬಂಧು'ವಾಗಿ ಗೋವಿನ ಕರುವನ್ನು ದತ್ತು ತೆಗೆದುಕೊಂಡರು. 'ವತ್ಸಬಂಧು'ಯೋಜನೆಯಲ್ಲಿ ಮಕ್ಕಳು ಗೋವಿನ ಕರುವನ್ನು ದತ್ತು ತೆಗೆದುಕೊಳ್ಳಬಹುದಾಗಿದ್ದು, ಮಕ್ಕಳಲ್ಲಿ ಗೋವಿನ ಕುರಿತಾದ ಅರಿವು ಮತ್ತು ಪ್ರೀತಿಯನ್ನು ಮೂಡಿಸುವ ಉದ್ದೇಶ ಇದರದ್ದಾಗಿದೆ.
 
ಇಂಗ್ಲೇಂಡ್ ವಲಯ ಶುಭಾರಂಭ:
 
ಶ್ರೀಮಠದ ಸಮಾಜಮುಖೀ ಕಾರ್ಯಕ್ರಮಗಳ ಅನುಷ್ಠಾನಕ್ಕಾಗಿ ಇಂಗ್ಲೇಂಡಿನಲ್ಲಿ ಶ್ರೀಮಠದ ವಲಯವನ್ನು ಸಂಘಟಿಸಲಾಗಿದ್ದು, ಆಂಗ್ಲರ ನಾಡಲ್ಲಿ ಭಾರತದ ಕಂಪು, ಶ್ರೀಮಠದ ಸುಗಂಧ ಪಸರಿಸಲಿ ಎಂದು ಶ್ರೀಗಳು ಆಶೀರ್ವದಿಸಿದರು. ಕಳೆದ ವರ್ಷ ಸಿಂಗಾಪುರ ಮತ್ತು ದುಬೈ ವಲಯ ಆರಂಭವಾಗಿದ್ದನ್ನು ಇಲ್ಲಿ ಸ್ಮರಿಸಬಹುದು.
 
ಸಭೆಯಲ್ಲಿ ಶ್ರೀಭಾರತೀಪ್ರಕಾಶನವು ಹೊರತಂದಿರುವ ಸಾಧನಾಪಂಚಕ ಧ್ವನಿಮುದ್ರಿಕೆ ಹಾಗೂ ಕೃಷ್ಣಾನಂದ ಶರ್ಮರು ರಚಿಸಿದ ಚರಿತಾರ್ಥರು ಎಂಬ ಹೊತ್ತಿಗೆಯನ್ನು ಪೂಜ್ಯ ಶ್ರೀಗಳು ಲೋಕಾರ್ಪಣೆಗೊಳಿಸಿದರು. ಸಭಾಕಾರ್ಯಕ್ರಮದ ನಂತರ ಕುಮಾರಿ ತುಳಸಿ ಅವರ ಯಕ್ಷರೂಪಕ ಕಾರ್ಯಕ್ರಮ ಸಂಪನ್ನವಾಯಿತು.
 
ನಾಡಿನ ವಿವಿಧ ಭಾಗಗಳ ಭಕ್ತರು, ಶ್ರೀಮಠದ ಪದಾಧಿಕಾರಿಗಳು, ಹಾಗೂ ಅನೇಕ ಗಣ್ಯರು ಉಪಸ್ಥಿತರಿದ್ದರು. ಎಂದಿನಂತೆ ಶ್ರೀಕರಾರ್ಚಿತ ಪೂಜೆ, ಕಾಮಧೇನು ಹವನ, ಮಾತೆಯರಿಂದ ಕುಂಕುಮಾರ್ಚನೆ, ಆದಿತ್ಯಹೃದಯ ಪಠಣ, ಫಲಸಮರ್ಪಣೆ, ಮಂತ್ರಾಕ್ಷತೆ ಹಾಗೂ ಸಾಧನಾಪಂಚಕ ಪ್ರವಚನ ನಡೆಯಿತು.
 
ಇಂದಿನ ಕಾರ್ಯಕ್ರಮ (24.07.2016):
 
ಬೆಳಗ್ಗೆ 9.00 : ಕುಂಕುಮಾರ್ಚನೆ
ಬೆಳಗ್ಗೆ 10.00 : ಶ್ರೀಕರಾರ್ಚಿತದೇವತಾಪೂಜೆ
ಬೆಳಗ್ಗೆ 11.30 : ಆದಿತ್ಯಹೃದಯ ಪಠಣ
ಬೆಳಗ್ಗೆ 12.00 : ಫಲಸಮರ್ಪಣೆ, ಮಂತ್ರಾಕ್ಷತೆ ಅನುಗ್ರಹ
ಅಪರಾಹ್ನ 3.00 :  ಗೋಕಥಾ
ವಿಶಿಷ್ಟ ನಿರೂಪಣೆಯ ಗೋಕಥಾ: ಗೋವಿನ ಕುರಿತಾದ ಕಥಾ ನಿರೂಪಣೆ, ಗಾಯನ, ಚಿತ್ರರಚನೆಗಳನ್ನೋಳಗೊಂಡ ವೈಶಿಷ್ಟ್ಯಪೂರ್ಣವಾದ 'ಗೋಕಥಾ' ಸಂಪನ್ನವಾಗಲಿದ್ದು, ಪೂಜ್ಯ ಶ್ರೀಶ್ರೀಗಳವರು ಗೋಕಥೆ ನಿರೂಪಣೆಯನ್ನು ಮಾಡಲಿದ್ದಾರೆ.
ಸೂರ್ಯಾಸ್ತ ಸಮಯಕ್ಕೆ ಶ್ರೀಕರಾರ್ಚಿತದೇವತಾಪೂಜೆ
ರಾತ್ರಿ 8.00 : ಶ್ರೀಸಂಸ್ಥಾನದವರಿಂದ 'ಸಾಧನಾಪಂಚಕ' ಪ್ರವಚನ

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡೈರಿ ರಾಜಕಾರಣಕ್ಕೆ ಕಾಲಿಟ್ಟ ಡಿಕೆ ಸುರೇಶ್‌: ನಾಮಪತ್ರ ಸಲ್ಲಿಕೆ

Jammu Kashmir: 11 ಸ್ಥಳಗಳ ಮೇಲೆ SIA ದಾಳಿ

ಆರತಕ್ಷತೆ ವೇಳೆ ಮಧುಮಗ ಕುಸಿದುಬಿದ್ದು ಸಾವು: ಮದುವೆ ಮನೆಯಲ್ಲಿ ಸೂತಕದ ಛಾಯೆ

ISRO: 101ನೇ ಉಪಗ್ರಹ ಉಡಾವಣೆಗೆ ಸಜ್ಜಾದ ಇಸ್ರೋ, ಇದರ ವಿಶೇಷ ಹೀಗಿದೆ

Bengaluru International Airport: ಆರಂಭದ ಬಳಿಕ ಮೊದಲ ಬಾರಿ ದಾಖಲೆಯ ಲಾಭ

ಮುಂದಿನ ಸುದ್ದಿ