Select Your Language

Notifications

webdunia
webdunia
webdunia
webdunia

ಆಶಾ ಕಾರ್ಯಕರ್ತೆಯರ ವೇತನ ಹೆಚ್ಚಳ ಸಾಧ್ಯವಿಲ್ಲ : ದಿನೇಶ್ ಗುಂಡೂರಾವ್

ಆಶಾ ಕಾರ್ಯಕರ್ತೆಯರ ವೇತನ ಹೆಚ್ಚಳ ಸಾಧ್ಯವಿಲ್ಲ : ದಿನೇಶ್ ಗುಂಡೂರಾವ್
ಬೆಂಗಳೂರು , ಸೋಮವಾರ, 10 ಜುಲೈ 2023 (15:24 IST)
ಬೆಂಗಳೂರು : ಆಶಾ ಕಾರ್ಯಕರ್ತೆಯರ ಸಂಬಳ ಹೆಚ್ಚಳ ಮಾಡುವ ಪ್ರಸ್ತಾಪ ಸರ್ಕಾರದ ಮುಂದೆ ಇಲ್ಲ ಅಂತಾ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
 
ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ JDSನ ತಿಪ್ಪೇಸ್ವಾಮಿ ಪ್ರಶ್ನೆ ಕೇಳಿದರು. ಆಶಾ ಕಾರ್ಯಕರ್ತೆಯರ ಸಂಬಳ ಜಾಸ್ತಿ ಮಾಡಬೇಕು. ಅವರಿಗೂ ಪಿಂಚಣಿ ಕೊಡಬೇಕು. ಹೊಸ ಸ್ಮಾರ್ಟ್ಫೋನ್ಗಳನ್ನ ನೀಡಬೇಕು ಅಂತಾ ಆಗ್ರಹಿಸಿದರು. 

ಇದಕ್ಕೆ ಉತ್ತರ ನೀಡಿದ ಸಚಿವ ದಿನೇಶ್ ಗುಂಡೂರಾವ್, ಆಶಾ ಕಾರ್ಯಕರ್ತೆಯರ ಸಂಬಳ ಹೆಚ್ಚಳ ಮಾಡುವ ಪ್ರಸ್ತಾಪ ಸರ್ಕಾರದ ಮುಂದೆ ಇಲ್ಲ. ರಾಜ್ಯ ಸರ್ಕಾರದಿಂದ ಈಗಾಗಲೇ 5 ಸಾವಿರ ಗೌರವ ಧನ ನೀಡಲಾಗ್ತಿದೆ. ಕೇಂದ್ರದಿಂದ 5-8 ಸಾವಿರ ಗೌರವ ಧನ ಸಿಗುತ್ತಿದೆ. ಒಟ್ಟಾರೆ 10-13 ಸಾವಿರ ಗೌರವ ಧನ ಸಿಗುತ್ತಿದೆ. ಸದ್ಯ ಅವರ ಗೌರವ ಧನ ಹೆಚ್ಚಳ ಸಾಧ್ಯವಿಲ್ಲ ಎಂದು ಹೇಳಿದರು. 

Share this Story:

Follow Webdunia kannada

ಮುಂದಿನ ಸುದ್ದಿ

ಬಾಲಕನ ಮೇಲೆ ಅತ್ಯಾಚಾರ ಎಸಗಿದ ದುರುಳರು !