Select Your Language

Notifications

webdunia
webdunia
webdunia
webdunia

ಕಾಂಗ್ರೆಸ್ ಭಯದಿಂದ ಸರ್ಕಾರಿ ನೌಕರರ ಸಂಬಳ ಹೆಚ್ಚಳ

ಕಾಂಗ್ರೆಸ್ ಭಯದಿಂದ ಸರ್ಕಾರಿ ನೌಕರರ ಸಂಬಳ ಹೆಚ್ಚಳ
ಬೆಂಗಳೂರು , ಗುರುವಾರ, 2 ಮಾರ್ಚ್ 2023 (14:31 IST)
ಬೆಂಗಳೂರು : ನಾವು ಸರ್ಕಾರಿ ನೌಕರರಿಗೆ ಸಂಬಳ ಜಾಸ್ತಿ ಮಾಡುತ್ತೇವೆ ಎಂದು ಹೇಳಿದ ಮೇಲೆ ಬೊಮ್ಮಾಯಿ ಸರ್ಕಾರ 17% ವೇತನ ಹೆಚ್ಚಳ ಮಾಡಿದೆ ಅಂತ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.
 
ಸರ್ಕಾರಿ ನೌಕರರ ಸಂಬಳ ಹೆಚ್ಚಳ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ನಮ್ಮ ಯಾತ್ರೆಗೆ ದೊಡ್ಡ ಬೆಂಬಲ ಸಿಕ್ಕಿದೆ. ಸಿದ್ದರಾಮಯ್ಯ ಯಾತ್ರೆಯನ್ನು ನೋಡಿದ್ದೀರಿ. ಜೆಪಿ ನಡ್ಡಾ ಯಾತ್ರೆಗೂ ನೋಡಿದ್ದೀರಾ. ಜನ ನಮ್ಮ ಪರ ಇದ್ದಾರೆ. ನಮ್ಮ ಕೆಲಸ, ನಮ್ಮ ಮಾತು, ನಮ್ಮ ನುಡಿ ನಮ್ಮ ಗ್ಯಾರಂಟಿ ಜನ ಒಪ್ಪುತ್ತಾರೆ ಎಂದು ವಿಶ್ವಾಸ ವ್ಯಕ್ತಡಿಸಿದರು.

ಸರ್ಕಾರ ಏನೇ ಗ್ಯಾರಂಟಿ ಕೊಡಲಿ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನಾನು ಸರ್ಕಾರಿ ನೌಕರರಿಗೆ ವೇತನ ಕೊಡ್ತೀನಿ ಅಂತ ಹೇಳಿದೆ. ನಾನು ಹೇಳಿದ ಮೇಲೆ ಸಿಎಂ 17% ಹೆಚ್ಚಳ ಮಾಡಿದ್ದಾರೆ. ನಾನು ಮಾತು ಕೊಟ್ಟ ಮೇಲೆ ಮಧ್ಯಂತರ ಪರಿಹಾರ ಸರ್ಕಾರ ಕೊಟ್ಟಿದೆ. ಕಾಂಗ್ರೆಸ್ ಪಕ್ಷ ಅವರಿಗೆ ಒಂದು ದಾರಿ ಕೊಟ್ಟಿತ್ತು. ನಾವು ಹೇಳಿದ ಬಳಿಕ ಸರ್ಕಾರ ಘೋಷಣೆ ಮಾಡಿತು ಅಂತ ವೇತನ ಹೆಚ್ಚಳ ಕ್ರೆಡಿಟ್ ತೆಗೆದುಕೊಂಡರು.


Share this Story:

Follow Webdunia kannada

ಮುಂದಿನ ಸುದ್ದಿ

ಯಡವಟ್ಟಿನ ಮೇಲೆ ಎಡವಟ್ಟು ಮಾಡ್ತಿರುವ BMRCL