Webdunia - Bharat's app for daily news and videos

Install App

1 ಕೋಟಿ ರೂಪಾಯಿ ಮೌಲ್ಯದ ಪ್ರಾಚೀನ ಕಾಲದ ವಸ್ತುಗಳ ಮಾರಾಟಕ್ಕೆ ಯತ್ನ

Webdunia
ಶನಿವಾರ, 13 ನವೆಂಬರ್ 2021 (19:44 IST)
ಬೆಂಗಳೂರು: ಅರಣ್ಯ ಇಲಾಖೆಯಿಂದ ನಿರಾಕ್ಷೇಪಣ ಪ್ರಮಾಣಪತ್ರ ಪಡೆದುಕೊಳ್ಳದೆ ಅನಧಿಕೃತವಾಗಿ ನಗರದಲ್ಲಿ ಆನೆಯ ಕಾಲಿನ ಪಾದ ಸೇರಿದಂತೆ ಸುಮಾರು 1 ಕೋಟಿ ರೂಪಾಯಿ ಮೌಲ್ಯದ ಪ್ರಾಚೀನ ಕಾಲದ ವಸ್ತುಗಳ ಮಾರಾಟಕ್ಕೆ ಯತ್ನಿಸಿದ ಆರೋಪಿಯನ್ನು ಕಾಡುಗೊಂಡನಹಳ್ಳಿ ಪೊಲೀಸರು ಬಂಧಿಸಿದ್ದಾರೆ.
ಕೆಜಿಹಳ್ಳಿಯ ಹೆಚ್​ಬಿಆರ್ ಲೇಔಟ್ ನಿವಾಸಿ ಆರ್ಯನ್ ಖಾನ್ ಬಂಧಿತ ಆರೋಪಿ. ಬಂಧಿತನಿಂದ ಆನೆ ಕಾಲಿನ ಪಾದ, ತಾಮ್ರದ ಪ್ಲೇಟ್, ಒಂದು ಮಿಲ್ಕ್ ಜಗ್, ಒಂದು ಟೀ ಪಾಟ್, ಒಂದು ಮಗರ್ ಸ್ಟೇಯರ್, ಭೂತಾನ್ ಶೋ ಪೀಸ್, ಐರೀಷ್ ಟೀ ಮೇಕರ್, ಶುಗರ್ ಪಾಟ್, ಸ್ಮಾಲ್ ಮಿಲ್ಕ್ ಜಗ್, ಒಂದು ಜರ್ಮನ್ ಸಿಲ್ವರ್ ಸೌಟು, ಎರಡು ಜರ್ಮನ್ ಸಿಲ್ವರ್ ಆಶ್ ಟ್ರೇ, 5 ಚಿಕ್ಕ ಮಸ್ಟರ್ಡ್ ಟ್ರೇ, ಎರಡು ಚಿಕ್ಕ ಮಂಚಗಳು, ಎರಡು ಆಫ್ರಿಕನ್ ಆರ್ಟ್‌ವುಡ್ ಸ್ಪೂನ್, ಪ್ರಾಣಿಯ ಮೂಳೆಯಿಂದ ಮಾಡಿದ ಸ್ಪೂನ್, ಎರಡು ಜರ್ಮನ್ ಸಿಲ್ವರ್‌ ಫೋರ್ಕ್, ಟೇಬಲ್ ನೈಫ್ ಶಾರ್ಪ್‌ನರ್ ಹಾಗೂ ಮೊಬೈಲ್ ಫೋನ್ ವಶಪಡಿಸಿಕೊಳ್ಳಲಾಗಿದೆ.
ಆರೋಪಿಯು ತನ್ನ ಅಣ್ಣನ ಮಗನ ವೈದ್ಯಕೀಯ ಚಿಕಿತ್ಸೆ  ಕೊಡಿಸುವ ಸಲುವಾಗಿ ಮತ್ತು ತನ್ನ ಮನೆಯ ಬಾಡಿಗೆ ಕಟ್ಟಲು ಮಾಡಿಕೊಂಡಿರುವ ಸಾಲ ತೀರಿಸಲು ಈ ವಸ್ತುಗಳ ಮಾರಾಟಕ್ಕೆ ಪ್ರಯತ್ನಿಸುತ್ತಿರುವುದಾಗಿ ಪೊಲೀಸರ ಮುಂದೆ ತಿಳಿಸಿದ್ದಾನೆ.
ವಶಪಡಿಸಿಕೊಂಡಿರುವ ವಸ್ತುಗಳಿಗೆ ಪಾಶ್ಚಿಮಾತ್ಯ ದೇಶಗಳಲ್ಲಿ ಅಪಾರ ಬೇಡಿಕೆ ಇದೆ ಎಂದು ತಿಳಿದು ಬಂದಿದೆ. ಸದ್ಯ ಪ್ರಕರಣ ಕುರಿತು ಕಾಡುಗೊಂಡನಹಳ್ಳಿ ಪೊಲೀಸ್ ಠಾಣೆಯಲ್ಲಿ ವನ್ಯಜೀವಿ ಸಂರಕ್ಷಣಾ ಕಾಯ್ದೆ ಅಡಿ ಪ್ರಕರಣ ದಾಖಲಾಗಿದೆ.
ಪ್ರಾಚೀನ ಕಾಲದ ವಸ್ತುಗಳು ಸಿಕ್ಕಿದ್ದು ಹೇಗೆ? : ಆರೋಪಿ ಆರ್ಯನ್ ಖಾನ್ ತಾತ ಕೆಜಿ ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನೆಲೆಸಿದ್ದ ಆಂಗ್ಲೋ-ಇಂಡಿಯನ್  ಮಹಿಳೆ ಮನೆಯಲ್ಲಿ ಕೆಲಸ ಮಾಡುತ್ತಿದ್ದರು. ಇಂಗ್ಲೆಂಡ್​ಗೆ ಹೋಗುವಾಗ ಮನೆಯಲ್ಲಿದ್ದ ಪ್ರಾಚೀನ ವಸ್ತುಗಳನ್ನು ಉಡುಗೊರೆಯಾಗಿ ಆ ಮಹಿಳೆ ನೀಡಿದ್ದರು.
ಕಾನೂನು ಪ್ರಕಾರ ವನ್ಯಜೀವಿಗೆ ಸಂಬಂಧಿಸಿ ವಸ್ತುಗಳನ್ನು ಇಟ್ಟುಕೊಳ್ಳಬೇಕಾದರೆ ಅರಣ್ಯ ಇಲಾಖೆಯಿಂದ ಪ್ರಮಾಣಪತ್ರ ಪಡೆಯಬೇಕಾಗುತ್ತದೆ. ಜೊತೆಗೆ ಇನ್ನೊಬ್ಬರಿಗೆ ಮಾರಾಟ ಮಾಡಬೇಕಾದರೂ ದಾಖಲಾತಿ ಮಾಡಿಸಿಕೊಳ್ಳಬೇಕಿದೆ.ಆದರೆ, ಆರೋಪಿಯು ಯಾವುದೇ ರೀತಿಯ ನಿಯಮಗಳನ್ನ ಪಾಲಿಸದೆ ಅಕ್ರಮವಾಗಿ ಕೋಟ್ಯಂತರ ಹಣಕ್ಕೆ ಮಾರಾಟ ಮಾಡಲು ಯತ್ನಿಸುತ್ತಿದ್ದ ಎಂದು ನಗರ ಪೂರ್ವ ವಿಭಾಗದ ಡಿಸಿಪಿ ಶರಣಪ್ಪ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments