Webdunia - Bharat's app for daily news and videos

Install App

ರೈತರು ಅಡವಿಟ್ಟಿದ್ದ ಚಿನ್ನಾಭರಣ ಫೈನಾನ್ಸ್‌ ಗೆ ಮಾರಾಟ; ಬ್ಯಾಂಕ್‌ ಮ್ಯಾನೇಜರ್‌ ಬಂಧನ

Webdunia
ಸೋಮವಾರ, 28 ಮಾರ್ಚ್ 2022 (18:57 IST)
ಸಹಕಾರ ಬ್ಯಾಂಕ್ ವೊಂದರಲ್ಲಿ ರೈತರು ಅಡವಿಟ್ಟಿದ್ದ ಚಿನ್ನವನ್ನು ಬ್ಯಾಂಕ್ ನ ವ್ಯವಸ್ಥಾಪಕ ಖಾಸಗಿ ಫೈನಾನ್ಸ್ ಕಂಪನಿಗೆ ಮಾರಾಟ ಮಾಡಿ ರಿಯಲ್ ಎಸ್ಟೇಟ್ ವ್ಯವಹಾರ ನಡೆಸಿರುವುದು ಬೆಳಕಿಗೆ ಬಂದಿದೆ.
ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಮರಳವಾಡಿಯ ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ಬ್ಯಾಂಕ್ ನಲ್ಲಿ ರೈತರು ಅಡವಿಟ್ಟಿದ್ದ ಸುಮಾರು 8 ಕೆಜಿಯ ಚಿನ್ನಾಭರಣವನ್ನು ಬ್ಯಾಂಕ್ ನ ವ್ಯವಸ್ಥಾಪಕ ಗೋವಿಂದಪ್ಪ ಎನ್ನುವವರು ಫೈನಾನ್ಸ್‌ ಗೆ ಮಾರಾಟ ಮಾಡಿದ್ದಾರೆ.
ರೈತರು ತಾನು ಅಡವಿಟ್ಟಿದ್ದ ಚಿನ್ನವನ್ನು ಬಿಡಿಸಿಕೊಳ್ಳಲು ಬಂದಾಗ ಅವರಿಗೆ ಒಡವೆ ನೀಡದೆ ಮ್ಯಾನೇಜರ್‌ ಸತಾಯಿಸುತ್ತಿದ್ದ. ಈ ಬಗ್ಗೆ ಮೇಲಧಿಕಾರಿಗಳಿಗೆ ರೈತ ದೂರು ಸಲ್ಲಿಸಿದ್ದರು.
ರೈತನ ದೂರಿನ ಆಧಾರದ ಮೇಲೆ ಗೋವಿಂದಪ್ಪನನ್ನು ವಿಚಾರಿಸಿದಾಗ ಬಸ್ ನಲ್ಲಿ ಹೋಗುವಾಗ ಚಿನ್ನಾಭರಣ ಕಳತನವಾಯಿತು ಎಂದು ಸುಳ್ಳು ಹೇಳಿದ.‌ ಅನುಮಾನಗೊಂಡು ವಿಚಾರಣೆ ನಡೆಸಿದಾಗ ಸತ್ಯಾಂಶ ಹೊರಬಂದಿದೆ.
ಪ್ರಕರಣ ಸಂಬಂಧ ಗೋವಿಂದಪ್ಪನನ್ನು ಬಂಧಿಸಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಆದರೆ ಎಷ್ಟು ಮೊತ್ತದ ಚಿನ್ನಾಭರಣ ಮಾರಾಟ ಮಾಡಿದ್ದಾನೆ ಎಂಬುದು ಆಡಿಟ್ ನಂತರವೇ ಹೊರಬೀಳಬೇಕಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತನಿಖೆ ಮುನ್ನಾ ಪವಿತ್ರ ಕ್ಷೇತ್ರಕ್ಕೆ ಧಕ್ಕೆ ತರಬಾರದು: ಸ್ಪೀಕರ್ ಯುಟಿ ಖಾದರ್‌

ಮುಡಾ ಹಗರಣದಲ್ಲಿ ಸಿಎಂ ಪತ್ನಿಗೆ ರಿಲೀಫ್: ಇಡಿಗೆ ಸುಪ್ರೀಂಕೋರ್ಟ್ ಛೀಮಾರಿ

Arecanut Price: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಧರ್ಮಸ್ಥಳ ಮಂಜುನಾಥನಿಗೆ ಕೆಟ್ಟ ಹೆಸರು ತಂದ್ರೆ ಈ ಸರ್ಕಾರ ಸರ್ವನಾಶವಾಗುತ್ತದೆ: ಜನಾರ್ಧನ ರೆಡ್ಡಿ

ಮುಂದಿನ ಸುದ್ದಿ
Show comments