Webdunia - Bharat's app for daily news and videos

Install App

ಸೋದರ ಸೊಸೆ ಬೇರೆ ಮದುವೆಯಾಗುತ್ತಾಳೆಂದು ಗಂಡನನ್ನು ಬಿಟ್ಟು ಅವಳನ್ನೇ ಮದುವೆಯಾದ ಅತ್ತೆ

Sampriya
ಮಂಗಳವಾರ, 13 ಆಗಸ್ಟ್ 2024 (19:03 IST)
Photo Courtesy X
ಬಿಹಾರ: ಇಲ್ಲಿನ ಗೋಪಾಲ್ಗಂಜ್ ಜಿಲ್ಲೆಯಲ್ಲಿ ಮಹಿಳೆಯೊಬ್ಬರು ತನ್ನ ಪತಿಯನ್ನು ತೊರೆದು ಕಳೆದ ಮೂರು ವರ್ಷಗಳಿಂದ ಪ್ರೀತಿಸುತ್ತಿದ್ದ ಸೋದರ ಸೊಸೆಯನ್ನೇ ಹಿಂದೂ ಸಂಪ್ರದಾಯದ ಪ್ರಕಾರ ಮದುವೆಯಾಗಿರುವ ಘಟನೆ ನಡೆದಿದೆ.

ಕಳೆದ ಮೂರು ವರ್ಷಗಳಿಂದ ಸಲಿಂಗ ಸಂಬಂಧದಲ್ಲಿ ತೊಡಗಿಸಿಕೊಂಡ ನಂತರ ಸುಮನ್ ತನ್ನ ಪತಿಯನ್ನು ತೊರೆದು ತನ್ನ ಸೊಸೆ ಶೋಭಾಳೊಂದಿಗೆ ಓಡಿಹೋಗಿ ಸಪ್ತಪದಿ ತುಳಿಸಿದ್ದಾರೆ.

ಭಾರತದಲ್ಲಿ, ವಿಶೇಷವಾಗಿ ಮಹಿಳೆಯರ ನಡುವಿನ ಸಲಿಂಗ ವಿವಾಹದ ಅತ್ಯಂತ ಅಪರೂಪದ ಪ್ರಕರಣ ಕಂಡು ಬರುತ್ತದೆ. ಆದರೆ ಇದೀಗ ಬಿಹಾರದಲ್ಲಿ ನಡೆದ ಸಲಿಂಗಾ ಮದುವೆಯ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ನೆಟ್ಟಿಗರು ಬಗೆಬಗೆಯಾಗಿ ಕಮೆಂಟ್ ಮಾಡುತ್ತಿದ್ದಾರೆ.

ಆದಾಗ್ಯೂ, ದಂಪತಿಗಳ ವಿವಾಹವು ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್‌ಗಳಲ್ಲಿ ಬಿಸಿಯಾದ ಚರ್ಚೆಯನ್ನು ಹುಟ್ಟುಹಾಕಿತು, ಕೆಲವರು ಅವರ ನಿರ್ಧಾರವನ್ನು ಬೆಂಬಲಿಸಿದರು ಆದರೆ ಇತರರು ಇದನ್ನು "ಅಸ್ವಾಭಾವಿಕ", "ನೈಸರ್ಗಿಕ ನಿಯಮಗಳ ಉಲ್ಲಂಘನೆ" ಎಂದು ಕರೆದರು ಮತ್ತು ಇದನ್ನು "ಕಲಿಯುಗ್ (ಕತ್ತಲೆಯುಗ)" ಎಂದು ಕೂಡ ಕರೆದರು.

ವೈರಲ್ ಆಗುತ್ತಿರುವ ವಿಡಿಯೋದಲ್ಲಿ, ಗೋಪಾಲ್‌ಗಂಜ್ ಜಿಲ್ಲೆಯ ಬೆಲ್ವಾ ಗ್ರಾಮದ ಸ್ಥಳೀಯ ದೇವಸ್ಥಾನದಲ್ಲಿ ಮಹಿಳೆಯೊಬ್ಬರು ಸೋದರ ಸೊಸೆಯೊಂದಿಗೆ ಹಾರ ಮತ್ತು ಪ್ರತಿಜ್ಞೆ ವಿನಿಮಯ ಮಾಡಿಕೊಳ್ಳುತ್ತಿರುವುದನ್ನು ಕಾಣಬಹುದು.

ಮಹಿಳೆಯನ್ನು, ವಿಶೇಷವಾಗಿ ತನ್ನ ಸ್ವಂತ ಸೊಸೆಯನ್ನು ಮದುವೆಯಾಗುವ ನಿರ್ಧಾರದ ಬಗ್ಗೆ ಕೇಳಿದಾಗ,  ಶೋಭಾ ನನ್ನ ಜೀವನದ ಪ್ರೀತಿ. ಬೇರೆಯವರನ್ನು ಮದುವೆಯಾದರೆ ಆಕೆಯನ್ನು ಕಳೆದುಕೊಳ್ಳುವುದನ್ನು ನಾನು ಊಹಿಸಲೂ ಸಾಧ್ಯವಾಗಲಿಲ್ಲ. ಒಬ್ಬರನ್ನೊಬ್ಬರು ಬಿಟ್ಟಿರಕ್ಕೆ ಆಗಲಾರದೆ, ಸಮಾಜದ ಬಗ್ಗೆ ತಲೆಕೆಡಿಸಿಕೊಳ್ಳದೆ  ಎಲ್ಲವನ್ನೂ ಬಿಟ್ಟು ಮದುವೆಯಾಗಲು ನಿರ್ಧರಿಸಿದೆವು ಎಂದು ಸುಮನ್ ಹೇಳಿದರು.

ಶೋಭಾ ಕೂಡ ಇದೇ ಹಾದಿಯಲ್ಲಿ ಮಾತನಾಡಿ, ತಾವು ಜೊತೆಗಿರುವವರೆಗೂ ಜಗತ್ತು ಏನು ಹೇಳುತ್ತದೆ ಎಂದು ತಲೆಕೆಡಿಸಿಕೊಳ್ಳುವುದಿಲ್ಲ ಎಂದರು.
<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

DK Shivakumar: ಡಿಕೆ ಶಿವಕುಮಾರ್ ಭೇಟಿಯಾದ ಯಡಿಯೂರಪ್ಪ ಪುತ್ರ ಸಂಸದ ರಾಘವೇಂದ್ರ: ವಿವಾದ ಮಾಡ್ಬೇಡಿ ಎಂದು ರಿಕ್ವೆಸ್ಟ್

Tiger viral video: ಹೆಬ್ಬಾವನ್ನೇ ತಿನ್ನಲು ಹೋದ ಹುಲಿ ಸಂಕಟ ಹೇಳತೀರದು

CET exam Brahmin student ಜನಿವಾರ ತೆಗೆಸಿದ ಘಟನೆ: ಕ್ಷಮೆ, ಅಧಿಕಾರಿ ಸಸ್ಪೆಂಡ್ ಓಕೆ, ವಿದ್ಯಾರ್ಥಿಯ ಭವಿಷ್ಯದ ಕತೆಯೇನು

Karnataka caste census: ಜಾತಿಗಣತಿ ವರದಿಯಿಂದ ಹೀಗಾಗಿದೆ ಸಾರ್ ಎಂದು ರಾಹುಲ್ ಗಾಂಧಿಗೆ ವರದಿ ಒಪ್ಪಿಸಲು ತಯಾರಿ

Gold price today: ಚಿನ್ನದ ಬೆಲೆ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ