Webdunia - Bharat's app for daily news and videos

Install App

ಡಿಕೆ ಸುರೇಶ್ ಹೆಸರು ಬಳಸಿ ಚಿನ್ನ ಖರೀದಿಸಿ ವಂಚನೆ: ನಟ ಧರ್ಮ ವಿರುದ್ಧವೂ ದೂರು

Krishnaveni K
ಮಂಗಳವಾರ, 24 ಡಿಸೆಂಬರ್ 2024 (12:28 IST)
ಬೆಂಗಳೂರು: ಮಾಜಿ ಸಂಸದ ಡಿಕೆ ಸುರೇಶ್ ಹೆಸರು ಬಳಸಿಕೊಂಡು ಮಹಿಳೆಯೊಬ್ಬರು ಚಿನ್ನ ಖರೀದಿಸಿದ ಪ್ರಕರಣದಲ್ಲಿ ಸ್ಯಾಂಡಲ್ ವುಡ್ ಧರ್ಮ ಹೆಸರೂ ಕೇಳಬಂದಿದ್ದು ಎಫ್ಐಆರ್ ದಾಖಲಾಗಿದೆ.
 

ಪ್ರಕರಣಕ್ಕೆ ಸಂಬಂಧಿಸಿದಂತೆ ಐಶ್ವರ್ಯಾ, ನಟ ಧರ್ಮ ಮತ್ತು ಹರೀಶ್ ಎಂಬವರ ವಿರುದ್ಧ ದೂರು ದಾಖಲಾಗಿದೆ. ವಾರಾಹಿ ವರ್ಲ್ಡ್ ಆಫ್ ಗೋಲ್ಡ್ ಶಾಪ್ ನಿಂದ ಐಶ್ವರ್ಯಾ 11 ಬಾರಿ ಚಿನ್ನ ಖರೀದಿ ಮಾಡಿದ್ದಳು. ಒಟ್ಟು ಸುಮಾರು 14 ಕೆಜಿಯಷ್ಟು ಚಿನ್ನ ಖರೀದಿ ಮಾಡಿದ್ದಾರೆ ಎಂಬ ಆರೋಪವಿದೆ. ಈ ಸಂಬಂಧ ವಾರಾಹಿ ಮಾಲಿಕರಾದ ವನಿತಾ ಐತಾಳ್ ದೂರು ನೀಡಿದ್ದರು.

ಕಳೆದ ಜನವರಿಯಿಂದ ಇಲ್ಲಿಯವರೆಗೆ ಐಶ್ವರ್ಯಾ ಚಿನ್ನ ಖರೀದಿ ಮಾಡಿದ್ದರೂ ಹಣ ಕೊಟ್ಟಿರಲಿಲ್ಲ. ಕೇಳಿದಾಗ ಡಿಕೆ ಸುರೇಶ್ ಹೆಸರು ಹೇಳಿದ್ದಾರೆ. ಅವರ ಕಡೆಯಿಂದಲೇ ಫೋನ್ ಮಾಡಿಸುವುದಾಗಿ ಬೆದರಿಕೆ ಹಾಕಿದ್ದಾರೆ. ನಟ ಧರ್ಮ ಕೈಯಲ್ಲಿ ಡಿಕೆ ಸುರೇಶ್ ರಂತೇ ಮಿಮಿಕ್ರಿ ಮಾಡಿ ಮಾತನಾಡಿಸಿ ಸಮಯಾವಕಾಶ ಕೇಳಿದ್ದರು. ಕೊನೆಗೆ ಧರ್ಮನನ್ನು ಕಳುಹಿಸಿ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದರು.

ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ನಟ ಧರ್ಮ, ಐಶ್ವರ್ಯಾ ಸೇರಿದಂತೆ ಮೂವರ ವಿರುದ್ಧ ಕೇಸ್ ದಾಖಲಿಸಿ ವಿಚಾರಣೆ ನಡೆಸುತ್ತಿದ್ದಾರೆ. ಕೊಲೆ ಬೆದರಿಕೆ, ಬೆದರಿಕೆ, ನಿಂದನೆ ಸೇರಿದಂತೆ ಹಲವು ಆರೋಪಗಳನ್ನು ಮಾಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಸಿಕಾಂತ್ ಸೆಂಥಿಲ್ ಮಾನನಷ್ಟ ಮೊಕದ್ದಮೆಗೆಲ್ಲಾ ನಾನು ಹೆದರಲ್ಲ: ಜನಾರ್ಧನ ರೆಡ್ಡಿ

ಸೋಶಿಯಲ್ ಮೀಡಿಯಾದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಅವಹೇಳಕಾರಿ ಪೋಸ್ಟ್‌: ಎಫ್‌ಐಆರ್‌

ಬಾ ನಲ್ಲ ಮದುಚಂದ್ರಕ್ಕೆ ಪ್ರಕರಣ: ರಾಜಾ ರಘುವಂಶಿ ಮರ್ಡರ್ ಕೇಸ್‌ನಲ್ಲಿ ಮಹತ್ವದ ಬೆಳವಣಿಗೆ

ಜನಾರ್ದನ ರೆಡ್ಡಿ ವಿರುದ್ಧ ಮಾನಮಷ್ಟ ಮೊಕದ್ದಮೆ ದಾಖಲಿಸಿದ ಸಸಿಕಾಂತ್ ಸೆಂಥಿಲ್

ಸಂಚಾರ ನಿಯಮ ಉಲ್ಲಂಘಟನೆ, ಸಿಎಂ ಸಿದ್ದರಾಮಯ್ಯನೂ ಕಟ್ಟಬೇಕಾಯಿತು ಭಾರೀ ದಂಡ

ಮುಂದಿನ ಸುದ್ದಿ
Show comments