Webdunia - Bharat's app for daily news and videos

Install App

ಮೇಕೆದಾಟು ಪಾದಯಾತ್ರೆಗೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಬೆಂಬಲ

Webdunia
ಶುಕ್ರವಾರ, 7 ಜನವರಿ 2022 (14:04 IST)
ಮೇಕೆದಾಟು ಪಾದಯಾತ್ರೆಗೆ ಕರ್ನಾಟಕ ಚಲನಚಿತ್ರ ವಾಣಿಜ್ಯಮಂಡಳಿ ಬೆಂಬಲ ಘೋಷಿಸಿದೆ. ಡಾ.ರಾಜ್‌ಕುಮಾರ್ ಕಾಲದಿಂದಲೂ ನೆಲ-ಜಲದ ಬಗ್ಗೆ ಚಲನಚಿತ್ರ ವಾಣಿಜ್ಯ ಮಂಡಳಿ ಬೆಂಬಲ ನೀಡುತ್ತಲೇ ಇದೆ.
ಮೇಕೆದಾಟು ಹೋರಾಟಕ್ಕೆ ನಮ್ಮ ಸಂಪೂರ್ಣ ಬೆಂಬಲವಿದೆ ಎಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಜಯರಾಜ್.
 
ಇದು ಪಕ್ಷಾತೀತ ಹೋರಾಟವಾಗಿರುವುದರಿಂದ ಪಾದಯಾತ್ರೆಗೆ ಬೆಂಬಲ ನೀಡಬಹುದಾಗಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ವಾಣಿಜ್ಯ ಮಂಡಳಿಗೆ ಬಂದು ಬೆಂಬಲ ಕೋರಿದರು. ಇದರಲ್ಲಿ ಎಲ್ಲರೂ ಭಾಗವಹಿಸುತ್ತಿದ್ದಾರೆ. ನಮ್ಮ ಹನ್ನನ್ನು ಪ್ರತಿಪಾದಿಸಲು ನಾವು ಕೂಡ ಸೇರಿಕೊಳ್ಳುತ್ತೇವೆ.
 
ತಮಿಳುನಾಡಿಗೆ ನೂರು ಟಿಎಂಸಿ ನೀರು ಬಿಡಬೇಕು. ಆದರೆ, 400 ಟಿಎಂಸಿ ನೀರು ಹರಿಯುತ್ತಿದೆ. ಹೆಚ್ಚುವರಿಯಾಗಿ ಹರಿಯುತ್ತಿರುವ ನೀರನ್ನು ನಾವು ಉಪಯೋಗಿಸಲು ಹೋರಾಡಬೇಕಾಗಿದೆ. ಇದು ನಾಲ್ಕು ಜಿಲ್ಲೆಗಳಿಗೆ ಕುಡಿಯುವ ನೀರಿಗಾಗಿ ಹೋರಾಟವಾಗಿದೆ. ಬೆಂಗಳೂರು ಬೃಹದಾಕಾರವಾಗಿ ಬೆಳೆಯುತ್ತಿದೆ. ಕುಡಿಯುವ ನೀರಿನ ಅಗತ್ಯತೆ ಹೆಚ್ಚುತ್ತಿದೆ. ಇದನ್ನು ನೀಗಿಸಲು ಮೇಕೆದಾಟು ಯೋಜನೆ ಅನುಕೂಲ ಯೋಜನೆ. ಕೊರೊನಾ ನಿಯಮಗಳು ಭೌತಿಕವಾಗಿ ನಾವೆಲ್ಲರೂ ಒಂದೇ ಬಾರಿ ಭಾಗವಹಿಸಲು ಸಾಧ್ಯವಾಗುತ್ತಿಲ್ಲ. ಆದರೆ, ಒಂದೊಂದು ದಿನ ಅವರ ಅನುಕೂಲಕ್ಕೆ ತಕ್ಕಂತೆ ಹೋರಾಟದಲ್ಲಿ ಪಾಲ್ಗೊಳ್ಳುತ್ತೇವೆ ಎಂದು ಹೇಳಿದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments