ಯತ್ನಾಳ್​ಗೆ ಸಂಗಮೇಶ್ ನಿರಾಣಿ ತಿರುಗೇಟು

Webdunia
ಮಂಗಳವಾರ, 17 ಜನವರಿ 2023 (19:34 IST)
ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ವಿಚಾರವಾಗಿ ಮುರುಗೇಶ ನಿರಾಣಿ ಹಾಗೂ ಬಸನಗೌಡ ಪಾಟೀಲ ಯತ್ನಾಳ್ ನಡುವೆ ಕಳೆದ ಕೆಲವು ದಿನಗಳಿಂದ ತೀವ್ರ ವಾಕ್ಸಮರ ನಡೆಯುತ್ತಿದೆ. ಆರಂಭದಲ್ಲಿ ಜೊತೆಗಿದ್ದ ನಿರಾಣಿ, ಸಚಿವ ಸ್ಥಾನ ಸಿಕ್ಕ ಬಳಿಕ ತಮ್ಮ ವರಸೆ ಬದಲಾಯಿಸಿದ್ದಾರೆಂಬ ಆರೋಪ ಮಾಡಿದ್ದ ಶಾಸಕ ಯತ್ನಾಳ್, ‘ಪಿಂಪ್ ಸಚಿವ’ ಪದ ಪ್ರಯೋಗ ಮಾಡಿದ್ದರು. ಯತ್ನಾಳ್ ಹೇಳಿಕೆಗೆ ಸಚಿವ ಮುರುಗೇಶ್ ನಿರಾಣಿ ಸಹೋದರ ಸಂಗಮೇಶ್ ನಿರಾಣಿ ತಿರುಗೇಟು ನೀಡಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಯತ್ನಾಳ್ ಭಾಷೆಯಲ್ಲಿಯೇ ಪದ ಪ್ರಯೋಗ ಮಾಡಿದ್ದಾರೆ. ಶಿಖಂಡಿ ಬಸ್ಯಾ ನಡುಬೀದಿಯಲ್ಲಿ ಬೆತ್ತಲಾಗುವ ಕಾಲ ಬಂದಿದೆ. ಬಾಯಿ ಹರುಕನಂತೆ ಮಾತನಾಡುವ ನಾಮರ್ಧ ನಿನ್ನದೇ ಭಾಷೆಯಲ್ಲಿಯೇ ಉತ್ತರ ನೀಡುತ್ತೇನೆ. ಒಬ್ಬ ಅಪ್ಪನಿಗೆ ಹುಟ್ಟದ ನಿನಗೆ ಅಂತ್ಯ ಹಾಡುವ ಕಾಲ ಬಂದಿದೆ. ನೇರ ಕಾದಾಟಕ್ಕೆ ಕಣಕ್ಕೆ ಬಂದರೆ ನಿನ್ನ ತಾಕತ್ತು ತಿಳಿಯುತ್ತದೆ. ರಾಜಕೀಯ ಮರುಜನ್ಮ ಕೊಟ್ಟವರಿಗೆ ರಾಜಕೀಯ ಮರಣ ಶಾಸನ ಬರೆಯುವುದು ಗೊತ್ತಿದೆ. ಲಕ್ಷಾಂತರ ಜನರಿಗೆ ಅನ್ನ, ಆಶ್ರಯ, ಜೀವನ ಕೊಟ್ಟ ಧರ್ಮಾತ್ಮ ಮುರುಗೇಶ ನಿರಾಣಿಯವರ ತೇಜೋವಧೆಗೆ ನಿಂತ ಮುಠ್ಠಾಳರಿಗೆ ಕಾಲವೇ ಉತ್ತರ ನೀಡುತ್ತದೆ. ಮುರುಗೇಶ ನಿರಾಣಿ ಎಂಬ ಪ್ರಖರ ಸೂರ್ಯನೆದುರು ನಿಂತವರು ಭಸ್ಮವಾಗಿದ್ದಾರೆ ನೆನಪಿರಲಿ ಎಂದು ಸಂಗಮೇಶ್ ನಿರಾಣಿ ಕಿಡಿಕಾರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬರ ಪರಿಸ್ಥಿತಿಯಿಂದ ಕುಡಿಯುವ ನೀರಿಗೆ ತೊಂದರೆ ಆಗಬಾರದೆಂದು ಡಿಕೆ ಶಿವಕುಮಾರ್ ಮಹತ್ವದ ಘೋಷಣೆ

ಬಂಟ್ವಾಳದ ಲಾವಣ್ಯ ಹತ್ಯೆ ಪ್ರಕರಣ: ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆ ನೀಡಿದವರಿಗೆ ಬಿಗ್ ಶಾಕ್

ಅಯೋಧ್ಯೆ ರಾಮಮಂದಿರದ ದೇಣಿಗೆ 'ಕಳ್ಳತನ': ಪ್ರಧಾನಿ ಮೋದಿಗೆ ಪತ್ರ ಬರೆದ ರಾಹುಲ್‌, ಖರ್ಗೆ

ದೀರ್ಘಕಾಲದ ಸಂಗಾತಿ ಕಳೆದುಕೊಂಡ ದೇವೇಗೌಡರ ಕಣ್ಣೀರು ಒರೆಸಿ ಸಂತೈಸಿದ ಮಾಜಿ ಸಿಎಂ ಸಿದ್ದರಾಮಯ್ಯ

ರಾಮಮಂದಿರ ದೇಣಿಗೆ ವಿವಾದ, ಪ್ರಧಾನ ಮಂತ್ರಿಯವರೇ, ಮೌನ ಮುರಿಯಿರಿ: ಜೈರಾಮ್ ರಮೇಶ್

ಮುಂದಿನ ಸುದ್ದಿ
Show comments