Webdunia - Bharat's app for daily news and videos

Install App

ಸಂಗೊಳ್ಳಿ ರಾಯಣ್ಣ ಬ್ರಿಗೇಡ್‌ನ ಉದ್ದೇಶಲ್ಲಿ ಬದಲಾವಣೆ: ಉಲ್ಟಾ ಹೊಡೆದ ಈಶ್ವರಪ್ಪ

Webdunia
ಮಂಗಳವಾರ, 27 ಡಿಸೆಂಬರ್ 2016 (14:59 IST)
ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಬ್ರಿಗೇಡ್‌ನ ಉದ್ದೇಶ ಬದಲಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ.
 
ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿ ಪಕ್ಷವನ್ನು ಅಧಿಕಾರಕ್ಕೆ ತರುವ ಉದ್ದೇಶವನ್ನು ಸಂಗೊಳ್ಳಿ ರಾಯಣ ಬ್ರಿಗೇಡ್ ಹೊಂದಿತ್ತು. ಆದರೆ, ಇದೀಗ ಬ್ರಿಗೇಡ್‌ನ ಉದ್ದೇಶ ಬದಲಾಗಿದ್ದು, ಕೇವಲ ದಲಿತರು ಹಾಗೂ ಹಿಂದುಳಿದ ವರ್ಗಗಳ ಅಭಿವೃದ್ಧಿಗಾಗಿ ಕೆಲಸ ಮಾಡಲಿದೆ ಎಂದು ಸ್ಪಷ್ಟಪಡಿಸಿದರು.
 
ಸಂಗೊಳ್ಳಿ ರಾಯಣ್ಣ ಬ್ರಿಗೇಡ್‌ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರ ಜೊತೆ ಚರ್ಚಿಸಿದ್ದೇನೆ. ಅವರು ಸಹ ಬ್ರಿಗೇಡ್‌ಗೆ ಯಾವುದೇ ಆಕ್ಷೇಪ ವ್ಯಕ್ತಪಡಿಸಿಲ್ಲ ಎಂದು ಹೇಳಿದರು.
 
ಬ್ರಿಗೇಡ್‌ಗೆ ದಲಿತರು ಹಾಗೂ ಹಿಂದುಳಿದ ವರ್ಗದ ಜನ ಬೆಂಬಲ ವ್ಯಕ್ತಪಡಿಸಿದ್ದಾರೆ. ಆದರೆ, ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ಬ್ರಿಗೇಡ್‌ನ ಅವಶ್ಯಕತೆ ಇಲ್ಲ ಎಂದು ಬಿಎಸ್‌ವೈ ಅಭಿಪ್ರಾಯ ಪಟ್ಟ ಹಿನ್ನೆಲೆಯಲ್ಲಿ ಸಂಗೊಳ್ಳಿ ರಾಯಣ್ಣ ಬ್ರಿಗೇಡ್‌ನ ಉದ್ದೇಶ ಬದಲಾಗಿದೆ ವಿವರಣೆ ನೀಡಿದರು. 
 
ರಾಜ್ಯ ಬಿಜೆಪಿ ಪಾಳಯದಲ್ಲಿ ತಮ್ಮನ್ನು ಕಡೆಗಣಿಸಲಾಗುತ್ತದೆ ಎಂಬ ಕಾರಣಕ್ಕಾಗಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಹೆಸರಿನ ಹೊಸ ಸಂಘಟನೆ ಹುಟ್ಟು ಹಾಕುವ ಮೂಲಕ ಪಕ್ಷದಲ್ಲಿ ತಮ್ಮ ಬಲ ಪ್ರದರ್ಶನ ಮಾಡಲು ಕೆ.ಎಸ್.ಈಶ್ವರಪ್ಪ ಮುಂದಾಗಿದ್ದರು.
 
ಆದರೆ, ಸಂಗೊಳ್ಳಿ ರಾಯಣ್ಣ ಬ್ರಿಗೇಡ್‌ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಆಕ್ಷೇಪ ವ್ಯಕ್ತಪಡಿಸಿದ್ದರು. ಹಾಗೂ ಈ ಇಬ್ಬರ ನಾಯಕರ ನಡುವೆ ತೆರೆಮರೆಯ ಗುದ್ದಾಟಗಳು ನಡೆದಿದ್ದವು. ಪಕ್ಷದ ವೇದಿಕೆ ಬಿಟ್ಟು ಪ್ರತೇಕ ಸಂಘಟನೆ ಕಟ್ಟುವುದು ಸರಿಯಲ್ಲ. ಹೀಗಾಗಿ ಸಂಗೊಳ್ಳಿ ರಾಯಣ್ಣ ಬ್ರಿಗೇಡ್‌ ಕೈಬಿಡಬೇಕು ರಾಮಲಾಲ್ ಅವರು ಈಶ್ವರಪ್ಪನವರಿಗೆ ತಾಕೀತು ಮಾಡಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

30 ವರ್ಷಗಳಲ್ಲೇ ಇದು ಭೀಕರ ದಾಳಿ: ಪಹಲ್ಗಾಮ್‌ನಲ್ಲಿ ದಾಳಿಯಲ್ಲಿ 27ಕ್ಕೂ ಹೆಚ್ಚು ಪ್ರವಾಸಿಗರು ಸಾವು ಶಂಕೆ

Pehalgam terror attack: ಪ್ಯಾಂಟ್ ಹಿಡಿದೆಳೆದು ಹಿಂದೂ ಎಂದು ಕನ್ ಫರ್ಮ್ ಮಾಡಿ ಕೊಂದೇ ಬಿಟ್ಟ ಉಗ್ರರು

Pehalgam Terror Attack: ಸ್ಥಳಕ್ಕೆ ಅಮಿತ್ ಶಾ ಎಂಟ್ರಿ, ಉಗ್ರರನ್ನು ಸುಮ್ನೇ ಬಿಡಲ್ಲ ಎಂದ ಮೋದಿ

ಉಗ್ರರ ಪೈಶಾಚಿಕ ದಾಳಿಯಲ್ಲಿ ಸಿಲುಕಿದ ಶಿವಮೊಗ್ಗದ ಕುಟುಂಬ: ಕಾಶ್ಮೀರಕ್ಕೆ ರಾಜ್ಯದ ಅಧಿಕಾರಿಗಳ ದೌಡು

ಕಾಶ್ಮೀರದಲ್ಲಿ ಉಗ್ರರ ದಾಳಿಯಲ್ಲಿ ಕರ್ನಾಟಕ ಉದ್ಯಮಿ ಬಲಿ: ಪ್ರವಾಸಕ್ಕೆಂದು ತೆರಳಿದ್ದ ಕುಟುಂಬ

ಮುಂದಿನ ಸುದ್ದಿ
Show comments