Select Your Language

Notifications

webdunia
webdunia
webdunia
webdunia

ಸಂಗೊಳ್ಳಿ ರಾಯಣ್ಣ ಬ್ರಿಗೇಡ್‌ ಕೇವಲ ರಾಜಕೀಯ ಗಿಮಿಕ್: ಈಶ್ವರಪ್ಪ ವಿರುದ್ಧ ಸಿಎಂ ವಾಗ್ದಾಳಿ

ಸಂಗೊಳ್ಳಿ ರಾಯಣ್ಣ ಬ್ರಿಗೇಡ್‌ ಕೇವಲ ರಾಜಕೀಯ ಗಿಮಿಕ್: ಈಶ್ವರಪ್ಪ ವಿರುದ್ಧ ಸಿಎಂ ವಾಗ್ದಾಳಿ
ಬೆಂಗಳೂರು , ಸೋಮವಾರ, 29 ಆಗಸ್ಟ್ 2016 (14:09 IST)
ಹಿಂದುಳಿದ ವರ್ಗಗಳ ಬಗ್ಗೆ ಇಲ್ಲಸಲ್ಲದ್ದನ್ನು ಹುಟ್ಟಿಸುತ್ತಿರುವ ಬಿಜೆಪಿ ಮುಖಂಡ ಕೆ.ಎಸ್.ಈಶ್ವರಪ್ಪ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.
 
ಬಿಜೆಪಿ ಸರಕಾರ ಅಧಿಕಾರದಲ್ಲಿದ್ದಾಗ ಹಿಂದುಳಿದ ವರ್ಗದವರಿಗೆ ಯಾವ ಯೋಜನೆಗಳನ್ನು ಘೋಷಿಸಿದೆ. ಇದೀಗ ಅಧಿಕಾರ ಪಡೆಯಬೇಕು ಎನ್ನುವ ಹುನ್ನಾರದಿಂದ ಬಿಜೆಪಿ ಮುಖಂಡ ಈಶ್ವರಪ್ಪ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಸ್ಥಾಪಿಸಲು ಹೊರಟಿದ್ದಾರೆ. ಇದೊಂದು ರಾಜಕೀಯ ಗಿಮಿಕ್ ಮತ್ತೇನು ಅಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.
 
ಈಶ್ವರಪ್ಪ ಕನಸಿನ ಕೂಸಾದ ಸಂಗೊಳ್ಳಿರಾಯಣ್ಣ ಬ್ರಿಗೇಡ್ ಕುರಿತಂತೆ ವಾಗ್ದಾಳಿ ನಡೆಸಿದ ಅವರು, ಹಿಂದುಳಿದ ವರ್ಗಗಳಿಗೆ ಬಿಜೆಪಿ ನಾಯಕರ ಮತ್ತು ಈಶ್ವರಪ್ಪನವರ ಕೊಡುಗೆ ಏನು? ಮಂಡಲ್ ಕಮಿಶನ್ ವಿರೋಧಿಸಿದ್ದ ಬಿಜೆಪಿ ನಾಯಕರಿಗೆ ಹಿಂದುಳಿದ ವರ್ಗದವರ ಬಗ್ಗೆ ಮಾತನಾಡಲು ಯಾವುದೇ ನೈತಿಕ ಹಕ್ಕಿಲ್ಲ ಎಂದು ಕಿಡಿಕಾರಿದರು.
 
ಜಿಲ್ಲಾಧಿಕಾರಿ ಸಿ.ಶಿಖಾ ವರ್ಗಾವಣೆ
 
ಮೈಸೂರು ಜಿಲ್ಲಾಧಿಕಾರಿ ಸಿ.ಶಿಖಾ ಅವರ ಕೋರಿಕೆಯ ಮೇರೆಗೆ ಅವರನ್ನು ಪಿಯು ಬೋರ್ಡ್‌ಗೆ ವರ್ಗಾಯಿಸಲಾಗಿದೆಯೇ ಹೊರತು ಮರಿಗೌಡನ ಪ್ರಕರಣದಿಂದಾಗಿ ಅಲ್ಲ. ಮರಿಗೌಡ ಪ್ರಕರಣಕ್ಕೂ ಶಿಖಾ ಅವರ ವರ್ಗಾವಣೆಗೂ ಯಾವುದೇ ಸಂಬಂಧವಿಲ್ಲ. ಮರಿಗೌಡನದ್ದು ತಪ್ಪು ಎಂದು ನಾನು ಈಗಾಗಲೇ ಹೇಳಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ 

Share this Story:

Follow Webdunia kannada

ಮುಂದಿನ ಸುದ್ದಿ

ಸೆನ್ಸೆಕ್ಸ್: ಸತತ ಮೂರನೇ ದಿನವೂ ಕುಸಿತ ಕಂಡ ಶೇರುಪೇಟೆ ಸೂಚ್ಯಂಕ