Webdunia - Bharat's app for daily news and videos

Install App

ಜಾಮಿಯಾ ಮಸೀದಿ ಸ್ಥಳದಲ್ಲೇ ಹನುಮ ದೇಗುಲಕ್ಕೆ ಸಂಕಲ್ಪ

Webdunia
ಸೋಮವಾರ, 5 ಡಿಸೆಂಬರ್ 2022 (08:30 IST)
ಮಂಡ್ಯ : ಶ್ರೀರಂಗಪಟ್ಟಣದ ಜಾಮಿಯಾ ಮಸೀದಿ ಬಳಿ ಇವತ್ತು ಕೇಸರಿ ಕಹಳೆ ಮೊಳಗಿತ್ತು. ಜಾಮಿಯಾ ಮಸೀದಿ ಸ್ಥಳದಲ್ಲೇ ಮೂಡಲಬಾಗಿಲು ಆಂಜನೇಯ ದೇಗುಲ ಪ್ರತಿಷ್ಠಾಪನೆಗೆ ಹಕ್ಕೊತ್ತಾಯಿಸಿ ಹಿಂದೂ ಜಾಗರಣಾ ವೇದಿಕೆ ಹನುಮ ಸಂಕೀರ್ತನಾ ಯಾತ್ರೆ ಹಮ್ಮಿಕೊಂಡಿತ್ತು.
 
ಯಾತ್ರೆಯಲ್ಲಿ ಸಾವಿರಾರು ಹನುಮ ಮಾಲಾಧಾರಿಗಳು `ಜೈ ಶ್ರೀರಾಮ್.. ಜೈ ಹನುಮಾನ್’ ಘೋಷಣೆ ಮೊಳಗಿಸಿದರು.

ನಿಮಿಷಾಂಭ ದೇಗುಲ, ಗಂಜಾಂ ಬೇಸಿಗೆ ಅರಮನೆ, ಶ್ರೀರಂಗಪಟ್ಟಣ ಬಸ್ ನಿಲ್ದಾಣ, ಜಾಮೀಯಾ ಮಸೀದಿ, ಪೇಟೆ ಬೀದಿ ಮೂಲಕ ರಂಗನಾಥ ಸ್ವಾಮಿ ದೇಗುಲ ಆವರಣದಲ್ಲಿ ಯಾತ್ರೆ ಅಂತ್ಯವಾಯಿತು.

ಸಂಕೀರ್ತನಾ ಯಾತ್ರೆಯಲ್ಲಿ ಹನುಮ ಮಾಲಾಧಾರಿಗಳ ಜೊತೆ ಆಂಜನೇಯ, ರಾಮ ವೇಷಧಾರಿಗಳೂ ಪ್ರತ್ಯಕ್ಷರಾದರು. ಜಾಮಿಯಾ ಮಸೀದಿ ಬಳಿ ಬಂದಾಗ ಹಿಂದೂ ಕಾರ್ಯಕರ್ತರು ನುಗ್ಗಲು ಯತ್ನಿಸಿದರು.

ಇದು ಜಾಮಿಯಾ ಮಸೀದಿ ಅಲ್ಲ; ಮೂಡಲಬಾಗಿಲು ಆಂಜನೇಯನ ದೇಗುಲ. ಹನುಮನ ಪಾದದ ಮೇಲಾಣೆ, ಮಂದಿರವಿಲ್ಲೇ ಕಟ್ಟುವೆವು, ಅಯೋಧ್ಯೆಯಲ್ಲಿ ರಾಮ ಮಂದಿರ. ಇಲ್ಲಿ ಹನುಮ ಮಂದಿರ ಎಂದು ಮುಗಿಲು ಮುಟ್ಟುವಂತೆ ಘೋಷಣೆ ಮೊಳಗಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments