Webdunia - Bharat's app for daily news and videos

Install App

ಗೃಹಲಕ್ಷ್ಮಿ ಹಣ ಕೇಳೋರು, ಕಪ್ಪು ಹಣ ತಂದು 15 ಲಕ್ಷ ನಿಮ್ಮ ಖಾತೆಗೆ ಹಾಕಿದ್ರಾ: ಸಂತೋಷ್ ಲಾಡ್

Krishnaveni K
ಗುರುವಾರ, 20 ಫೆಬ್ರವರಿ 2025 (10:48 IST)
ಬೆಂಗಳೂರು: ಗೃಹಲಕ್ಷ್ಮಿ, ಅನ್ನಭಾಗ್ಯ ಯೋಜನೆ ಹಣ ಕ್ರೆಡಿಟ್ ಮಾಡದೇ ಇರುವ ಬಗ್ಗೆ ಮಾಧ್ಯಮಗಳು ಪ್ರಶ್ನಿಸಿದಾಗ ಸಚಿವ ಸಂತೋಷ್ ಲಾಡ್ ಮೋದಿಯವರು ಕಪ್ಪು ಹಣ ತಂದು 15 ಲಕ್ಷ ನಿಮ್ಮ ಖಾತೆಗೆ ಹಾಕಿದ್ದಾರಾ ಎಂದು ಪ್ರಶ್ನೆ ಮಾಡಿದ್ದಾರೆ.

ಕಳೆದ ಮೂರು ತಿಂಗಳಿನಿಂದ ಗೃಹಲಕ್ಷ್ಮಿ ಹಣ, ಅನ್ನಭಾಗ್ಯದ ಬಾಬ್ತು ನೀಡಬೇಕಾದ ಹಣ ಫಲಾನುಭವಿಗಳಿಗೆ ಬಂದಿಲ್ಲ. ಈ ಬಗ್ಗೆ ಜನರಿಂದ ಆಕ್ರೋಶ ವ್ಯಕ್ತವಾಗಿದೆ. ವಿಪಕ್ಷಗಳೂ ಇದನ್ನೇ ಅಸ್ತ್ರವಾಗಿ ಬಳಸಿಕೊಳ್ಳುತ್ತಿದೆ.

ಇದರ ನಡುವೆ ಸಚಿವ ಸಂತೋಷ್ ಲಾಡ್ ಗೆ ವಿಪಕ್ಷಗಳು ಗೃಹಲಕ್ಷ್ಮಿ ಹಣ ಬಂದಿಲ್ಲ ಎಂದು ಪ್ರಶ್ನೆ ಮಾಡುತ್ತಿವೆ ಎಂದಿದ್ದಕ್ಕೆ ‘ಮೊದಲು ಮೋದಿಯವರಿಗೆ ಪ್ರಶ್ನೆ ಮಾಡಲಿ. ಅಧಿಕಾರಕ್ಕೆ ಬಂದ ಮೇಲೆ ಕಪ್ಪು ಹಣ ಭಾರತಕ್ಕೆ ತರುತ್ತೀವಿ, 15 ಲಕ್ಷ ರೂ. ಪ್ರತಿಯೊಬ್ಬರ ಖಾತೆಗೆ ಹಾಕುತ್ತೀವಿ ಎಂದೆಲ್ಲಾ ಹೇಳಿದ್ದರಲ್ಲಾ? ಬಂತಾ ನಿಮಗೆ? ಜನ ಕೇಳೋದರಲ್ಲಿ ಅರ್ಥವಿದೆ. ಆದರೆ ಬಿಜೆಪಿಯವರು ನಮ್ಮನ್ನು ಕೇಳೋರು ಅವರ ನಾಯಕರನ್ನು ಪ್ರಶ್ನೆ ಮಾಡಲಿ. ನಮಗೆ ಗೊತ್ತು, ಗೃಹಲಕ್ಷ್ಮಿ ಬಾಕಿಯಿದೆ, ಅದನ್ನು ನಾವು ಕೊಟ್ಟೇ ಕೊಡ್ತೀವಿ’ ಎಂದು ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ.

ಇನ್ನು, ತಿಂಗಳು ತಿಂಗಳ ಹಾಕಕ್ಕೆ ಗೃಹಲಕ್ಷ್ಮಿ ಯೋಜನೆ ಸಂಬಳನಾ ಎಂದಿದ್ದ ಸಚಿವ ಕೆಜೆ ಜಾರ್ಜ್ ಹೇಳಿಕೆ ಬಗ್ಗೆ ಕೇಳಿದಾಗ ಇದರ ಬಗ್ಗೆ ನಾನು ಏನೂ ಪ್ರತಿಕ್ರಿಯೆ ನೀಡಲ್ಲ ಎಂದು ಜಾರಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನಕ್ಕಾಗಿ ತೆರಳುತ್ತಿದ್ದ ಎಂಟು ಮಂದಿ ಭೀಕರ ರಸ್ತೆ ಅಪಘಾತದಲ್ಲಿ ಬಲಿ

ಷರತ್ತುಬದ್ಧ ಜಾಮೀನು ಪಡೆದ ಮಹೇಶ್‌ ಶೆಟ್ಟಿ ತಿಮರೋಡಿಗೆ ಮತ್ತೆ ಬಂಧನದ ಭೀತಿ

ಗಾಜಿಯಾಬಾದ್‌: ಬೀದಿ ನಾಯಿಗಳಿಗೆ ಊಟ ಹಾಕುತ್ತಿದ್ದ ಮಹಿಳೆಗೆ ಅಟ್ಟಾಡಿಸಿ ಹೊಡದ ವ್ಯಕ್ತಿ, Viral Video

ರಾಹುಲ್ ಗಾಂಧಿಯನ್ನು ಭೇಟಿಯಾದ ಕರ್ನಾಟಕದ ಟ್ಯಾಕ್ಸಿ ಚಾಲಕರಿಗೆ ಹೊಸ ಭರವಸೆ

ವಿದೇಶಿ ಶಕ್ತಿಗಳ ಕೈವಾಡವೂ ಅಡಗಿರುವ ಸಾಧ್ಯತೆ: ವಿಜಯೇಂದ್ರ

ಮುಂದಿನ ಸುದ್ದಿ
Show comments