Webdunia - Bharat's app for daily news and videos

Install App

ರಾಹುಲ್ ಗಾಂಧಿಗೆ ಯುವಕರು ಮುಂದೆ ಬರಬೇಕು ಅಂತ ಆಸೆ: ಸಂತೋಷ್ ಲಾಡ್

Krishnaveni K
ಸೋಮವಾರ, 17 ಮಾರ್ಚ್ 2025 (17:28 IST)
ಬೆಂಗಳೂರು: ರಾಹುಲ್ ಗಾಂಧಿ ಅವರು ಈ ದೇಶದ ಯುವಕರು ಮುಂಚೂಣಿಗೆ ಬಂದು ಕೆಲಸ ಮಾಡಬೇಕು ಎಂದು ಆಸೆಯಿಟ್ಟು ಕೆಲಸ ಮಾಡುತ್ತಿದ್ದಾರೆ. ಯುವ ಕಾಂಗ್ರೆಸ್ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ.

 
ಬಿಜೆಪಿಯವರು ಅಭಿವೃದ್ದಿ ಕೆಲಸ ಮಾಡಿ ಈ ದೇಶದ ಜನರ ಬಳಿ ಮತಗಳನ್ನು ಕೇಳುತ್ತಿಲ್ಲ. ಕೇವಲ ಹಿಂದು, ಹಿಂದುತ್ವದ ಮುಖಾಂತರ ಜನರನ್ನು ವಿಭಜನೆ ಮಾಡಿ ಮತ ಕೇಳುತ್ತಿದ್ದಾರೆ.

ಬಾಬಾ ಸಾಹೇಬರು ಬರೆದಿದ್ದ ಸಂವಿಧಾನವನ್ನು ಜಾರಿಗೆ ತಂದಿದ್ದು ನೆಹರು ಅವರ ಸರ್ಕಾರ. ಈ ದೇಶದಲ್ಲಿ ಸಾವಿರಾರು ಅಭಿವೃದ್ದಿ ಕೆಲಸಗಳನ್ನು ಮಾಡಿರುವುದು ಕಾಂಗ್ರೆಸ್ ಸರ್ಕಾರ. ಇಡೀ ದೇಶದಲ್ಲಿ 5 ಸಾವಿರಕ್ಕೂ ಹೆಚ್ಚು ಅಣೆಕಟ್ಟುಗಳನ್ನು ನಿರ್ಮಾಣ ಮಾಡಿದ್ದು ಕಾಂಗ್ರೆಸ್ ಸರ್ಕಾರಗಳು.

ನರೇಗಾ ಕಾರ್ಯಕ್ರಮದ ಮೂಲಕ 25 ಕೋಟಿಗೂ ಹೆಚ್ಚು ಜನ ಉದ್ಯೋಗಿಗಳಾಗಿದ್ದಾರೆ. ಇದರಿಂದ ಅನೇಕ ಯುವಕರಿಗೆ ಅನುಕೂಲವಾಗಿದೆ. ಪಕ್ಷದ ಯುವಕರು ಸಿಗುವ ಅವಕಾಶಗಳನ್ನ ಬಳಸಿಕೊಂಡು ಮುಂದಕ್ಕೆ ಬರಬೇಕು.

ಸೈದ್ದಾಂತಿಕವಾಗಿ ನೀವು ಬಲವನ್ನು ಪಡೆಯಬೇಕು. ಯಾಕೆ ಕಾಂಗ್ರೆಸ್ ಪಕ್ಷದಲ್ಲಿ ನಾವು ಇರಬೇಕು ಎನ್ನುವ ನಿಲುವನ್ನು ಮೊದಲು ಸ್ಪಷ್ಟಪಡಿಸಿಕೊಳ್ಳಬೇಕು. ಆಗ ಮಾತ್ರ ನೀವು ಸಮಾಜಕ್ಕೆ, ಪಕ್ಷಕ್ಕೆ ಕೊಡುಗೆ ನೀಡಲು ಸಾಧ್ಯ. ಬಿಜೆಪಿ ಹಿಂದುತ್ವ ಮೇಲೆ ಮತ ಕೇಳುತ್ತದೆ. ನಾನೂ ಹಿಂದು ಎಂದು ಹೆಮ್ಮೆಯಿಂದ ಹೇಳುತ್ತೇನೆ. ಆದರೆ ಇದನ್ನು ಮತರಾಜಕಾರಣಕ್ಕೆ ಬಳಸಿಕೊಳ್ಳಬಾರದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments