Webdunia - Bharat's app for daily news and videos

Install App

ಸಂತೋಷ್ ಹೆಸರು ತಂದಿದ್ದು ಶೆಟ್ಟರ್‌ಗೆ ಶೋಭೆ ತರಲ್ಲ : ಯಡಿಯೂರಪ್ಪ

Webdunia
ಬುಧವಾರ, 19 ಏಪ್ರಿಲ್ 2023 (09:55 IST)
ಬೆಂಗಳೂರು : ಬಿಎಲ್ ಸಂತೋಷ್ ಹೆಸರನ್ನು ನಡುವೆ ತಂದಿರುವುದು ಜಗದೀಶ್ ಶೆಟ್ಟರ್ಗೆ ಶೋಭೆ ತರಲ್ಲ. ಅವರಿಗೆ ಸಂತೋಷ್ರಿಂದ ಟಿಕೆಟ್ ತಪ್ಪಿದ್ದು ಎಂಬ ಮಾತು ಸುಳ್ಳು ಎಂದು ಮಾಜಿ ಸಿಎಂ ಯಡಿಯೂರಪ್ಪ ಶೆಟ್ಟರ್ ವಿರುದ್ಧ ಕಿಡಿಕಾರಿದ್ದಾರೆ.
 
ಜಗದೀಶ್ ಶೆಟ್ಟರ್ಗೆ ಎಲ್ಲಾ ರೀತಿಯಿಂದಲೂ ಮನವೊಲಿಸುವ ಪ್ರಯತ್ನ ಆಗಿದೆ. ಆದರೆ ಅವರು ಅಂತಿಮವಾಗಿ ಪಕ್ಷ ಬಿಟ್ಟು ಹೋದರು. ಅವರು ಪಕ್ಷ ಬಿಟ್ಟಿರುವುದರಿಂದ ಬಿಜೆಪಿಗೆ ಏನೂ ನಷ್ಟ ಆಗಲ್ಲ. ಏಕೆಂದರೆ ಜಗದೀಶ್ ಶೆಟ್ಟರ್ ನಂಬಿ ಅವರ ಜೊತೆಗೆ ಯಾವ ಕಾರ್ಯಕರ್ತರೂ ಹೋಗಿಲ್ಲ. ಅವರಿಗೆ ಟಿಕೆಟ್ ಸಿಗದಿರುವುದಕ್ಕೆ ಯಾರೂ ಕಾರಣರಲ್ಲ. ಸುಮ್ಮನೆ ಸಂತೋಷ್ ಹೆಸರು ತಂದಿದ್ದು ಕೂಡಾ ಶೆಟ್ಟರ್ಗೆ ಶೋಭೆ ತರುವುದಿಲ್ಲ ಎಂದು ತಿರುಗೇಟು ನೀಡಿದರು.

ಶೆಟ್ಟರ್ ಈ ರೀತಿಯ ತೀರ್ಮಾನ ತೆಗೆದುಕೊಳ್ಳಬಾರದಾಗಿತ್ತು. ನಾವು ಎಷ್ಟೇ ಮನವಿ ಮಾಡಿದರೂ ಅವರು ಒಪ್ಪಲಿಲ್ಲ. ಅವರನ್ನು ರಾಜ್ಯಸಭೆ ಸದಸ್ಯರಾಗಿ ಮಾಡುತ್ತೇವೆ ಎಂದು ಹೇಳಿದ್ದೆವು. ಈಗ ಅವರು ಹೋಗಿರುವುದರಿಂದ ನಮಗೇನೂ ನಷ್ಟವಿಲ್ಲ. ಇನ್ಮೇಲೆ ಅವರ ದಾರಿ ಅವರಿಗೆ ನಮ್ಮ ದಾರಿ ನಮಗೆ. ಬಿಜೆಪಿ ಬಹುಮತ ಪಡೆದುಕೊಂಡು ಅಧಿಕಾರಕ್ಕೆ ಬರುತ್ತದೆ ಎಂದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments