Webdunia - Bharat's app for daily news and videos

Install App

ತನಿಖಾ ಸಂಸ್ಥೆಗಳ ಕಾರ್ಯನಿರ್ವಹಣೆಗೆ ಸಂತೋಷ್ ಹೆಗ್ಡೆ ಅಸಮಾಧಾನ

Webdunia
ಬುಧವಾರ, 17 ಮೇ 2017 (20:38 IST)
ತನಿಖಾ ಸಂಸ್ಥೆಗಳ ಬೇಜವಾಬ್ದಾರಿ ಕಾರ್ಯನಿರ್ವಹಣೆಯಿಂದ ಆರೋಪಿಗಳಿಗೆ ಕ್ಲಿನ್ ಚಿಟ್ ದೊರೆಯುತ್ತಿದೆ ಎಂದು ಮಾಜಿ ಲೋಕಾಯುಕ್ತ ಸಂತೋಷ್ ಹೆಗ್ಡೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
 
ಸುಪ್ರೀಂಕೋರ್ಟ್ ಮೂರು ತಿಂಗಳಲ್ಲಿ ವರದಿ ನೀಡುವಂತೆ ಆದೇಶಿಸಿದ್ದರಿಂದ ನ್ಯಾಯಾಂಗ ನಿಂದನೆಯಾಗುತ್ತದೆ ಎಂದು ತನಿಖಾಧಿಕಾರಿಗಳು ತನಿಖೆಯನ್ನು ಚುರುಕುಗೊಳಿಸಿದ್ದಾರೆ. ಕಳೆದ ಏಳು ವರ್ಷಗಳಿಂದ ಎಸ್‌ಐಟಿ ಅಧಿಕಾರಿಗಳು ಏನು ಮಾಡುತ್ತಿದ್ದರು ಎಂದು ಗುಡುಗಿದ್ದಾರೆ.
 
ಅಕ್ರಮ ಗಣಿಗಾರಿಕೆ ಕುರಿತಂತೆ 2011ರಲ್ಲೇ ಸರಕಾರಕ್ಕೆ ವರದಿ ನೀಡಿದ್ದೇನೆ. ಆದರೆ, ಸರಕಾರ ವರದಿ ಅನುಷ್ಠಾನಕ್ಕೆ ತರಲೇ ಇಲ್ಲ ಎಂದು ಕಿಡಿಕಾರಿದರು.     
 
ಬಲಿಷ್ಠರನ್ನು, ದೊಡ್ಡ ಹುದ್ದೆಯಲ್ಲಿರುವವರನ್ನು ತನಿಖಾ ಸಂಸ್ಥೆಗಳು ಮುಟ್ಟುತ್ತಲೇ ಇಲ್ಲ. ಒಂದು ವೇಳೆ, ಮುಟ್ಟಿದರೂ ಬಿ ರಿಪೋರ್ಟ್ ಹಾಕುತ್ತಿವೆ ಎಂದು ಬೇಸರ ವ್ಯಕ್ತಪಡಿಸಿದರು.
 
ತನಿಖಾ ಸಂಸ್ಥೆಗಳೇ ಹಗರಣಗಳನ್ನು ಮುಚ್ಚಿಹಾಕುತ್ತಿವೆಯಾ ಎನ್ನುವ ಸಂಶಯ ಜನರನ್ನು ಕಾಡುತ್ತಿವೆ. ಗಣಿ ಧೂಳಲ್ಲಿ ಪ್ರಕರಣಗಳು ಮುಚ್ಚಿಹೋಗುತ್ತಿವೆಯಾ ಎನ್ನುವ ಅನುಮಾನ ಕೂಡಾ ಬಲಗೊಳ್ಳುತ್ತಿದೆ ಎಂದು ಮಾಜಿ ಲೋಕಾಯುಕ್ತ ಸಂತೋಷ್ ಹೆಗ್ಡೆ ತಿಳಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments