Daily Horoscope

ಮಂಡ್ಯದಲ್ಲಿ ನಮ್ಮನ್ನ ಒಮ್ಮೆ ತಬ್ಬಿಕೊಂಡರೆ ಮೈಸೂರಿನಲ್ಲಿ ನಿಮ್ಮನ್ನ 5 ಬಾರಿ ತಬ್ಬಿಕೊಳ್ಳುತ್ತೇವೆ- ಕಾಂಗ್ರೆಸ್ ಗೆ ಎಚ್ಚರಿಕೆ ನೀಡಿದ ಸಾರಾ ಮಹೇಶ್

Webdunia
ಶನಿವಾರ, 16 ಮಾರ್ಚ್ 2019 (09:05 IST)
ಮೈಸೂರು : ಮಂಡ್ಯದಲ್ಲಿ ನಮ್ಮನ್ನ ಹೇಗೆ ನಡೆಸಿಕೊಳ್ಳುತ್ತಿರೋ ಅದು ಮೈಸೂರಿನಲ್ಲಿ ಕೂಡ ಪ್ರತಿಧ್ವನಿಸಲಿದೆ ಎಂದು ಹೇಳುವುದರ ಮೂಲಕ ಸಚಿವ ಸಾರಾ ಮಹೇಶ್ ಪರೋಕ್ಷವಾಗಿ ಕಾಂಗ್ರೆಸ್ ಗೆ ಎಚ್ಚರಿಕೆ ಕೊಟ್ಟಿದ್ದಾರೆ.


ನಗರದಲ್ಲಿ ಪ್ರಚಾರ ಸಮಾರಂಭ ಉದ್ದೇಶಿಸಿ ಮಾತನಾಡಿದ ಅವರು, ವಿಧಾನಸಭಾ ಚುನಾವಣೆಯಲ್ಲಿ ನಿಮ್ಮ, ನಮ್ಮ ಅಂತರ ಇದ್ದೆ ಇರುತ್ತದೆ. ಮೈತ್ರಿಯಾಗಿ ಸರ್ಕಾರ ನಡೆಸುತ್ತಿದ್ದೇವೆ. ಮಂಡ್ಯದಲ್ಲಿ ನಮ್ಮನ್ನ ಒಮ್ಮೆ ತಬ್ಬಿಕೊಂಡರೆ ಮೈಸೂರಿನಲ್ಲಿ ನಿಮ್ಮನ್ನ 5 ಬಾರಿ ತಬ್ಬಿಕೊಳ್ಳುತ್ತೇವೆ. ನಿಮಗೆ ಇದು ನೆನಪಿನಲ್ಲಿ ಇರಲಿ. ಈ ಲೋಕಸಭೆ ಚುನಾವಣೆಯಿಂದಲೇ ಇದು ಪ್ರಾರಂಭವಾಗಬೇಕು. ನಾವು ಜಿಲ್ಲೆಯಲ್ಲಿ ಯಾವುದೇ ವ್ಯತ್ಯಾಸವನ್ನು ಮಾಡದೇ ಸೇವೆ ಮಾಡಿದ್ದೇವೆ. ಆದ್ದರಿಂದ ಮೈತ್ರಿ ಧರ್ಮ ಪಾಲಿಸಿ ನಿಖಿಲ್ ಕುಮಾರಸ್ವಾಮಿ ಅವರನ್ನು ಗೆಲ್ಲಿಸಿಕೊಡಿ ಎಂದು ಹೇಳಿದ್ದಾರೆ.


ಹಾಗೇ ಸುಮಲತಾ ಸ್ಪರ್ಧಿಸುವ ಕುರಿತು ಮಾತನಾಡಿದ ಅವರು,’ ರಾಜ್ಯದ ಯಾವುದೇ ಪಕ್ಷದ ನೇತಾರರನ್ನಾಗಿ ಮಾಡಿದರೂ ಕೂಡ ಜೆಡಿಎಸ್ ಕಾರ್ಯಕರ್ತರು ನಂಬುವುದು ಎಚ್‍.ಡಿ.ಡಿ ಕುಟುಂಬವನ್ನು ಮಾತ್ರ. ಆದ್ದರಿಂದ ಕಾರ್ಯಕರ್ತರ ಒಪ್ಪಿಗೆ ಮೇರೆಗೆ ಈ ನಿರ್ಧಾರ ಮಾಡಲಾಗಿದೆ. ಆದರೆ ಅಂಬರೀಶ್ ಅವರೇ ರಾಜಕಾರಣ ಬೇಡ ಎಂದ ಮೇಲೆ ನಿಖಿಲ್ ಅವರ ವಿರುದ್ಧ ಏಕೆ ಸ್ಪರ್ಧೆ ಮಾಡುತ್ತಿದ್ದೀರಾ ಎಂದು ಯೋಚಿಸಿ ಎಂದು ಸುಮಲತಾ ಅವರಲ್ಲಿ ಮನವಿ ಮಾಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರುಣೆ ಎನ್ನೋದು ಸತ್ತು ಹೋಯ್ತಾ.. ಪಂಕೋಟ್ ಸೇತುವೆಯಿಂದ ಹರಿಯುವ ಸೇತಿ ನದಿಗೆ ಶ್ವಾನವನ್ನು ಎಸೆದ ಮಹಿಳೆ: Video

ಸಿಎಂ ಡಿಕೆಶಿ ಭೇಟಿಗೆ ಕೆಲವೇ ಕ್ಷಣಗಳ ಮುನ್ನ ಕಲಬುರಗಿಯಲ್ಲಿ ಸಿದ್ದರಾಮಯ್ಯ ಪ್ರತಿಮೆ ಪ್ರತ್ಯಕ್ಷ: ಏನಿದು ಮುಸುಕಿನ ಗುದ್ದಾಟ

ಎಸ್ಐಆರ್ ನಲ್ಲಿ ಹೆಸರು ಡಿಲೀಟ್ ಆಗಿದ್ದಕ್ಕೆ ಸಚಿವರ ಮೇಲೆ ಸಿಟ್ಟಾದ ಕೆಸಿ ವೇಣುಗೋಪಾಲ್ ಹೇಳಿದ್ದೇನು

ಕಳ್ಳತನ ಮಾಡಲು ಬಂದ ಭೂಪ ಗ್ರಿಲ್ ಮಧ್ಯೆ ಸಿಲುಕಿಕೊಂಡ, ನಂತರ ನಡೆದಿದ್ದೇನು ನೋಡಿ video

ಬೀದಿ ನಾಯಿ ಕಾಟ ಸಾಕಾಗಿ ಹೋಯ್ತು: ರೊಚ್ಚಿಗೆದ್ದ ಜನ ಅಧಿಕಾರಿ ಟೇಬಲ್ ಮೇಲೆ ಗೋಣಿ ಚೀಲದಲ್ಲಿ ನಾಯಿ ತಂದು ಸುರಿದ್ರು Video

ಮುಂದಿನ ಸುದ್ದಿ
Show comments