Webdunia - Bharat's app for daily news and videos

Install App

ಪ್ರಜ್ವಲ್ ರೇವಣ್ಣ ತೋಟದ ಮನೆಯಲ್ಲಿತ್ತು ಸೀರೆ, ಪೆಟಿಕೋಟ್: ಇದೊಂದು ಪರೀಕ್ಷೆ ದೃಢಪಟ್ಟರೆ ಪ್ರಜ್ವಲ್ ಲಾಕ್

Krishnaveni K
ಬುಧವಾರ, 11 ಸೆಪ್ಟಂಬರ್ 2024 (11:35 IST)
ಬೆಂಗಳೂರು: ಮಹಿಳೆಯರ ಮೇಲೆ ರೇಪ್ ಮತ್ತು ಲೈಂಗಿಕ ದೌರ್ಜನ್ಯ ನಡೆಸಿದ ಪ್ರಕರಣದಲ್ಲಿ ಬಂಧಿತರಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಸಾಕ್ಷ್ಯ ಒದಗಿಸುವಂತಹ ಸಾಕಷ್ಟು ವಸ್ತುಗಳು ಅವರ ತೋಟದ ಮನೆಯಲ್ಲಿ ಪತ್ತೆಯಾಗಿದೆ.

ಪ್ರಜ್ವಲ್ ರೇವಣ್ಣ ತಮ್ಮ ಹೊಳೆನರಸೀಪುರದ ತೋಟದ ಮನೆಯಲ್ಲಿ ಮತ್ತು ಬಸವನಗುಡಿಯ ಮನೆಯಲ್ಲೂ ಮಹಿಳೆಯರ ಮೇಲೆ ಅತ್ಯಾಚಾರ ನಡೆಸಿದ ಆರೋಪ ಬಂದಿದೆ. ಇದು ಚಾರ್ಜ್ ಶೀಟ್ ನಲ್ಲೂ ಉಲ್ಲೇಖವಾಗಿದೆ. ಇದೀಗ ತನಿಖಾ ತಂಡಕ್ಕೆ ಅವರ ತೋಟದ ಮನೆಯಲ್ಲಿ ಸೀರೆಗಳು, ಪೆಟಿಕೋಟ್ ಗಳು, ವೀರ್ಯದ ಕಲೆ, ಕೂದಲು ಪತ್ತೆಯಾಗಿದೆ.

ಇದೀಗ ಇವೆಲ್ಲವನ್ನೂ ಪೊಲೀಸರು ಡಿಎನ್ ಎ ಪರೀಕ್ಷೆಗೆ ಕಳುಹಿಸಿದ್ದಾರೆ. ಒಂದು ವೇಳೆ ಬೆಡ್ ಶೀಟ್ ನಲ್ಲಿ ಪತ್ತೆಯಾದ ವೀರ್ಯಾಣು ಕಲೆ ಪ್ರಜ್ವಲ್ ನದ್ದೇ ಎಂದು ಗೊತ್ತಾದರೆ ಅವರಿಗೆ ಮತ್ತಷ್ಟು ಸಂಕಷ್ಟ ಕಾದಿದೆ. ಚಾರ್ಜ್ ಶೀಟ್ ಪ್ರಕಾರ ಈಗಾಗಲೇ ಪ್ರಜ್ವಲ್ ಇಬ್ಬರು ಮಹಿಳೆಯರ ಮೇಲೆ ಅತ್ಯಾಚಾರ ನಡೆಸಿರುವುದು ಕನ್ ಫರ್ಮ್ ಆಗಿದೆ.

ಇದೀಗ ಸಿಕ್ಕಿರುವ ಸಾಕ್ಷ್ಯಗಳಿಂದ ದಿನೇ ದಿನೇ ಅವರ ವಿರುದ್ಧ ಕಾನೂನಿನ ಕುಣಿಕೆ ಬಿಗಿಯಾಗುತ್ತಿದೆ. ಸದ್ಯಕ್ಕೆ ವೈದ್ಯಕೀಯ ಪರೀಕ್ಷೆ ಮತ್ತು ಡಿಎನ್ ಎ ಪರೀಕ್ಷೆಯ ಫಲಿತಾಂಶಕ್ಕಾಗಿ ಪೊಲೀಸರು ಕಾಯುತ್ತಿದ್ದಾರೆ. ಡಿಎನ್ ಎ ಪರೀಕ್ಷೆ ವರದಿ ಬಂದ ನಂತರ ಮತ್ತೊಮ್ಮೆ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಕೆಯಾಗಲಿದೆ. ಸದ್ಯಕ್ಕೆ ನ್ಯಾಯಾಂಗ ಬಂಧನದಲ್ಲಿರುವ ಪ್ರಜ್ವಲ್ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿದ್ದಾರೆ. ಪೊಲೀಸರ ತನಿಖೆ ಪ್ರಕಾರ ಪ್ರಜ್ವಲ್ ಹೊಳೆನರಸೀಪುರದ ಮನೆ, ತೋಟದ ಮನೆ, ಬಸವನಗುಡಿ ಮನೆ, ಹಾಸನದ ಅತಿಥಿ ಗೃಹದಲ್ಲಿ ಮಹಿಳೆಯರ ಮೇಲೆ ರೇಪ್ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಉಪರಾಷ್ಟ್ರಪತಿ ಚುನಾವಣೆಗೆ ನಾಮಪತ್ರ: ರಾಧಾಕೃಷ್ಣನ್‌ಗೆ ಪ್ರಧಾನಿ ಮೋದಿ ಸೇರಿ ಎನ್‌ಡಿಎ ನಾಯಕರು ಸಾಥ್‌

ಪ್ರೇಮ ನಿವೇದನೆಯನ್ನು ತಿರಸ್ಕರಿಸಿದ ಶಿಕ್ಷಕಿ ಮೇಲೆ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿದ ಮಾಜಿ ವಿದ್ಯಾರ್ಥಿ

ಧರ್ಮಸ್ಥರ ಬುರುಡೆ ರಹಸ್ಯ: ಸರ್ಕಾರದ ವಿರುದ್ಧವೇ ಗರಂ ಆದ ಕಾಂಗ್ರೆಸ್ ನಾಯಕ ಅಭಯಚಂದ್ರ ಜೈನ್

ರೇಖಾ ಗುಪ್ತಾ ಮೇಲೆ ಕಪಾಳಮೋಕ್ಷ: ಆರೋಪಿ ಬೆನ್ನತ್ತಿದ್ದಾಗ ಬಯಲಾಯಿತು ಸ್ಫೋಟಕ ರಹಸ್ಯ

ಜವರಾಯನಂತೆ ಬಂದ ಹಾಲಿನ ವಾಹನ: ರಸ್ತೆಯಲ್ಲೇ ಪ್ರಾಣಬಿಟ್ಟ ಇಬ್ಬರು ಎಂಬಿಬಿಎಸ್‌ ವಿದ್ಯಾರ್ಥಿಗಳು

ಮುಂದಿನ ಸುದ್ದಿ