Select Your Language

Notifications

webdunia
webdunia
webdunia
webdunia

ನಿಧನ ಹಿನ್ನೆಲೆ ಕಲಾಂಗೆ ಶ್ರದ್ಧಾಂಜಲಿ ಸಲ್ಲಿಸಿದ ರಾಜ್ಯ ಬಿಜೆಪಿ

ನಿಧನ ಹಿನ್ನೆಲೆ ಕಲಾಂಗೆ ಶ್ರದ್ಧಾಂಜಲಿ ಸಲ್ಲಿಸಿದ ರಾಜ್ಯ ಬಿಜೆಪಿ
ಬೆಂಗಳೂರು , ಮಂಗಳವಾರ, 28 ಜುಲೈ 2015 (13:26 IST)
ಪಾಠ ಮಾಡುತ್ತಲೇ ಕೊನೆಯುಸಿರೆಳೆದಿದ್ದ ಮಾಜಿ ರಾಷ್ಟ್ರಪತಿ, ಭಾರತ ರತ್ನ ಪುರಸ್ಕೃತ, ಖ್ಯಾತ ವಿಜ್ಞಾನಿ ಎ.ಪಿ.ಜೆ. ಅಬ್ದುಲ್ ಕಲಾಂ ಅವರು ಅಸುನೀಗಿದ್ದ ಹಿನ್ನೆಲೆಯಲ್ಲಿ ರಾಜ್ಯದ ಬಿಜೆಪಿ ನಾಯಕರು ನಗರದ ತಮ್ಮ ಪಕ್ಷ ಕಚೇರಿಯಲ್ಲಿ ಕಲಾಂ ಅವರಿಗೆ ಮೌನಾಚರಣೆ ಮಾಡುವ ಮೂಲಕ ಶ್ರದ್ಧಾಂಜಲಿ ಸಲ್ಲಿಸಿದರು. 
 
ರಾಜ್ಯ ಬಿಜೆಪಿ ವಕ್ತಾರ ಸರೇಶ್ ಕುಮಾರ್ ನೇತೃತ್ವದಲ್ಲಿ ಆಯೋಜಿಸಲಾಗಿದ್ದ ಈ ಶ್ರದ್ಧಾಂಜಲಿ ಕಾರ್ಯಕ್ರಮವು ನಗರದ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ನಡೆದಿದ್ದು, ಎರಡು ನಿಮಿಷಗಳ ಕಾಲ ಮೌನಾಚರಣೆ ಮಾಡುವ ಮೂಲಕ ಗೌರವ ಸಲ್ಲಿಸಲಾಯಿತು. 
 
ಈ ವೇಳೆ ಮಾತನಾಡಿದ ವಕ್ತಾರ, ಶಾಸಕ ಸುರೇಶ್ ಕುಮಾರ್, ಕಲಾಂ ಅವರು ವಿಜ್ಞಾನ ವಲಯದಲ್ಲಿ ಸಾಕಷ್ಟು ಸಾಧನೆ ಮಾಡುವ ಮೂಲಕ ರಾಷ್ಟ್ರದ ಅಭಿವೃದ್ಧಿಗೆ ಮಹತ್ತರ ಕೊಡುಗೆ ನೀಡಿದ್ದಾರೆ. ಅಲ್ಲದೆ ರಾಷ್ಟ್ರಪತಿಯಾಗಿ ಉತ್ತ ಸೇವೆ ಸಲ್ಲಿಸುವ ಮೂಲಕ ಮನಮೆಚ್ಚಿನ ಜನನಾಯಕರೆನಿಸಿಕೊಂಡಿದ್ದಾರೆ. ಅವರು ನಮ್ಮನ್ನಗಲಿರುವುದು ದೇಶಕ್ಕೆ ತುಂಬಲಾಗದ ನಷ್ಟವಾಗಿದೆ ಎಂದು ಸ್ಮರಿಸಿಕೊಂಡರು. 

Share this Story:

Follow Webdunia kannada