Webdunia - Bharat's app for daily news and videos

Install App

ಮಹಾರಾಷ್ಟ್ರದಲ್ಲಿ ಮಹಾ ವಿಕಾಸ ಅಘಾಡಿ ಸೋಲಿಗೆ ಮತಯಂತ್ರ ಕಾರಣವೆಂದ ಸತೀಶ್‌ ಜಾರಕಿಹೊಳಿ

Sampriya
ಶನಿವಾರ, 23 ನವೆಂಬರ್ 2024 (17:52 IST)
Photo Courtesy X
ಬೆಳಗಾವಿ:  ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಮಹಾ ವಿಕಾಸ ಅಘಾಡಿ ಸೋಲಿಗೆ ಇವಿಎಂ ಮತಯಂತ್ರ ಕಾರಣ‌. ಇವಿಎಂ ಮಷಿನ್ ಬಗ್ಗೆ ಅನುಮಾನವಿದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ‌ ಹೇಳಿದ್ದಾರೆ.

ಮಹಾರಾಷ್ಟ್ರದಲ್ಲಿ ಎನ್‌ಡಿಎ ಮೈತ್ರಿಕೂಟ ಭರ್ಜರಿ ಗೆಲುವು ಸಾಧಿಸಿದ ಬಳಿಕ ಪ್ರತಿಕ್ರಿಯಿಸಿದ ಅವರು, ಸಾಕಷ್ಟು ಕಡೆಗಳಲ್ಲಿ ಇವಿಎಂ ಮಷೀನ್ ಬಗ್ಗೆ ಚರ್ಚೆ ಆಗ್ತಿದೆ. ಒಂದು ಕಡೆ ಕೊಡ್ತಾರೆ ಇನ್ನೊಂದು ಕಡೆ ಕಸಿದುಕೊಳ್ತಾರೆ ಎಂದು ದೂರಿದರು.

ಇವಿಎಂ ಮತಯಂತ್ರದಲ್ಲೂ ಅಡ್ಜಸ್ಟ್ಮೆಂಟ್ ಇದೆ. ಜಮ್ಮು ನಮಗೆ ಕೊಟ್ರೂ, ಹರಿಯಾಣ ಅವರು ತಗೊಂಡ್ರು. ಈ ರೀತಿ ಗೀವ್ ಆ್ಯಂಡ್ ಟೆಕ್ ಪಾಲ್ಸಿ ಮಾಡ್ತಿದ್ದಾರೆ‌. ಅವರಿಗೆ ಬೇಕಾದನ್ನ ತೆಗೆದುಕೊಳ್ತಾರೆ, ಬೇಡದನ್ನ ಬಿಡ್ತಾರೆ ಎಂದು ಆರೋಪಿಸಿದ್ದಾರೆ.

2028ರ ವಿಧಾನಸಭಾ ಚುನಾವಣೆಯಲ್ಲಿ ನಾನೂ ಮುಖ್ಯಮಂತ್ರಿ ಸ್ಥಾನದ ಮೇಲೆ ಕಣ್ಣಿಟ್ಟಿದ್ದೇನೆ. ಈ ಚುನಾವಣೆಯು ಇತರರನ್ನು ಆಯ್ಕೆ ಮಾಡುವ ನಾಯಕನಾಗಿ ನನ್ನನ್ನು ಬಲಪಡಿಸಿದೆ. ಬಿಜೆಪಿ ಹಿಡಿತದಲ್ಲಿದ್ದ ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲೂ ಈ ಹಿಂದೆ ಗೆದ್ದಿದ್ದೇವೆ ಎಂದರು.

ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಈಗ ಇಲ್ಲ. ಐದು ವರ್ಷ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ ಆಗಿ ಇರುತ್ತಾರೆ. ಸಚಿವ ಸಂಪುಟದಲ್ಲಿ ಖಾತೆ ಬದಲಾವಣೆ ಬಗ್ಗೆ ಗೊತ್ತಿಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
 <>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆನೆ ಜತೆ ಸೆಲ್ಪಿ ವಿಡಿಯೋ ವೈರಲ್, ಇನ್ಮುಂದೆ ಈ ಥರ ಮಾಡುವವರ ವಿರುದ್ಧ ಕ್ರಮಕ್ಕೆ ಈಶ್ವರ್ ಖಂಡ್ರೆ ಸೂಚನೆ

ಪಾಕ್ ವಿರುದ್ಧ ಅದು ಸರಿಯಾದ ಪ್ರತೀಕಾರ: ಆಪರೇಷನ್ ಸಿಂಧೂರ್‌ನ್ನು ಶ್ಲಾಘಿಸಿದ ಜಪಾನಿನ ಕಾರ್ಯತಂತ್ರ ತಜ್ಞ

IPL 2025: ಅನುಚಿತ ವರ್ತನೆಗೆ ಡೆಲ್ಲಿ ವೇಗದ ಬೌಲರ್‌ ಮುಕೇಶ್‌ ಕುಮಾರ್‌ಗೆ ಬಿತ್ತು ದಂಡ

ಜಮ್ಮು ಕಾಶ್ಮೀರದ ಭಯೋತ್ಪಾದಕರೊಂದಿಗಿನ ಗುಂಡಿನ ಚಕಮಕಿಯಲ್ಲಿ ಯೋಧ ಹುತಾತ್ಮ

ರಾಮನಗರ ಇನ್ಮುಂದೆ ಬೆಂಗಳೂರು ದಕ್ಷಿಣ ಜಿಲ್ಲೆ: ಡಿಸಿಎಂ ಡಿಕೆ ಶಿವಕುಮಾರ್

ಮುಂದಿನ ಸುದ್ದಿ
Show comments