Webdunia - Bharat's app for daily news and videos

Install App

ಹೈಕಮಾಂಡ್ ಭೇಟಿ ಬೆನ್ನಲ್ಲೇ ಪರಮೇಶ್ವರ್ ಭೇಟಿಯಾದ ಸತೀಶ್ ಜಾರಕಿಹೊಳಿ: ಹೊಸ ಸಿಎಂ ಪಕ್ಕಾನಾ

Krishnaveni K
ಸೋಮವಾರ, 7 ಅಕ್ಟೋಬರ್ 2024 (10:05 IST)
ಬೆಂಗಳೂರು: ಹೈಕಮಾಂಡ್ ಭೇಟಿ ಮಾಡಿದ ಬೆನ್ನಲ್ಲೇ ಸತೀಶ್ ಜಾರಕಿಹೊಳಿ ಗೃಹಸಚಿವ ಜಿ ಪರಮೇಶ್ವರ್ ಅವರನ್ನು ಭೇಟಿ ಮಾಡಿರುವುದು ಈಗ ಕಾಂಗ್ರೆಸ್ ಒಳಗೇ ಹೊಸ ಚರ್ಚೆ ಹುಟ್ಟುಹಾಕಿದೆ.

ರಾಜ್ಯದಲ್ಲಿ ಸಿಎಂ ಬದಲಾವಣೆ ಚರ್ಚೆಗಳಾಗುತ್ತಿರುವ ಬೆನ್ನಲ್ಲೇ ಸತೀಶ್ ಜಾರಕಿಹೊಳಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯನ್ನು ಭೇಟಿ ಮಾಡಿ ಬಂದಿದ್ದರು. ಇದರ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್ ನಲ್ಲಿ ಸಂಚಲನ ಮೂಡಿಸಿತ್ತು. ಆದರೆ ಇದಕ್ಕೆ ಇದು ಸಹಜ ಭೇಟಿ ಎಂದು ರಾಜ್ಯ ನಾಯಕರು ತೇಪೆ ಹಚ್ಚುವ ಕೆಲಸ ಮಾಡಿದ್ದರು.

ಆದರೆ ಇದು ಇಷ್ಟಕ್ಕೇ ನಿಂತಿಲ್ಲ. ಖರ್ಗೆ ಭೇಟಿ ಮಾಡಿದ ಬೆನ್ನಲ್ಲೇ ಇದೀಗ ಸತೀಶ್ ಜಾರಕಿಹೊಳಿ ಗೃಹಸಚಿವ ಜಿ ಪರಮೇಶ್ವರ್ ಅವರನ್ನು ಭೇಟಿ ಮಾಡಿದ್ದಾರೆ. ಇದು ಮತ್ತಷ್ಟು ಚರ್ಚೆಗೆ ಕಾರಣವಾಗಿದೆ. ಇದಕ್ಕೆ ಮೊದಲು ದಲಿತ ನಾಯಕರು ಸಭೆ ನಡೆಸಿದ್ದರು. ಆದರೆ ಈಗ ಹೈಕಮಾಂಡ್ ಭೇಟಿ ಬಳಿಕ ಪ್ರಭಾವೀ ನಾಯಕರಿಬ್ಬರು ಭೇಟಿ ಮಾಡಿದ್ದು ಮತ್ತಷ್ಟು ಕುತೂಹಲಕ್ಕೆ ಕಾರಣವಾಗಿದೆ.

ಇತ್ತೀಚೆಗೆ ದಸರಾ ಉದ್ಘಾಟನೆ ಬಳಿಕ ಸಿಎಂ ಸಿದ್ದರಾಮಯ್ಯ ಇನ್ನು ಒಂದು ವರ್ಷ ನಿಮ್ಮ ಆಶೀರ್ವಾದವಿರಲಿ ಎಂದಿದ್ದರು. ಹೀಗಾಗಿ ಇನ್ನು ಒಂದು ವರ್ಷದೊಳಗೆ ಕರ್ನಾಟಕ ಹೊಸ ಸಿಎಂ ಕಾಣಬಹುದು ಎಂದು ಹೇಳಲಾಗುತ್ತಿದೆ. ಜೊತೆಗೆ ದಲಿತ ಸಿಎಂ ಚರ್ಚೆ ಕೂಡಾ ಶುರುವಾಗಬಹುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮವರ ಮೃತದೇಹ ಕೊಡಿ.. ಅಹಮದಾಬಾದ್ ಆಸ್ಪತ್ರೆ ಮುಂದೆ ಕುಟುಂಬಸ್ಥರ ಸಾಲು

ವಿಮಾನದ ಚಕ್ರಗಳು ಎಂಥಾ ಅಪಘಾತಕ್ಕೂ ಬೇಗ ಹಾನಿಯಾಗಲ್ಲ ಯಾಕೆ

Karnataka Weather: ಈ ವಾರದ ಹವಾಮಾನ ಬದಲಾವಣೆಯನ್ನು ತಪ್ಪದೇ ಗಮನಿಸಿ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಮುಂದಿನ ಸುದ್ದಿ
Show comments