Webdunia - Bharat's app for daily news and videos

Install App

ಹೈಕಮಾಂಡ್ ಭೇಟಿ ಬೆನ್ನಲ್ಲೇ ಪರಮೇಶ್ವರ್ ಭೇಟಿಯಾದ ಸತೀಶ್ ಜಾರಕಿಹೊಳಿ: ಹೊಸ ಸಿಎಂ ಪಕ್ಕಾನಾ

Krishnaveni K
ಸೋಮವಾರ, 7 ಅಕ್ಟೋಬರ್ 2024 (10:05 IST)
ಬೆಂಗಳೂರು: ಹೈಕಮಾಂಡ್ ಭೇಟಿ ಮಾಡಿದ ಬೆನ್ನಲ್ಲೇ ಸತೀಶ್ ಜಾರಕಿಹೊಳಿ ಗೃಹಸಚಿವ ಜಿ ಪರಮೇಶ್ವರ್ ಅವರನ್ನು ಭೇಟಿ ಮಾಡಿರುವುದು ಈಗ ಕಾಂಗ್ರೆಸ್ ಒಳಗೇ ಹೊಸ ಚರ್ಚೆ ಹುಟ್ಟುಹಾಕಿದೆ.

ರಾಜ್ಯದಲ್ಲಿ ಸಿಎಂ ಬದಲಾವಣೆ ಚರ್ಚೆಗಳಾಗುತ್ತಿರುವ ಬೆನ್ನಲ್ಲೇ ಸತೀಶ್ ಜಾರಕಿಹೊಳಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯನ್ನು ಭೇಟಿ ಮಾಡಿ ಬಂದಿದ್ದರು. ಇದರ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್ ನಲ್ಲಿ ಸಂಚಲನ ಮೂಡಿಸಿತ್ತು. ಆದರೆ ಇದಕ್ಕೆ ಇದು ಸಹಜ ಭೇಟಿ ಎಂದು ರಾಜ್ಯ ನಾಯಕರು ತೇಪೆ ಹಚ್ಚುವ ಕೆಲಸ ಮಾಡಿದ್ದರು.

ಆದರೆ ಇದು ಇಷ್ಟಕ್ಕೇ ನಿಂತಿಲ್ಲ. ಖರ್ಗೆ ಭೇಟಿ ಮಾಡಿದ ಬೆನ್ನಲ್ಲೇ ಇದೀಗ ಸತೀಶ್ ಜಾರಕಿಹೊಳಿ ಗೃಹಸಚಿವ ಜಿ ಪರಮೇಶ್ವರ್ ಅವರನ್ನು ಭೇಟಿ ಮಾಡಿದ್ದಾರೆ. ಇದು ಮತ್ತಷ್ಟು ಚರ್ಚೆಗೆ ಕಾರಣವಾಗಿದೆ. ಇದಕ್ಕೆ ಮೊದಲು ದಲಿತ ನಾಯಕರು ಸಭೆ ನಡೆಸಿದ್ದರು. ಆದರೆ ಈಗ ಹೈಕಮಾಂಡ್ ಭೇಟಿ ಬಳಿಕ ಪ್ರಭಾವೀ ನಾಯಕರಿಬ್ಬರು ಭೇಟಿ ಮಾಡಿದ್ದು ಮತ್ತಷ್ಟು ಕುತೂಹಲಕ್ಕೆ ಕಾರಣವಾಗಿದೆ.

ಇತ್ತೀಚೆಗೆ ದಸರಾ ಉದ್ಘಾಟನೆ ಬಳಿಕ ಸಿಎಂ ಸಿದ್ದರಾಮಯ್ಯ ಇನ್ನು ಒಂದು ವರ್ಷ ನಿಮ್ಮ ಆಶೀರ್ವಾದವಿರಲಿ ಎಂದಿದ್ದರು. ಹೀಗಾಗಿ ಇನ್ನು ಒಂದು ವರ್ಷದೊಳಗೆ ಕರ್ನಾಟಕ ಹೊಸ ಸಿಎಂ ಕಾಣಬಹುದು ಎಂದು ಹೇಳಲಾಗುತ್ತಿದೆ. ಜೊತೆಗೆ ದಲಿತ ಸಿಎಂ ಚರ್ಚೆ ಕೂಡಾ ಶುರುವಾಗಬಹುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments