Webdunia - Bharat's app for daily news and videos

Install App

ಸಿಎಂ ಜತೆಗೆ ಕೆಪಿಸಿಸಿ ಅಧ್ಯಕ್ಷನಾಗುವ ಇಂಗಿತ ವ್ಯಕ್ತಪಡಿಸಿದ ಸತೀಶ್ ಜಾರಕಿಹೊಳಿ

Sampriya
ಶುಕ್ರವಾರ, 29 ನವೆಂಬರ್ 2024 (16:34 IST)
Photo Courtesy X
ಹಾವೇರಿ: ಇದೀಗ ಮತ್ತೇ ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರ ಹಾಗೂ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರ ಮತ್ತೇ ಚರ್ಚೆಗೆ ಬಂದಿದೆ. ಇದಕ್ಕೆ ಕಾರಣ ಸಚಿವ ಸತೀಶ್ ಜಾರಕಿಹೊಳಿ ಅವರ ಹೇಳಿಕೆ.

ಹಾವೇರಿ ಜಿಲ್ಲೆಯ ಶಿಗ್ಗಾಂವಿಯಲ್ಲಿ ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ ಅವರು, ಸಿಎಂ ಆಗಲಿಕ್ಕೆ ಆಸೆ ಇದೆ, ಅಧ್ಯಕ್ಷ ಆಗಲಿಕ್ಕೆ ಆಸೆ ಇದೆ, ಮಂತ್ರಿ ಆಗಲಿಕ್ಕೂ ಆಸೆ ಇದೆ, ಆದ್ರೆ ಅಂತಿಮವಾಗಿ ಪಕ್ಷ ತೀರ್ಮಾನ ಮಾಡಲಿ. ಅದು ಪಕ್ಷದ ತೀರ್ಮಾನವೇ ಅಂತಿಮವಾಗಿದೆ ಎಂದು ಸಚಿವ ಸತೀಶ ಜಾರಕಿಹೊಳಿ  ಹೇಳಿದ್ದಾರೆ.

ಈ ಹಿಂದೆ ಸಿಎಂ ಆಗ್ತಾರೆ ಅಂತ ಹೇಳಿ ಹೆಸರು ಓಡಾಡ್ತು. ಈಗ ಅಧ್ಯಕ್ಷ ಆಗ್ತಾರೆ ಅಂತಾ ಹೆಸರು ಓಡಾಡ್ತಾ ಇದೆ. ನಮ್ಮ ಉತ್ಸಾಹ ಅಷ್ಟೆ. ಅಂತಿಮವಾಗಿ ಪಕ್ಷ ತೀರ್ಮಾನ ಮಾಡಬೇಕು. ನಾವೆಲ್ಲಾ ಕಾದು ನೋಡಬೇಕು ಅಷ್ಟೆ. ಈ ವಿಚಾರವಾಗಿ ನಾನು ಯಾವುದೇ ರೀತಿ ಒತ್ತಡ ಹಾಕಿಲ್ಲ. ಚುನಾವಣೆಯಲ್ಲಿ ಗೆಲ್ಲಿಸಿದ್ದೀವಿ, ತೃಪ್ತಿ ಇದೆ. ಮಂತ್ರಿಯಾಗಿ ಕೆಲಸ ಮಾಡ್ತಾ ಇದ್ದೀವಿ, ತೃಪ್ತಿ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಅಧ್ಯಕ್ಷ ಹುದ್ದೆ ಅಹಿಂದ ನಾಯಕರಿಗೆ ಕೊಡಬೇಕು ಅಂತಾ ಒತ್ತಾಯ ಇದೆ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ಆದರೆ ಅಂತಿಮವಾಗಿ ವರಿಷ್ಠರು ತೀರ್ಮಾನ ಮಾಡಬೇಕು. ಯಾರಿಗೆ ಕೊಡಬೇಕು? ಯಾಕೆ ಕೊಡಬೇಕು? ಅದರಿಂದ ಆಗುವ ಲಾಭ ಏನು ಎಂಬ ಬಗ್ಗೆ ಇದೆಲ್ಲಾ ಚರ್ಚೆ ಮಾಡಿ ಅಂತಿಮವಾಗಿ ತೀರ್ಮಾನ ಮಾಡುತ್ತಾರೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇರಳದ ರಂಜಿತಾ ಸಾವಿನ ಅಪಹಾಸ್ಯ ಮಾಡಿದ ಉಪ ತಹಶೀಲ್ದಾರ್ ಸಸ್ಪೆಂಡ್

Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ

ಇದ್ದಕ್ಕಿದ್ದಂತೆ ಇಂದು ಚಿನ್ನಸ್ವಾಮಿ ಕಾಲ್ತುಳಿತ ವಿರೋಧಿಸಿ ಬಿಜೆಪಿ ಪ್ರತಿಭಟನೆ ಹಿಂಪಡೆದಿದ್ದೇಕೆ

Indore: ರಾಜ ರಘುವಂಶಿ ಜೊತೆ ಇನ್ನೊಬ್ಬ ಮಹಿಳೆಯ ಹತ್ಯೆಗೆ ಸೋನಂ ಆಂಡ್ ಗ್ಯಾಂಗ್ ಸ್ಕೆಚ್ ಹಾಕಿದ್ದೇಕೆ

Air India Plane crash: ಜೀವ ಉಳಿಸಿಕೊಳ್ಳಲು ಹಾಸ್ಟೆಲ್ ಕಟ್ಟಡದಿಂದ ಹಾರಿದ ವಿದ್ಯಾರ್ಥಿಗಳು video

ಮುಂದಿನ ಸುದ್ದಿ
Show comments