Webdunia - Bharat's app for daily news and videos

Install App

ನಾನು ಶೇ 100 ರಷ್ಟು ಸರಿ ಎನ್ನಲ್ಲ, ಆದರೆ… ಇಡಿ ದಾಳಿ ಬಗ್ಗೆ ಸಚಿವ ಸತೀಶ್ ಜಾರಕಿಹೊಳಿ ಶಾಕಿಂಗ್ ಹೇಳಿಕೆ

ಕೃಷ್ಣವೇಣಿ ಕೆ
ಶುಕ್ರವಾರ, 11 ಸೆಪ್ಟಂಬರ್ 2026 (09:31 IST)
ಬೆಂಗಳೂರು: ನಾನು ಶೇ. 100 ರಷ್ಟು ಸರಿ ಎಂದು ಹೇಳಲ್ಲ. ಆದರೆ ದೊಡ್ಡ ದೊಡ್ಡ ಮೀನುಗಳಿವೆ ಎಂದು ತಮ್ಮ ನಿವಾಸದ ವೇಳೆ ಇಡಿ ದಾಳಿ ಬಗ್ಗೆ ಸಚಿವ ಸತೀಶ್ ಜಾರಕಿಹೊಳಿ ಶಾಕಿಂಗ್ ಹೇಳಿಕೆ ನೀಡಿದ್ದಾರೆ.

ಸತೀಶ್ ಜಾರಕಿಹೊಳಿ ನಿವಾಸದ ಮೇಲೆ ಮೊನ್ನೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದರು. ನಿನ್ನೆಯೂ ದಾಳಿ ಮುಂದುವರಿದಿತ್ತು. ಇದರ ಬೆನ್ನಲ್ಲೇ ಸಿಎಂ ಡಿಕೆ ಶಿವಕುಮಾರ್ ಇದು ರಾಜಕೀಯ ಪ್ರೇರಿತ ದಾಳಿ ಎಂದು ಕಿಡಿ ಕಾರಿದ್ದರು. ಇದೀಗ ಸ್ವತಃ ಸತೀಶ್ ಜಾರಕಿಹೊಳಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ.

‘ದಲಿತ ನಾಯಕರನ್ನು ಟಾರ್ಗೆಟ್ ಮಾಡಲಾಗುತ್ತಿದೆ. ನಮ್ಮ ಸಮಾಜದಲ್ಲಿ ನಾಗೇಂದ್ರ ಮೇಲೆ ದಾಳಿ ಮಾಡಿದ್ರು. ಇದೀಗ ನನ್ನ ಮೇಲೆ ದಾಳಿ ಮಾಡಲಾಗಿದೆ. ನಮ್ಮ ಸಮುದಾಯವೇ ಟಾರ್ಗೆಟ್ ಆ್ಗತಿದೆಯಾ ಎನ್ನುವ ಅನುಮಾನ ಸಹಜವಾಗಿ ಕಾಡುತ್ತದೆ.

ನಮ್ಮಲ್ಲಿ ದೊಡ್ಡ ದೊಡ್ಡ ಮೀನುಗಳಿವೆ. ಅದನ್ನು ಬಿಟ್ಟು ನಮ್ಮ ಕಡೆ ಬಂದಿದ್ದಾರೆ. ಇದು ನಮಗೂ ಅಚ್ಚರಿ ತಂದಿದೆ. ನಾನು 100% ಸರಿ ಎಂದು ಹೇಳಲ್ಲ. ಸಣ್ಣ ತಪ್ಪು ಮಾಡಿರಬಹುದು. 2 ಕೋಟಿ ರೂ. ಹಣ, ದಾಖಲೆ ತೆಗೆದುಕೊಂಡು ಹೋಗಿರುವುದು ನಿಜ. ಆದರೆ ನಾನು ಸಣ್ಣ ಮೀನಷ್ಟೇ. ಬಿಜೆಪಿ ನಾಯಕರು ತಪ್ಪೇ ಮಾಡಲ್ವಾ? ಅವರ ಮೇಲೆ ಯಾಕೆ ದಾಳಿಯಾಗಲ್ಲ?’ ಎಂದು ಸತೀಶ್ ಜಾರಕಿಹೊಳಿ ಪ್ರಶ್ನೆ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಡೆಯುವಾಗ ನೆಲ ನೋಡಿ ಎನ್ನೋದು ಇದಕ್ಕೇ… ನಿರ್ಮಾಣ ಹಂತದ ಮನೆಯಲ್ಲಿ ನಡೆಯಿತು ಭೀಕರ ದುರಂತ Video

Karnataka Weather: ರಾಜ್ಯದ ಇಂದಿನ ಹವಾಮಾನ ಬದಲಾವಣೆ ತಪ್ಪದೇ ಗಮನಿಸಿ

ಹೈದರಾಬಾದ್ ಬಳಿ ವೇಗವಾಗಿ ಬಂದ ಬಸ್ ಪೆಟ್ರೋಲ್ ಬಂಕ್‌ಗೆ ಡಿಕ್ಕಿ, ಭಾರಿ ದುರಂತ, Video

ಕಾಂಗ್ರೆಸ್ ಪಕ್ಷವನ್ನು ಮನೆಗೆ ಕಳುಹಿಸಲು ನಮಗೊಂದು ಅವಕಾಶ ಕೊಡಿ: ಬಿವೈ ವಿಜಯೇಂದ್ರ

18th BRICS: ರಾಷ್ಟ್ರ ರಾಜಧಾನಿಯಲ್ಲಿ ನಿಯೋಜನೆಗೊಂಡ ಪೊಲೀಸರೆಷ್ಟು ಗೊತ್ತಾ

ಮುಂದಿನ ಸುದ್ದಿ
Show comments