Webdunia - Bharat's app for daily news and videos

Install App

Satish Jarkiholi: ಗೃಹಲಕ್ಷ್ಮಿ 2 ತಿಂಗಳು ಲೇಟ್ ಆದ್ರೆ ಆಕಾಶ ತಲೆ ಮೇಲೆ ಬೀಳುತ್ತಾ: ಸತೀಶ್ ಜಾರಕಿಹೊಳಿ

Krishnaveni K
ಸೋಮವಾರ, 2 ಜೂನ್ 2025 (10:33 IST)
ಬೆಂಗಳೂರು: ಗೃಹಲಕ್ಷ್ಮಿ ಯೋಜನೆ ಹಣ ಇನ್ನೂ ಫಲಾನುಭವಿಗಳ ಖಾತೆಗೆ ಬಂದಿಲ್ಲ ಎಂದು ಮಾಧ್ಯಮಗಳು ಪ್ರಶ್ನೆ ಮಾಡಿದರೆ ಎರಡು ತಿಂಗಳು ಲೇಟ್ ಆದ್ರೆ ಆಕಾಶ ಏನೂ ತಲೆ ಮೇಲೆ ಬೀಳಲ್ಲ ಅಲ್ವಾ ಎಂದು ಸಚಿವ ಸತೀಶ್ ಜಾರಕಿಹೊಳಿ ಉಡಾಫೆಯ ಉತ್ತರ ನೀಡಿದ್ದಾರೆ. ಇದಕ್ಕೀಗ ಭಾರೀ ಆಕ್ರೋಶ ವ್ಯಕ್ತವಾಗಿದೆ.

ಕರ್ನಾಟಕ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಗೃಹಲಕ್ಷ್ಮಿ ಯೋಜನೆಯೂ ಒಂದು. ಆದರೆ ಕೇವಲ ಚುನಾವಣೆ ಸಂದರ್ಭಗಳಲ್ಲಿ ಮಾತ್ರ ತಿಂಗಳಾ ತಿಂಗಳು 2 ಸಾವಿರ ರೂ.ಗಳನ್ನು ಸರ್ಕಾರ ಕ್ರೆಡಿಟ್ ಮಾಡುತ್ತದೆ ಎಂದು ವಿಪಕ್ಷಗಳು ಆರೋಪಿಸುತ್ತವೆ.

ಇದಕ್ಕೆ ತಕ್ಕಂತೆ ಗೃಹಲಕ್ಷ್ಮಿ ಹಣ ಒಮ್ಮೆ ಹಾಕಿದರೆ ಮತ್ತೆ ಎರಡು-ಮೂರು ತಿಂಗಳಿಗೆ ಹಾಕುವುದೇ ಇಲ್ಲ. ಈಗ ಗೃಹಲಕ್ಷ್ಮಿ ಹಣ ಕ್ರೆಡಿಟ್ ಆಗಿಲ್ಲ ಎಂದು ಫಲಾನುಭವಿಗಳು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಆದರೆ ಈ ಬಗ್ಗೆ ಸಚಿವ ಸತೀಶ್ ಜಾರಕಿಹೊಳಿಗೆ ಕೇಳಿದಾಗ ಅವರು ನೀಡಿರುವ ಉತ್ತರಕ್ಕೆ ಭಾರೀ ಆಕ್ರೋಶ ವ್ಯಕ್ತವಾಗಿದೆ. ಗೃಹಲಕ್ಷ್ಮಿಎರಡು ತಿಂಗಳು ಲೇಟ್ ಆದ್ರೆ ಆಕಾಶ ತಲೆ ಮೇಲೆ ಬೀಳಲ್ಲ ಅಲ್ವಾ ಎಂದು ಕೇಳಿದ್ದಾರೆ. ಇದಕ್ಕೆ ಸೋಷಿಯಲ್ ಮೀಡಿಯಾದಲ್ಲಿ ನೆಟ್ಟಿಗರು ಪ್ರತಿಕ್ರಿಯಿಸಿದ್ದು, ನಿಮಗೆ ಇದು ವಿಷಯ ಅಲ್ಲದೇ ಇರಬಹುದು. ಆದರೆ ಬಡವರಿಗೆ ಇದು ದೊಡ್ಡ ಮೊತ್ತವೇ. ತಿಂಗಳು ತಿಂಗಳು ಕೊಡುತ್ತೇವೆ ಎಂದು ಹೇಳಿ ಈಗ ಮಾತು ತಪ್ಪಿರುವುದು ಯಾಕೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂವಿಧಾನವನ್ನು ಉಳಿಸಲು ಬಿಹಾರದಲ್ಲಿ ನಮ್ಮೊಂದಿಗೆ ಸೇರಿ: ರಾಹುಲ್ ಗಾಂಧಿ ಮನವಿ

ಧರ್ಮಸ್ಥಳ, ಅನಾಮಿಕ ಬಿಜೆಪಿಯ ಸೃಷ್ಟಿ: ಈಶ್ವರ್ ಖಂಡ್ರೆ ಹೊಸ ಬಾಂಬ್‌

ಪಕ್ಷದ ಶಿಸ್ತು ಉಲ್ಲಂಘನೆ: ಶಾಸಕಗೆ ಶಿವಗಂಗಾಗೆ ಬಿಸಿ ಮುಟ್ಟಿಸಿದ ಡಿಕೆ ಶಿವಕುಮಾರ್‌

ಆನ್‌ಲೈನ್‌ನಲ್ಲಿ ಹಾಲು ಆರ್ಡರ್ ಮಾಡಲು ಹೋಗಿ ಲಕ್ಷ ಲಕ್ಷ ಕಳೆದುಕೊಂಡ ವೃದ್ಧೆ

ಹಿಮಾಚಲ ಪ್ರದೇಶದಲ್ಲಿ ರಣಮಳೆಗೆ 124ಕ್ಕೂ ಅಧಿಕ ಸಾವು

ಮುಂದಿನ ಸುದ್ದಿ
Show comments