Webdunia - Bharat's app for daily news and videos

Install App

ಸತ್ಯಾಗ್ರಹನಿರತ ಶಾಸಕ ರೇಣುಕಾಚಾರ್ಯ ಅಸ್ವಸ್ಥ

Webdunia
ಸೋಮವಾರ, 3 ಡಿಸೆಂಬರ್ 2018 (14:15 IST)
ಜನರಿಗೆ ಕಡಿಮೆ ದರದಲ್ಲಿ ಮರಳು ಕೊಡಿಸಿಯೇ ಸಿದ್ದ ಎಂದು ಕಳೆದು ಆರು ದಿನಗಳಿಂದ ಧರಣಿ ಸತ್ಯಾಗ್ರಹ ನಡೆಸುತ್ತಿರುವ ಬಿಜೆಪಿ ಶಾಸಕ ಅಸ್ವಸ್ಥಗೊಂಡಿದ್ದಾರೆ.

ದಾವಣಗೆರೆ ಜಿಲ್ಲೆಯ ಹೊನ್ನಾಳಿ ಶಾಸಕ ರೇಣುಕಾಚಾರ್ಯ ಆರೋಗ್ಯದಲ್ಲಿ ಏರುಪೇರು ಕಂಡು ಬಂದಿದ್ದು, ಅಸ್ವಸ್ಥರಾಗಿದ್ದಾರೆ.
ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಆರು ದಿನಗಳಿಂದ ಹೊನ್ನಾಳಿ ಪಟ್ಟಣದಲ್ಲಿ ಶಾಸಕ ರೇಣುಕಾಚಾರ್ಯ ಧರಣಿ ನಡೆಸುತ್ತಿದ್ದಾರೆ. ಕಾನೂನುಬಾಹಿರವಾಗಿ ನದಿಗೆ ಇಳಿದು ಮರಳು ತುಂಬಿ ಜಿಲ್ಲಾಡಳಿತಕ್ಕೆ, ಪೊಲೀಸ್ ಇಲಾಖೆಗೆ ಸೆಡ್ಡು ಹೊಡೆದಿದ್ದರು. ನಂತರ ಹೊನ್ನಾಳಿ ಪಟ್ಟಣದಲ್ಲಿ ಮೊದಲು ಎರಡು ದಿನ ಉಪವಾಸ ಸತ್ಯಾಗ್ರಹ ನಡೆಸಿದ್ದ ರೇಣುಕಾಚಾರ್ಯ, ಬಿಜೆಪಿ ನಾಯಕರ ಒತ್ತಾಯದ ಮೇರೆಗೆ ಉಪವಾಸ ಕೈ ಬಿಟ್ಟಿದ್ದರು.  ಬಳಿಕ  ನ್ಯಾಮತಿ ತಾಲ್ಲೂಕನ್ನು ಸಂಪೂರ್ಣ ಬಂದ್ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದರು.

ನಿರಂತರ ಧರಣಿ ಸತ್ಯಾಗ್ರಹ ನಡೆಸುತ್ತಿರುವ ಶಾಸಕ ರೇಣುಕಾಚಾರ್ಯ ರಿಗೆ ಶುಗರ್ ಹಾಗೂ ರಕ್ತದೊತ್ತಡ ಖಾಯಿಲೆ ಇರುವ ಹಿನ್ನಲೆ ಬಳಲಿಕೆಯಿಂದ ಅಸ್ವಸ್ಥರಾಗಿದ್ದಾರೆ ಎಂದು ಹೇಳಲಾಗಿದೆ. ವೈದ್ಯರು ವೈದ್ಯಕೀಯ ಪರೀಕ್ಷೆ ನಡೆಸಿ ಮನೆಯಲ್ಲಿಯೇ ಚಿಕಿತ್ಸೆ ನೀಡುತ್ತಿದ್ದಾರೆ. ಇನ್ನೂ ಬೇಡಿಕೆ ಈಡೇರಿಕೆ ಆಗುವವರೆಗು ಪ್ರತಿಭಟನೆಗೆ ಕರೆ ನೀಡಿರುವ ರೇಣುಕಾಚಾರ್ಯ  ಹೊನ್ನಾಳಿ ತಾಲ್ಲೂಕು ಬಂದ್ ಗೆ ಕರೆ ಕೊಟ್ಟಿದ್ದಾರೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುತ್ತಪ್ಪ ರೈ ಮಗ ರಿಕ್ಕಿ ಮೇಲೆ ಗುಂಡಿನ ದಾಳಿ: ಇಂಚಿಂಚೂ ಮಾಹಿತಿ ಬಿಚ್ಚಿಟ್ಟ ಪ್ರಕಾಶ್ ರೈ

Bappanadu Viral Video: ಬಪ್ಪನಾಡು ದುರ್ಗಾಪರಮೇಶ್ವರಿ ರಥ ಏಕಾಏಕಿ ಕುಸಿತ: ಮೇಲಿದ್ದ ಅರ್ಚಕರನ್ನು ದೇವಿಯೇ ಕಾಪಾಡಿದ್ಳು

Kannada Viral Video: ಬೆಂಗಳೂರಲ್ಲಿ ಬದುಕಬೇಕೆಂದರೆ ಹಿಂದಿ ಕಲಿ: ಕನ್ನಡಿಗ ಆಟೋ ಚಾಲಕನಿಗೆ ಹಿಂದಿವಾಲ ಧಮ್ಕಿ

Arecanut price today: ಅಡಿಕೆಗೂ ಇಲ್ಲ, ಕಾಳುಮೆಣಸಿಗೂ ಇಲ್ಲ, ಇಂದಿನ ಬೆಲೆ ಎಷ್ಟಾಗಿದೆ ನೋಡಿ

DK Shivakumar: ಡಿಕೆ ಶಿವಕುಮಾರ್ ಭೇಟಿಯಾದ ಯಡಿಯೂರಪ್ಪ ಪುತ್ರ ಸಂಸದ ರಾಘವೇಂದ್ರ: ವಿವಾದ ಮಾಡ್ಬೇಡಿ ಎಂದು ರಿಕ್ವೆಸ್ಟ್

ಮುಂದಿನ ಸುದ್ದಿ
Show comments