Webdunia - Bharat's app for daily news and videos

Install App

ನಾಮಪತ್ರ ತಿರಸ್ಕೃತ ಭೀತಿಯಲ್ಲಿದ್ದಾರೆ ಸವದತ್ತಿ ಬಿಜೆಪಿ ಅಭ್ಯರ್ಥಿ

Webdunia
ಶನಿವಾರ, 22 ಏಪ್ರಿಲ್ 2023 (10:21 IST)
ಬೆಳಗಾವಿ : ನಾಮಪತ್ರ ಸಲ್ಲಿಕೆ ವೇಳೆ ಸವದತ್ತಿ ಬಿಜೆಪಿ ಅಭ್ಯರ್ಥಿ ರತ್ನಾ ಮಾಮನಿ ಯಡವಟ್ಟು ಮಾಡಿಕೊಂಡು ನಾಮಪತ್ರ ತಿರಸ್ಕೃತ ಭೀತಿಯಲ್ಲಿದ್ದಾರೆ. ಶನಿವಾರ ಬೆಳಗ್ಗೆ 10 ಗಂಟೆಯವರೆಗೆ ಚುನಾವಣಾ ಅಧಿಕಾರಿಗಳು ಸಮಯ ನೀಡಿದ್ದು, ಚೆಂಡು ಈಗ ಸವದತ್ತಿ ಆರ್ಓ ಅಂಗಳದಲ್ಲಿದೆ.
 
ಬೆಳಗಾವಿ ಜಿಲ್ಲೆಯಲ್ಲಿ ಪ್ರತಿಷ್ಠಿತ ಕ್ಷೇತ್ರವಾದ ಸವದತ್ತಿ ಯಲ್ಲಮ್ಮ ಮತಕ್ಷೇತ್ರಕ್ಕೆ ಆಯ್ಕೆ ಬಯಸಿ ಬಿಜೆಪಿಯ ರತ್ನಾಮಾಮನಿ ನಾಮಪತ್ರ ಸಲ್ಲಿಸಿದ್ದಾರೆ. ಆದರೆ ಸಲ್ಲಿಸಿದ ನಾಮಪತ್ರದಲ್ಲಿ ಲೋಪದೋಷಗಳಿವೆ ಎಂದು ಹೇಳಲಾಗುತ್ತಿದೆ.

ಕಾಂಗ್ರೆಸ್ ಅಭ್ಯರ್ಥಿ ವಿಶ್ವಾಸ ವೈದ್ಯ ಹಾಗೂ ಆಪ್ ಪಕ್ಷದ ಅಭ್ಯರ್ಥಿ ಬಾಪುಗೌಡ ಚುನಾವಣಾ ಅಧಿಕಾರಿಗಳಿಗೆ ಲಿಖಿತ ದೂರು ಸಲ್ಲಿಸಿ ನಾಮಪತ್ರ ತಿರಸ್ಕರಿಸಬೇಕು ಎಂದು ಪಟ್ಟು ಹಿಡಿದಿದ್ದಾರೆ.

ಫಾರಂ ನಂಬರ್ 29ರ ನಮೂನೆ 2019ರಲ್ಲಿ ಬದಲಾವಣೆ ಮಾಡಲಾಗಿದೆ. ಆದರೆ 2018ರ ನಮೂನೆ ತುಂಬಿ ನಾಮಪತ್ರ ಸಲ್ಲಿಕೆ ಮಾಡಲಾಗಿದೆ. ನಾಮಪತ್ರ ಪರಿಶೀಲನೆ ಅವಧಿ ಮುಕ್ತಾಯ ಬಳಿಕ ಏ.20ರ ಸಂಜೆ 7:38ಕ್ಕೆ ಬಾಂಡ್ ಪಡೆದು ಮತ್ತೊಂದು ಅಫಿಡವಿಟ್ ಸಲ್ಲಿಸಲಾಗಿದೆ. ಇದು ಸಹ ಕಾನೂನು ಬಾಹಿರ ಎಂದು ಕಾಂಗ್ರೆಸ್, ಆಪ್ ಆರೋಪಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bakrid: ಅಲ್ಲಾಹನಿಗಾಗಿ ಕತ್ತು ಸೀಳಿಕೊಂಡು ದೇಹತ್ಯಾಗ ಮಾಡಿದ ವ್ಯಕ್ತಿ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ, ಆರೋಪಿಗಳ ಬಾಯಿಂದ್ದ ಬೆಚ್ಚಿಬೀಳಿಸುವ ಮಾಹಿತಿ ಹೊರಕ್ಕೆ

Covid 19: ದೇಶದಲ್ಲಿ ಏರುತ್ತಲೇ ಇದೆ ಕೋವಿಡ್ 19 ಪ್ರಕರಣಗಳು, ಸಕ್ರಿಯ ಪ್ರಕರಣಗಳ ಸಂಖ್ಯೆ ಹೀಗಿದೆ

Chitradurga Renukaswamy: ಹತ್ಯೆಯಾಗಿ ಇಂದಿಗೆ ಒಂದು ವರ್ಷ, ಪೂಜೆ ಸಲ್ಲಿಸಿದ ಕುಟುಂಬಸ್ಥರು

Rajastan: ನಿದ್ರಾಜನಕ ಔಷಧಿ ನೀಡಿ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆ ಮೇಲೆ ರೇಪ್‌

ಮುಂದಿನ ಸುದ್ದಿ
Show comments