Webdunia - Bharat's app for daily news and videos

Install App

ಕನ್ನಡ ಮಾತನಾಡಲ್ಲ ಎಂದಿದ್ದ ಎಸ್ ಬಿಐ ಮ್ಯಾನೇಜರ್ ಎತ್ತಂಗಡಿ: ಇದು ಕನ್ನಡಿಗರ ತಾಕತ್ತು

Krishnaveni K
ಬುಧವಾರ, 21 ಮೇ 2025 (14:38 IST)
ಬೆಂಗಳೂರು: ಆನೇಕಲ್ ತಾಲೂಕಿನ ಎಸ್ ಬಿಐ ಬ್ಯಾಂಕ್ ಬ್ರಾಂಚ್ ನ ಮ್ಯಾನೇಜರ್ ಕನ್ನಡ ಮಾತನಾಡಲ್ಲ ಎಂದು ದರ್ಪ ತೋರಿದ್ದ ವಿಡಿಯೋ ವೈರಲ್ ಆಗಿತ್ತು. ಇದೀಗ ಮ್ಯಾನೇಜರ್ ನನ್ನು ಎತ್ತಂಗಡಿ ಮಾಡಲಾಗಿದೆ.

ಎಸ್ ಬಿಐ ಬ್ಯಾಂಕ್ ನ ಮಹಿಳಾ ವ್ಯವಸ್ಥಾಪಕಿ ಗ್ರಾಹಕರೊಂದಿಗೆ ಕನ್ನಡದಲ್ಲಿ ಮಾತನಾಡಲು ನಿರಾಕರಿಸಿದ್ದಳು. ಯಾವುದೇ ಕಾರಣಕ್ಕೂ ನಾನು ಕನ್ನಡದಲ್ಲಿ ಮಾತನಾಡಲ್ಲ. ಇದು ಭಾರತ, ಹಿಂದಿಯಲ್ಲಿ ಮಾತನಾಡ್ತೀನಿ ಎಂದು ಅಹಂಕಾರ ತೋರಿದ್ದಳು.

ಸ್ಥಳೀಯ ಗ್ರಾಹಕರೊಂದಿಗೆ ಸ್ಥಳೀಯ ಭಾಷೆಯಲ್ಲಿ ಮಾತನಾಡಬೇಕು ಎಂಬ ನಿಯಮವಿದ್ದರೂ ದರ್ಪ ಪ್ರದರ್ಶಿಸಿದ್ದಕ್ಕೆ ಕನ್ನಡ ಪರ ಸಂಘಟನೆಗಳು ಬ್ಯಾಂಕ್ ಗೆ ತೆರಳಿ ಆಕ್ಷೇಪ ವ್ಯಕ್ತಪಡಿಸಿದ್ದರು. ಇದರ ಬೆನ್ನಲ್ಲೇ ಆಕೆ ಕ್ಷಮೆ ಯಾಚಿಸಿದ್ದಳು.

ಆದರೂ ಈಗ ಆ ವ್ಯವಸ್ಥಾಪಕಿಯನ್ನು ವರ್ಗಾವಣೆ ಮಾಡಲಾಗಿದೆ. ಘಟನೆ ಸಿಎಂ ಸಿದ್ದರಾಮಯ್ಯ ಗಮನಕ್ಕೂ ಬಂದಿದ್ದು, ಮಹಿಳಾ ವ್ಯವಸ್ಥಾಪಕಿಯನ್ನು ವರ್ಗಾವಣೆ ಮಾಡಿರುವುದಕ್ಕೆ ಎಸ್ ಬಿಐ ಅಧಿಕಾರಿಗಳನ್ನು ಅಭಿನಂದಿಸಿದ್ದಾರೆ. ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ಪುನರಾವರ್ತನೆಯಾಗದಂತೆ ಸ್ಥಳೀಯ ಭಾಷೆ ಕಲಿಕೆಗೆ ತರಬೇತಿ ನೀಡುವಂತೆ ಸೂಚನೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Chhattisgarh Encounter: ಛತ್ತೀಸ್‌ಗಢದಲ್ಲಿ ಮತ್ತೆ ಗುಂಡಿನ ಸದ್ದು: ಭದ್ರತಾ ಪಡೆಯ ಎನ್‌ಕೌಂಟರ್‌ಗೆ 26 ನಕ್ಸಲರು ಬಲಿ

Booker Prize: ಪ್ರಶಸ್ತಿಯೊಂದಿಗೆ ಬರೋಬ್ಬರಿ ₹57.28 ಲಕ್ಷ ಬಹುಮಾನ ಪಡೆದ ಕನ್ನಡದ ಸಾಹಿತಿ ಬಾನು ಮುಷ್ತಾಕ್‌

ಸಿದ್ದರಾಮಯ್ಯರಿಗೆ ದಿವಾಳಿ ಮಾಡೆಲ್ ಆಫ್ ಕರ್ನಾಟಕ ಬಿರುದು ಕೊಡ್ತೀವಿ: ಆರ್.ಅಶೋಕ್

Mallikarjun Kharge: ಚುಟ್ ಪುಟ್ ದಾಳಿ ಎಂದ ಮಲ್ಲಿಕಾರ್ಜುನ ಖರ್ಗೆಗೂ ಪಪ್ಪು ಮನಸ್ಥಿತಿ ಬಂತಾ: ಪ್ರತಾಪ್ ಸಿಂಹ

ED Raid: ಸಚಿವ ಪರಮೇಶ್ವರ್ ಸಿದ್ಧಾರ್ಥ್ ಕಾಲೇಜು ಇಡಿ ದಾಳಿಗೂ ರನ್ಯಾ ರಾವ್ ಗೂ ಲಿಂಕ್

ಮುಂದಿನ ಸುದ್ದಿ
Show comments