Webdunia - Bharat's app for daily news and videos

Install App

ಕೊರೊನಾ ಭೀತಿ ಹೆಚ್ಚಳ ಊರುಗಳತ ಹೊರಟ ಕಾರ್ಮಿಕರು

Webdunia
ಸೋಮವಾರ, 29 ನವೆಂಬರ್ 2021 (16:38 IST)
ಕೊರೊನಾ ಮೂರನೇ ಅಲೆ ಭೀತಿ ಹಿನ್ನೆಲೆಯಲ್ಲಿ ಮತ್ತೆ ಲಾಕ್ ಡೌನ್ ಮಾಡುತ್ತಾರೆ ಎಂಬ ಗಾಳಿ ಸುದ್ದಿಗಳಿಗೆ ಸಾರ್ವಜನಿಕರು ಅತಂಕಕ್ಕೆ ಒಳಗಾಗಿದ್ದಾರೆ. ಹೊರ ರಾಜ್ಯಗಳ ಕೆಲಸಗಾರರು ಮತ್ತೆ ಬೆಂಗಳೂರು ತೊರೆಯಲಾರಂಭಿಸಿದ್ದಾರೆ.
 
ರೈಲು ನಿಲ್ದಾಣ ಹಾಗೂ ಹೊರ ರಾಜ್ಯದ ಬಸ್ ಗಳನ್ನು ಬುಕ್ಕಿಂಗ್ ಮಾಡುವಲ್ಲಿ ನಿರತರಾಗಿದ್ದಾರೆ.ಇದರ ನಡುವೆ ಕಟ್ಟು ನಿಟ್ಟಿನ ನಿಯಮ ಹೊರತು ಪಡಿಸಿ ಯಾವುದೇ ಲಾಕ್‌ಡೌನ್ ಜಾರಿಯಿಲ್ಲ ಎಂದು ಆರೋಗ್ಯ ಸಚಿವರ ಕಾರ್ಯಾಲಯ ಸ್ಪಷ್ಟಪಡಿಸಿದೆ.
 
ದಕ್ಷಿಣ ಆಫ್ರಿಕಾ ಸೇರಿದಂತೆ ಹಲವು ದೇಶಗಳಲ್ಲಿ ಕೋವಿಡ್ ರೂಪಾಂತರಿ ಓಮಿಕ್ರಾನ್ ಹಾವಳಿ ಹೆಚ್ಚಿದೆ. ಈ ಹಿನ್ನೆಲೆಯಲ್ಲಿ ವಿಶ್ವದ ಅನೇಕ ರಾಷ್ಟ್ರಗಳು ಮತ್ತೆ ಕೋವಿಡ್ ಸುರಕ್ಷತಾ ನಿಯಮಗಳನ್ನು ಬಿಗಿಗೊಳಿಸುತ್ತಿವೆ. ಕೊರೊನಾ ಮೂರನೇ ಅಲೆಯ ಭೀತಿ ಹಿನ್ನೆಲೆಯಲ್ಲಿ ಹೊರ ದೇಶಗಳಿಂದ ಭಾರತಕ್ಕೆ ಬರುವ ಪ್ರಜೆಗಳ ಕಡ್ಡಾಯ ಪರೀಕ್ಷೆಗೆ ಸೂಚನೆ ನೀಡಲಾಗಿದೆ. ರಾಜ್ಯದಲ್ಲೂ ಸಹ ಹೊರ ದೇಶಗಳಿಂದ ಬರುವರ ಮೇಲೆ ಹೆಚ್ಚಿನ ನಿಗಾ ಜತೆಗೆ ಹೆಚ್ಚುವರಿ ಸುರಕ್ಷತಾ ಕ್ರಮಗಳನ್ನು ಪಾಲಿಸುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸೂಚಿಸಿದೆ.
 
ಅದರಂತೆ ಯುನೈಟೆಡ್ ಕಿಂಗ್ ಡಮ್, ದಕ್ಷಿಣ ಆಫ್ರಿಕಾ, ಬ್ರೆಜಿಲ್, ಬಾಂಗ್ಲಾದೇಶ, ಚೈನಾ, ನ್ಯೂಜಿಲಾಂಡ್, ಜಿಂಬಾಂಬ್ವೆ, ಸಿಂಗಪೂರ್, ಹಾಂಕಾಂಗ್ ಮತ್ತು ಇಸ್ರೇಲ್ ಮತ್ತಿತರ ರಾಷ್ಟ್ರಗಳಿಂದ ಬರುವರ ಮೇಲೆ ಪೋಸ್ಟ್ ಕೋವಿಡ್ ಪರೀಕ್ಷೆ ಜತೆಗೆ ಹೆಚ್ಚುವರಿ ಸುರಕ್ಷತಾ ಕ್ರಮ ಪಾಲನೆ ಮಾಡಲು ಸೂಚನೆ ನೀಡಲಾಗಿದೆ. ಓಮಿಕ್ರಾನ್ ರೂಪಾಂತರ ಕೊರೊನಾ ವೈರಸ್ ಪತ್ತೆಯಾದ ಬೆನ್ನಲ್ಲೇ ಅನೇಕ ರಾಷ್ಟ್ರಗಳು ಸುರಕ್ಷತಾ ಕ್ರಮ ಬಿಗಿಗೊಳಿಸಲು ಮುಂದಾಗಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಇಂದು ಈ ಜಿಲ್ಲೆಗಳಲ್ಲಿ ಭಾರೀ ಮಳೆ, ಎಲ್ಲೆಲ್ಲಿ ಇಲ್ಲಿದೆ ವಿವರ

ಸುಂದರವಾಗಿದ್ದಳೆಂದು ತಲೆ ಬೋಳಿಸಿ, ವರದಕ್ಷಿಣೆ ಕಿರುಕುಳ: ಯುಎಇಯಲ್ಲಿ ಮಗುವಿನೊಂದಿಗೆ ಕೇರಳ ಮಹಿಳೆ ಆತ್ಮಹತ್ಯೆ

ಶುಭಾಂಶು ಶುಕ್ಲ ಬದಲು ದಲಿತರನ್ನು ಬಾಹ್ಯಾಕಾಶಕ್ಕೆ ಕಳುಹಿಸಬೇಕಿತ್ತು: ಕಾಂಗ್ರೆಸ್ ನಾಯಕ ಉದಿತ್ ರಾಜ್

ಬೆಂಗಳೂರು, ನೋಟ್ಸ್ ನೀಡು ನೆಪದಲ್ಲಿ ವಿದ್ಯಾರ್ಥಿನಿ ಮೇಲೆ ಶಿಕ್ಷಕರಿಬ್ಬರು, ಸ್ನೇಹಿತನಿಂದ ರೇಪ್‌

ಮಂತ್ರಾಲಯಕ್ಕೆ ಭೇಟಿ ನೀಡಿದ ಬಳಿಕ ಪೀಠಾಧಿಪತಿಯರನ್ನು ಭೇಟಿಯಾದ ಸಚಿವ ರಾಮಲಿಂಗಾರೆಡ್ಡಿ

ಮುಂದಿನ ಸುದ್ದಿ
Show comments