Webdunia - Bharat's app for daily news and videos

Install App

ನಿರ್ಗತಿಕರಿಗೆ ಊಟದ ವ್ಯವಸ್ಥೆ ಕಲ್ಪಿಸುವ ಯೋಜನೆ ಜಾರಿ: ಯು.ಟಿ.ಖಾದರ್

Webdunia
ಶನಿವಾರ, 17 ಸೆಪ್ಟಂಬರ್ 2016 (10:49 IST)
ವಸತಿ ವ್ಯವಸ್ಥೆಯಿಲ್ಲದ ನಿರ್ಗತಿಕರಿಗೆ ಊಟದ ವ್ಯವಸ್ಥೆ ಕಲ್ಪಿಸುವ ಯೋಜನೆ ಜಾರಿಯಾಗಲಿದ್ದು, ಮೊದಲ ಹಂತದಲ್ಲಿ ರಾಜ್ಯದ ಯಾವುದಾದರೊಂದು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಯೋಜನೆ ಪ್ರಾರಂಭಿಸಲಾಗುತ್ತದೆ ಎಂದು ಆಹಾರ ಹಾಗೂ ನಾಗರಿಕ ಪೊರೈಕೆ ಖಾತೆ ಸಚಿವ ಯು.ಟಿ.ಖಾದರ್ ತಿಳಿಸಿದ್ದಾರೆ.
 
ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ರಾಜ್ಯಧಾನಿ ಬೆಂಗಳೂರಿನಲ್ಲಿ ಇತ್ತೀಚೆಗೆ ನಡೆದ ಆಹಾರ ಇಲಾಖೆಯ ಉನ್ನತ ಮಟ್ಟದ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ನಿರ್ಗತಿಕರಿಗೆ ಊಟದ ವ್ಯವಸ್ಥೆ ಕಲ್ಪಿಸುವ ಯೋಜನೆ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಸದ್ಯ ರಾಜ್ಯದ ಯಾವುದಾದರೊಂದು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಇದನ್ನು ಜಾರಿಗೊಳಿಸಲು ಪ್ರಸ್ತಾವನೆ ಸಲ್ಲಿಸುವಂತೆ ಆದೇಶ ನೀಡಿದ್ದಾರೆ ಎಂದು ಹೇಳಿದರು. 
 
ರಾಜ್ಯದ ಎಲ್ಲಾ ನ್ಯಾಯಬೆಲೆ ಅಂಗಡಿಯ ಮೂಲಕ ಅಕ್ಕಿ, ಗೋಧಿ ಮಾತ್ರವಲ್ಲದೆ ಪ್ರೋಟಿನ್‌ಯುಕ್ತ ದ್ವಿದಳ ಧಾನ್ಯಗಳನ್ನು ಪ್ರತಿ ಕುಟುಂಬಕ್ಕೆ ಒಂದು ಕೆ.ಜಿ.ಯಂತೆ ನೀಡಲಾಗುವುದು. ಹಾಗೂ ತಾಳೆ ಎಣ್ಣೆ, ತೆಂಗಿನ ಎಣ್ಣೆ, ಸೂರ್ಯ ಕ್ರಾಂತಿ ಎಣ್ಣೆಯಲ್ಲಿ ಯಾವುದಾದರೊಂದು ಬಗೆಯ ಎಣ್ಣೆ ವಿತರಿಸಲಾಗುವುದು ಎಂದು ಆಹಾರ ಹಾಗೂ ನಾಗರಿಕ ಪೊರೈಕೆ ಖಾತೆ ಸಚಿವ ಯು.ಟಿ.ಖಾದರ್ ಹೇಳಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Operation Sindoor: ಹಣೆಗೆ ತಿಲಕವಿಟ್ಟು ಆಪರೇಷನ್ ಸಿಂದೂರಕ್ಕೆ ಜೈ ಎಂದ ಸಿದ್ದರಾಮಯ್ಯ

Operation Sindoora: ಭಾರತದ ವಿರುದ್ದ ಛೂಬಿಡುತ್ತಿದ್ದ ಪಾಕ್‌ಗೆ ಎಚ್ಚರಿಕೆ ಗಂಟೆ ಎಂದ ಸಿದ್ದರಾಮಯ್ಯ

Trissur Pooram: ತ್ರಿಶ್ಶೂರ್ ಪೂರಂನಲ್ಲಿ ರೊಚ್ಚಿಗೆದ್ದ ಆನೆ ವಿಡಿಯೋ ವೈರಲ್: ಹಲವರಿಗೆ ಗಾಯ

Operation Sindoor: ದಾಳಿ ಮಾಡಿ ಗಂಟೆಯೊಳಗೆ ಭಾರತ ನಮಗೆ ಶರಣಾಗಿದೆ, ಬಿಳಿ ಬಾವುಟ ನೆಟ್ಟಿದೆ: ಕೊಚ್ಚಿಕೊಂಡ ಪಾಕಿಸ್ತಾನ ಸೇನೆ

Operation Sindoor: ಉಗ್ರರನ್ನು ಕೊಂದಿದ್ದಕ್ಕೆ ಪಾಕಿಸ್ತಾನಕ್ಕೆ ಸಿಟ್ಟು, ಭಾರತೀಯ ನಾಗರಿಕರ ಮೇಲೆ ದಾಳಿ, 10 ಮಂದಿ ಸಾವು

ಮುಂದಿನ ಸುದ್ದಿ
Show comments