Webdunia - Bharat's app for daily news and videos

Install App

ಶಾಲಾ ವಾಹನದಲ್ಲಿ ಬಾಲಕ ನೇತಾಡಿಕೊಂಡು ಪ್ರಯಾಣಿಸಿದ್ದ ಪ್ರಕರಣ; ಚಾಲಕ ಅರೆಸ್ಟ್

Webdunia
ಶುಕ್ರವಾರ, 29 ನವೆಂಬರ್ 2019 (10:37 IST)
ರಾಯಚೂರು : ಶಾಲಾ ವಾಹನದಲ್ಲಿ  ಬಾಲಕ ನೇತಾಡಿಕೊಂಡು ಪ್ರಯಾಣಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಲಾ ವಾಹನ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ ಎಂಬುದಾಗಿ ತಿಳಿದುಬಂದಿದೆ.



ಚಾಲಕ ರಾಮಯ್ಯ ಬಂಧಿತ ಆರೋಪಿ. ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಶಾಲೆಯೊಂದರ ವಾಹನದಲ್ಲಿ ಚಾಲಕ ರಾಮಯ್ಯ  ಶಾಲಾ ವಿದ್ಯಾರ್ಥಿಯೊಬ್ಬನನ್ನು ವಾಹನದ ಹೊರಗೆ ನೇತಾಡಿಸಿಕೊಂಡು ಪ್ರಯಾಣ ಬೆಳೆಸಿದ್ದಾನೆ. ಈ ಹಿನ್ನಲೆಯಲ್ಲಿ ಬಾಲಕನ ಜೀವದ ಜೊತೆ ಆಟವಾಡಿದ ಚಾಲಕನನ್ನು ಶಾಲಾ ಆಡಳಿತ ಮಂಡಳಿ ವಜಾಗೊಳಿಸಿದೆ.


ಅಲ್ಲದೇ  ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾಲಕನ ವಿರುದ್ದ ಮಾನ್ವಿ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 279, 336 ರಡಿ ಕೇಸ್ ದಾಖಲಾಗಿದ್ದು, ಇದೀಗ ಪೊಲೀಸರು ಆತನನ್ನು ಬಂಧಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments