Webdunia - Bharat's app for daily news and videos

Install App

ಶಾಲಾ ಬಸ್ ಡಿಕ್ಕಿ: 3 ವರ್ಷದ ಬಾಲಕಿ ಸಾವು

Webdunia
ಸೋಮವಾರ, 2 ಮಾರ್ಚ್ 2015 (11:45 IST)
ಖಾಸಗಿ ಶಾಲಾ ಬಸ್‌ವೊಂದು ಡಿಕ್ಕಿ ಹೊಡೆದ ಪರಿಣಾಮ 3 ವರ್ಷದ ಬಾಲಕಿಯೋರ್ವಳು ಮೃತಪಟ್ಟಿರುವ ಘಟನೆ ನಗರದ ಮಂಡೂರು ಬಳಿಯ ಸಿಂಗೇಹಳ್ಳಿಯಲ್ಲಿ ನಡೆದಿದೆ. 
 
ಮೃತ ಬಾಲಕಿಯನ್ನು ಶ್ರೀನಿಧಿ(3) ಎನ್ನಲಾಗಿದ್ದು, ಬಾಲಕಿ ತಮ್ಮ ಮನೆಯ ಮುಂಬಾಗದ ರಸ್ತೆಯಲ್ಲಿ ಆಟವಾಡುತ್ತಿದ್ದಳು ಎನ್ನಲಾಗಿದೆ. ಈ ವೇಳೆ, ಬಾಲಕಿ ಇದ್ದ ಹಾದಿಯಲ್ಲಿಯೇ ಸಾಗುತ್ತಿದ್ದ ಶಾಲಾ ಬಸ್ ಬಾಲಕಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ತಲೆಗೆ ಅಗಾಧ ಪೆಟ್ಟು ಬಿದ್ದು ತೀವ್ರ ರಕ್ತ ಸ್ರಾವವಾದ ಹಿನ್ನೆಲೆಯಲ್ಲಿ ಬಾಲಕಿ ಅಸ್ವಸ್ಥಗೊಂಡಿದ್ದಾಳೆ. ತಕ್ಷಣವೇ ಗಾಯಾಳು ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಲು ರವಾನಿಸಲಾಗುತ್ತಿತ್ತು. ಆದರೆ ಪ್ರಯಾಣ ಮಧ್ಯೆಯಲ್ಲಿಯೇ ಬಾಲಕಿ ಮೃಪಟ್ಟಿದ್ದಾಳೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಬಸ್ ನಾರಾಯಣ ಶಿಕ್ಷಣ ಸಂಸ್ಥೆಗೆ ಸೇರಿದ್ದಾಗಿದ್ದು, ಬಸ್ ಚಾಲಕ ಕೆಂಪೇಗೌಡ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. 
 
ಪ್ರಕರಣವನ್ನು ದಾಖಲಿಸಿಕೊಂಡಿರುವ ಅವಲಹಳ್ಳಿ ಠಾಣೆ ಪೊಲೀಸರು, ತನಿಖೆ ಮುಂದುವರಿಸಿದ್ದಾರೆ. ಅಲ್ಲದೆ ಚಾಲಕನ ಅಜಾರೂಕತೆಯೇ ಇದಕ್ಕೆ ಕಾರಣ ಎಂದಿದ್ದಾರೆ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments