Webdunia - Bharat's app for daily news and videos

Install App

ಶಾಲಾ ವಾಹನ ಬಸ್ ಡಿಕ್ಕಿ: ಇಬ್ಬರು ಮಕ್ಕಳು ಸಾವು, ಮೂವರ ಕಾಲು ತುಂಡು, 15 ವಿದ್ಯಾರ್ಥಿಗಳಿಗೆ ಗಾಯ

Sampriya
ಗುರುವಾರ, 5 ಸೆಪ್ಟಂಬರ್ 2024 (14:24 IST)
Photo Courtesy X
ರಾಯಚೂರು: ತಾಲ್ಲೂಕಿನ ‌ಕಪಗಲ್ ಗ್ರಾಮದ ಸಮೀಪ ಗುರುವಾರ ಶಾಲಾ ವಾಹನ ಹಾಗೂ ಸಾರಿಗೆ ಸಂಸ್ಥೆಯ ಬಸ್‌ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಮಕ್ಕಳು ಸಾವನ್ನಪ್ಪಿ, 15 ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ.

ಮೃತ ವಿದ್ಯಾರ್ಥಿಗಳನ್ನು ಲೊಯಲ್‌ ಶಾಲೆಯ ಸಮರ್ಥ ಅಮರೇಶ (7) ಹಾಗೂ ಶ್ರೀಕಾಂತ ಮಾರೇಶ (12) ಎಂದು ಗುರುತಿಸಲಾಗಿದೆ. ಇನ್ನೂ ಅಪಘಾತದ ತೀವ್ರತೆಗೆ ಒಬ್ಬ ಬಾಲಕ ಹಾಗೂ ಚಾಲನಕನ ಸ್ಥಿತಿ ಗಂಭೀರವಾಗಿದೆ. ಭೀಕರ ಅಪಘಾತದಲ್ಲಿ ಮೂರು ಮಕ್ಕಳ ಕಾಲುಗಳು ತುಂಡಾಗಿವೆ.

ಶಾಲಾ ಮಕ್ಕಳನ್ನು ಕರೆದುಕೊಂಡು ಮಾನ್ವಿಯ ಲೊಯೋಲ್ ಶಾಲೆಗೆ ತೆರಳುತ್ತಿದ್ದ ವಾಹನಕ್ಕೆ ಮಾನ್ವಿ ಪಟ್ಟಣದಿಂದ ರಾಯಚೂರು ಕಡೆಗೆ ತೆರಳುತ್ತಿದ್ದ ಸಾರಿಗೆ ಸಂಸ್ಥೆಯ ಬಸ್ ಡಿಕ್ಕಿ ಹೊಡೆದಿದೆ. ತೀವ್ರವಾಗಿ ಗಾಯಗೊಂಡ ಮೂವರು ಮಕ್ಕಳನ್ನು ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸ್ಥಳಕ್ಕೆ ಜಿಲ್ಲಾಧಿಕಾರಿ ನಿತಿಶ್ ಕೆ ಆಸ್ಪತ್ರೆಗೆ ಭೇಟಿ ನೀಡಿ ಮಕ್ಕಳ ಆರೋಗ್ಯ ವಿಚಾರಿಸಿದರು.

ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಮಕ್ಕಳ ಪಾಲಕರಿಗೆ ತಲಾ ₹ 5 ಲಕ್ಷ ಪರಿಹಾರ ಹಾಗೂ ರಸ್ತೆ ಸಾರಿಗೆ ಸಂಸ್ಥೆಯಿಂದಲೂ ಪರಿಹಾರ ಕೊಡುವ ಭರವಸೆ ನೀಡಿದ್ದಾರೆ ಎಂದು ಜಿಲ್ಲಾಧಿಕಾರಿ ನಿತಿಶ್ ತಿಳಿಸಿದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India ವಿಮಾನ ದುರಂತ: ಮೃತ ನಾಲ್ವರು ಎಂಬಿಬಿಎಸ್‌ ವಿದ್ಯಾರ್ಥಿಗಳು ಇವರೇ

ಕೇರಳದಲ್ಲಿ ಸುರಿದ ಭಾರೀ ಮಳೆಗೆ ಹಲವೆಡೆ ಹಾನಿ, ರೆಡ್‌ ಅಲರ್ಟ್ ಘೋಷಣೆ

NEET result: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಇಲ್ಲಿ ವೀಕ್ಷಣೆ ಮಾಡಿ

ರಾಜ್ಯಕ್ಕೆ ಅನುದಾನ ಬೇಕಿದ್ದರೆ ಸಿಎಂ ಅವರೇ ಪ್ರಧಾನಿ ಜೊತೆ ಮಾತನಾಡಲಿ: ನಿಖಿಲ್ ಕುಮಾರಸ್ವಾಮಿ

Air India AirCrash: ಇನ್ಮುಂದೆ ವಿಮಾನ ಸಂಖ್ಯೆ 171 ಬಳಸದಿರಲು ನಿರ್ಧಾರ

ಮುಂದಿನ ಸುದ್ದಿ
Show comments