ನಾಲ್ಕು ದಿನಗಳ ಹೈದರಾಬಾದ್ ಪ್ರವಾಸಕ್ಕೆ ಶಾಲಾ ಮಕ್ಕಳು

Webdunia
ಶನಿವಾರ, 11 ಡಿಸೆಂಬರ್ 2021 (20:40 IST)
ಪ್ರವಾಸ, ಸಾಂಸ್ಕೃತಿಕ ಕಾರ್ಯಕ್ರಮಗಳನ್ನ ಆಯೋಜನೆ ಮಾಡದಂತೆ ಶಾಲೆಗಳಿಗೆ ಆದೇಶ ಇದ್ದರೂ, ಒಮಿಕ್ರಾನ್ ವೈರಸ್ ಆತಂಕದ ನಡುವೆಯೂ ಜಾಲಹಳ್ಳಿಯ ಕ್ಲೂನಿ ಕಾನ್ವೆಂಟ್ ಶಾಲೆ ಮಕ್ಕಳ ಜೊತೆ ಚೆಲ್ಲಾಟವಾಡುತ್ತಿದೆ. ಒತ್ತಾಯ ಮಾಡಿ ಮಕ್ಕಳನ್ನ ಪ್ರವಾಸಕ್ಕೆ ಕರೆದುಕೊಂಡು ಹೋಗಿರುವ ಜಾಲಹಳ್ಳಿಯಲ್ಲಿರುವ ಪ್ರತಿಷ್ಠಿತ ಕ್ಲೂನಿ ಕಾನ್ವೆಂಟ್ ಶಾಲೆ ಸುಮಾರು 130 ವಿದ್ಯಾರ್ಥಿಗಳನ್ನ ಪ್ರವಾಸಕ್ಕೆ ಕರೆದುಕೊಂಡು ಹೋಗಿದೆ. ಪ್ರತಿ ವಿದ್ಯಾರ್ಥಿಯಿಂದ 10 ಸಾವಿರ ಹಣ ವಸೂಲಿ ಮಾಡಿದ್ದು, ಶಾಲಾ ಮಕ್ಕಳನ್ನು ನಾಲ್ಕು ದಿನಗಳ ಹೈದರಾಬಾದ್ ಪ್ರವಾಸಕ್ಕೆ ಕರೆದುಕೊಂಡು ಹೋಗಿದೆ.
ಸರ್ಕಾರದ ಕೊವಿಡ್ ಮಾರ್ಗಸೂಚಿ ಗಾಳಿಗೆ ತೂರಿ ಕ್ಲೂನಿ ಕಾನ್ವೆಂಟ್ ಶಾಲೆಯು ಮಕ್ಕಳನ್ನು ಪ್ರವಾಸಕ್ಕೆ ಕರೆದುಕೊಂಡು ಹೋಗಿರುವ ಕ್ಲೂನಿ ಕಾನ್ವೆಂಟ್ ಶಾಲೆ ಮೇಲೆ ಬೆಂಗಳೂರು ಉತ್ತರ ತಾಲೂಕು ಬಿಇಒ ಕಮಲಾಕರ್ ಟಿ.ಎನ್. ಅವರು ಕ್ರಮಕ್ಕೆ ಮುಂದಾಗಿದ್ದಾರೆ. ಈ ಮಧ್ಯೆ, ಶಾಲೆ ಪ್ರಾಂಶುಪಾಲರು ಪ್ರವಾಸಕ್ಕೆ ಹೋಗಿರುವುದಾಗಿ ತಪ್ಪು ಒಪ್ಪಿಕೊಂಡಿದ್ದಾರೆ.
ಒಮಿಕ್ರಾನ್ ವೈರಸ್ ಭೀತಿ ನಡುವೆ ಶಾಲೆ ಆಡಳಿತ ಮಂಡಳಿ ವಿದ್ಯಾರ್ಥಿಗಳನ್ನ ಪ್ರವಾಸಕ್ಕೆ ಕರೆದುಕೊಂಡು ಹೋಗಿದ್ದಾರೆ. ಸರ್ಕಾರದ ಆದೇಶ ಉಲ್ಲಂಘನೆ ಮಾಡಿ ವಿದ್ಯಾರ್ಥಿಗಳನ್ನ ಪ್ರವಾಸಕ್ಕೆ ಕರೆದುಕೊಂಡು ಹೋಗಿರುವುದು ತಪ್ಪು. ಸಿಆರ್ ಪಿ ಗೆ ಈ ಕುರಿತು ವರದಿ ಕೊಡುವಂತೆ ಸೂಚನೆ ನೀಡಿದ್ದೇನೆ. ವರದಿ ಬಂದ ನಂತರ ಶಾಲೆ ಮೇಲೆ ಕಠಿಣ ಕ್ರಮಕ್ಕೆ ಶಿಫಾರಸ್ಸು ಮಾಡುವುದಾಗಿ ಬಿಇಒ ಕಮಲಾಕರ್ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಹಾರ ವಿಧಾನಸಭೆ ಚುನಾವಣೆ, ನಾಳೆ ಎನ್‌ಡಿಎ ಪ್ರಣಾಳಿಕೆ ಬಿಡುಗಡೆ

ಮಕ್ಕಳು ಸೇರಿದಂತೆ 17ಮಂದಿಯನ್ನು ಒತ್ತೆಯಾಳಾಗಿ ಇರಿಸಿಕೊಂಡಿದ್ದ ಆರ್ಯ ಗುಂಡೇಟಿಗೆ ಬಲಿ

ನಿಮ್ಮ ಮಗನೇ ಚಿನ್ನ ಕದ್ದಿದ್ದು ಎಂದಿದ್ದಕ್ಕೆ ಜೀವನೇ ತೆಗೆದ್ಬಿಟ್ಟ

ಇವರಿಗಿಂತ, ಇಂದಿರಾ ಗಾಂಧಿಗೆ ಧೈರ್ಯ ಜಾಸ್ತಿಯಾಗಿತ್ತು: ರಾಹುಲ್ ಗಾಂಧಿ ಕಿಡಿ

ಮಗಳ ಶವ ಮುಂದಿಟ್ಟು ಲಂಚಕ್ಕೆ ಬೇಡಿಕೆ: ತಂದೆಯ ಭಾವುಕ ಪೋಸ್ಟ್ ಬೆನ್ನಲ್ಲೇ ಪೊಲೀಸರಿಗೆ ಶಾಕ್‌

ಮುಂದಿನ ಸುದ್ದಿ
Show comments