ಬಿಸಿಯೂಟ ಸೇವಿಸಿದ ಮಕ್ಕಳಿಗೆ ಆಗಿದ್ದೇನು ಗೊತ್ತಾ?

Webdunia
ಗುರುವಾರ, 2 ಆಗಸ್ಟ್ 2018 (14:01 IST)
ಆ ಮಕ್ಕಳು ಎಂದಿನಂತೆ ಶಾಲೆಯಲ್ಲಿ ಬಿಸಿಯೂಟ ಸೇವಿಸಿದ್ದಾರೆ. ಆದರೆ ಮನೆಗೆ ಹೋಗಿದ್ದೇ ತಡ, ವಾಂತಿ-ಬೇಧಿಯಿಂದ ನರಳತೊಡಗಿದರು. ಹೀಗಾಗಿ ಅಸ್ವಸ್ಥ ಮಕ್ಕಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

 ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ  ತಾಲೂಕಿನ ಚಿಲಕಲನೇರ್ಪು ಗ್ರಾಮದ  ಸಬರಮತಿ ಅನುದಾನಿತ ಶಾಲೆಯಲ್ಲಿ ಮಧ್ಯಾಹ್ನದ ಬಿಸಿಯೂಟ ಸೇವಿಸಿದ 28 ಮಕ್ಕಳು ವಾಂತಿ ಭೇದಿಯಿಂದ ಅಸ್ವಸ್ಥಗೊಂಡಿದ್ದಾರೆ. ಬಾಗೇಪಲ್ಲಿ   ತಾಲ್ಲೂಕಿನ ಚೇಳೂರು ಸರ್ಕಾರಿ ಆಸ್ಪತ್ರೆಯಲ್ಲಿ ಹದಿಮೂರು ಮಕ್ಕಳು ಚಿಕಿತ್ಸೆ ಪಡೆಯುತ್ತಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ.  

ಉಳಿದ ಮಕ್ಕಳು ಚಿಂತಾಮಣಿ ಸರ್ಕಾರಿ ಆಸ್ಪತ್ರೆಯಲ್ಲಿ  ಚಿಕಿತ್ಸೆ ಪಡೆಯುತ್ತಿದ್ದಾರೆ. ಮುಖ್ಯ ಶಿಕ್ಷಕರು ಹಾಗೂ ಶಿಕ್ಷಕಿಯರು ಆಸ್ಪತ್ರೆಯಲ್ಲಿದ್ದು ಮೇಲು ಉಸ್ತುವಾರಿ ನೋಡಿಕೊಳ್ಳುತ್ತಿದ್ದಾರೆ. ಶಾಲೆಯಲ್ಲಿ ಒಂದರಿಂದ ಏಳನೇ ತರಗತಿಯವರೆಗೆ  110 ಮಕ್ಕಳು ವ್ಯಾಸಂಗ ಮಾಡುತ್ತಿದ್ದು, ಊಟ ಮಾಡಿದ ನಂತರ ಶಾಲೆಯಲ್ಲಿ ಇರುವಾಗ ಯಾವುದೇ ರೀತಿಯ ಸಮಸ್ಯೆ ಇರಲಿಲ್ಲ. ಮನೆಗಳಿಗೆ ಮಕ್ಕಳು ತೆರಳಿದ ನಂತರ ವಾಂತಿ ಬೇಧಿ ಕಾಣಿಸಿಕೊಂಡಿದೆ. ಹೀಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಸ್ಪತ್ರೆಯಲ್ಲಿ ಸೂಕ್ತ ಸ್ಥಳ ಇಲ್ಲದೇ, ಒಂದೇ ಹಾಸಿಗೆ ಮೇಲೆ ಇಬ್ಬರು- ಮೂವರು ಮಕ್ಕಳನ್ನು ಮಲಗಿಸಿ ಚಿಕಿತ್ಸೆ ನೀಡುತ್ತಿದ್ದ ದೃಶ್ಯ ಕಂಡು ಬಂದಿದೆ.





 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆರ್‌ಎಸ್‌ ಪಥಸಂಚಲನಕ್ಕೆ ಹೈಕೋರ್ಟ್ ಅನುಮತಿ: ಹಕ್ಕು ಕಸಿಯಲು ಹೊರಟವರಿಗೆ ಚಾಟಿ ಎಂದ ಬಿಜೆಪಿ

ಚಿತ್ತಾಪುರದಲ್ಲಿ ಆರ್‌ಎಸ್‌ಎಸ್‌ ಪಥಸಂಚಲನಕ್ಕೆ ಅನುಮತಿ ವಿಚಾರ: ಹೈಕೋರ್ಟ್ ಮಹತ್ವದ ಸೂಚನೆ

ಕದನ ವಿರಾಮಕ್ಕೆ ಒಪ್ಪಿದ ಪಾಕಿಸ್ತಾನ–ಅಫ್ಗಾನಿಸ್ತಾನ: ಮಧ್ಯಸ್ಥಿಕೆ ವಹಿಸಿದ್ದ ಕತಾರ್ ಹೇಳಿದ್ದೇನು

ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಮುಂದಿನ ನಾಲ್ಕು ದಿನ ಮಳೆಯ ಅಬ್ಬರ: ಮೀನುಗಾರರಿಗೆ ವಾರ್ನಿಂಗ್‌

ಕೆಲಸ ಹುಡುಕಿ ನಗರಕ್ಕೆ ಬಂದಿದ್ದ ಯುವಕ ಅನುಮಾನಸ್ಪದ ಸಾವು

ಮುಂದಿನ ಸುದ್ದಿ
Show comments